AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿದ ಅನಾಹುತ: ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೈಮೇಲೆ ಬಂದ ಆಕಳು

ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅನಾಹುತವೊಂದು ತಪ್ಪಿದೆ. ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ನುಗ್ಗಿದ ಆಕಳು ಸಚಿವರ ಮೈಮೇಲೆ ಬಂದಿದೆ. ಸಚಿವ ಬಿ.ಸಿ ಪಾಟೀಲ್ ಮತ್ತು ಅವರ ಪಕ್ಕದಲ್ಲಿದ್ದ ಸಚಿವೆ ಶಶಿಕಲಾ ಜೊಲ್ಲೆ ತಕ್ಷಣ ಎಚ್ಚೆತ್ತುಕೊಂಡು ಹಿಂದೆ ಸರಿದಿದ್ದಾರೆ.

ತಪ್ಪಿದ ಅನಾಹುತ: ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೈಮೇಲೆ ಬಂದ ಆಕಳು
ತಪ್ಪಿದ ಅನಾಹುತ: ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ಕೃಷಿ ಸಚಿವರ ಮೈಮೇಲೆ ಬಂದ ಆಕಳು
TV9 Web
| Edited By: |

Updated on:Sep 28, 2021 | 12:03 PM

Share

ಬೆಳಗಾವಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅನಾಹುತವೊಂದು ತಪ್ಪಿದೆ. ಗೋವಿಗೆ ಕಾಳು ತಿನ್ನಿಸುವಾಗ ಏಕಾಏಕಿ ಬೆದರಿ ನುಗ್ಗಿದ ಆಕಳು ಸಚಿವರ ಮೈಮೇಲೆ ಬಂದಿದೆ. ಸಚಿವ ಬಿ.ಸಿ ಪಾಟೀಲ್ ಮತ್ತು ಅವರ ಪಕ್ಕದಲ್ಲಿದ್ದ ಸಚಿವೆ ಶಶಿಕಲಾ ಜೊಲ್ಲೆ ತಕ್ಷಣ ಎಚ್ಚೆತ್ತುಕೊಂಡು ಹಿಂದೆ ಸರಿದಿದ್ದಾರೆ. ಗೋವು ಹಿಡಿಯೋಕೆ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಪ್ರವೀಣ್ ಶಾ ಮನೆಯಲ್ಲಿದ್ದ ಗೋವಿಗೆ ದವಸ ತಿನ್ನಿಸಲು ಸಚಿವದ್ವಯರು ಮುಂದಾದಾಗ ಈ ಪ್ರಸಂಗ ನಡೆದಿದೆ. ಈ ವೇಳೆ ಆಕಳು ನಾಲ್ಕು ಜನರಿಗೆ ತಿವಿದಿದ್ದು, ಕುರ್ಚಿಗಳು ಒಡೆದು ಹೋಗಿವೆ.

ದವಸ ಹಿಡಿದು ಗೋವಿನ ಮುಂದೆ ಸಚಿವ ಬಿ.ಸಿ ಪಾಟೀಲ್ ಮುಂದೆ ಹೋಗುತ್ತಿದ್ದಂತೆ ಗೋವು ಬೆದರಿದೆ. ಅಲ್ಲಿದ್ದ ನಾಲ್ಕಾರು ಮಂದಿ ಹರಸಾಹಸ ಪಟ್ಟು ಗೋವನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಸಚಿವದ್ವಯರು ಗೋವಿನ ಬೆದರುವಿಕೆಯಿಂದ ದಂಗಾಗಿ ಕೆಲಕಾಲ ವಿಚಲಿತರಾದರು. ಸಚಿವ ಬಿ.ಸಿ ಪಾಟೀಲ್‌ ಇಂದು ರೈತರೊಂದಿಗೆ ಒಂದು ದಿನ ವಿಶೇಷ ಕಾರ್ಯಕ್ರಮದ ಹಿನ್ನೆಲೆ ಅಕ್ಕೋಳ ಗ್ರಾಮ ಆಗಮಿಸಿದ್ದರು.

ಇದನ್ನೂ ಓದಿ: ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ… ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!

ಇದನ್ನೂ ಓದಿ: Minister BC Patil : ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್

(cow attack on agriculture minister bc patil in nipani taluk belagavi)

Published On - 11:57 am, Tue, 28 September 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ