ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ
ವಿಧಾನ ಪರಿಷತ್

Updated on: Feb 02, 2021 | 8:17 PM

ಬೆಂಗಳೂರು: ಪಶು ಸಂಗೋಪನಾ ಸಚಿವರು ಪರಿಷತ್‌ನಲ್ಲಿ ಹಾಜರಾಗದ ಕಾರಣ ಇಂದು ವಿಧಾನಪರಿಷತ್‌ನಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಆಗಿಲ್ಲ.

ನಾಳೆ ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಲ್‌ ಮಂಡನೆ ಮಾಡುತ್ತೇವೆ ಎಂದು  ಪರಿಷತ್‌ ಸಭಾನಾಯಕ ಕೋಟ ಶ್ರೀನಿವಾಸಪೂಜಾರಿ ಸಭಾಪತಿಗೆ ಮಾಹಿತಿ  ನೀಡಿದ್ದಾರೆ. ಕಾರಣಾಂತರಗಳಿಂದ ಕೃಷಿ ಸಚಿವ ಪ್ರಭು ಬಿ. ಚೌಹಾಣ್​ ಅಧಿವೇಶನಕ್ಕೆ ಬಂದಿರಲಿಲ್ಲ.

ಇನ್ನು, ವಿಧಾನಸಭೆಯಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ವಂಚಕ ಕಂಪನಿಗಳ ಮೇಲೆ ನಿಗಾ ಇಡಲು ಈ ವಿಧೇಯಕ ಸಹಕಾರಿಯಾಗಲಿದೆ. ಹಣಕಾಸು ಸಂಸ್ಥೆ ಮುಚ್ಚಿದಾಗ ಠೇವಣಿದಾರರಿಗೆ ನ್ಯಾಯ ಸಿಗಲಿದೆ.

‘20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ.. ಶೇಮ್ ಶೇಮ್ ಕಾಂಗ್ರೆಸ್’

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us