AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಭಾವನಾತ್ಮಕ ವಿಷಯ, ಲವ್​ ಜಿಹಾದ್​ ಕಾಯ್ದೆಯಲ್ಲಿ ಏನಿದೆಯೋ ಗೊತ್ತಿಲ್ಲ: ಯು.ಟಿ.ಖಾದರ್​

ಜನರ ಸಮಸ್ಯೆಗಳಿಗೆ ಗಮನ ಕೊಡುವುದು ಬಿಟ್ಟು ಲವ್ ಜಿಹಾದ್ ನಿಷೇಧ, ಗೋಹತ್ಯೆ ತಡೆ ಕಾಯ್ದೆ ತರಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಯು.ಟಿ.ಖಾದರ್​ ಆಕ್ಷೇಪಿಸಿದರು.

ಗೋಹತ್ಯೆ ನಿಷೇಧ ಭಾವನಾತ್ಮಕ ವಿಷಯ, ಲವ್​ ಜಿಹಾದ್​ ಕಾಯ್ದೆಯಲ್ಲಿ ಏನಿದೆಯೋ ಗೊತ್ತಿಲ್ಲ: ಯು.ಟಿ.ಖಾದರ್​
ಯು.ಟಿ.ಖಾದರ್​
Lakshmi Hegde
| Edited By: |

Updated on: Dec 07, 2020 | 1:29 PM

Share

ಬೆಂಗಳೂರು: ಜನರಿಗೆ ರೇಷನ್​ ಕಾರ್ಡ್ ಸಿಗುತ್ತಿಲ್ಲ, ಪರಿಹಾರ ಕೊಡುತ್ತಿಲ್ಲ. ಉದ್ಯೋಗ ಸೃಷ್ಟಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದರೆ ಇದನ್ನೆಲ್ಲಾ ಬಿಟ್ಟು ಲವ್ ಜಿಹಾದ್​, ಗೋಹತ್ಯೆ ನಿಷೇಧ ಕಾಯ್ದೆ ತರಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಯು.ಟಿ.ಖಾದರ್​ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿ, ಈಗಾಗಲೇ ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ತಂದಿದ್ದಾರೆ. ಈಗ ಲವ್​ ಜಿಹಾದ್ ನಿಷೇಧ​, ಗೋಹತ್ಯೆ ತಡೆ ಕಾಯ್ದೆ ಜಾರಿ ಮಾಡಲು ಹೊರಟಿದ್ದಾರೆ. ಗೋಹತ್ಯೆ ನಿಷೇಧ ಭಾವನಾತ್ಮಕ ವಿಚಾರ ಅಲ್ಲವೇ ಎಂದು ಖಾದರ್ ಪ್ರಶ್ನಿಸಿದರು.

ಅಷ್ಟಕ್ಕೂ ಗೋ ಹತ್ಯೆ ನಿಷೇಧ ಕರ್ನಾಟಕದಲ್ಲಿ ಮಾತ್ರ ಯಾಕೆ? ಗೋವಾ, ಮಿಜೋರಾಂ, ಕೇರಳದಲ್ಲಿ ತರಲು ಕೇಂದ್ರ ಸರ್ಕಾರವೇಕೆ ಮನಸು ಮಾಡುತ್ತಿಲ್ಲ? ಎಲ್ಲದಕ್ಕೂ ಒನ್ ನೇಷನ್ ಎನ್ನುವವರು ಈ ವಿಚಾರಕ್ಕೂ ಅನ್ವಯಿಸಲಿ. ಎಲ್ಲ ಕಡೆ ಒಂದೇ ಕಾನೂನು ತರಲಿ. ಅಲ್ಲೆಲ್ಲ ತಿನ್ನಲು ಬಿಟ್ಟು, ಇಲ್ಲಿ ಕಾನೂನು ತರುತ್ತೇವೆ ಅಂದ್ರೆ ಹೇಗೆ ಎಂದು ಕೇಳಿದರು.

ಲವ್​ ಜಿಹಾದ್ ಕಾಯ್ದೆ ತರುತ್ತೇವೆ ಎನ್ನುತ್ತಿದ್ದಾರೆ. ಅದರಲ್ಲಿ ಏನಿದೆ ಎಂಬುದನ್ನು ಮೊದಲು ನೋಡಬೇಕಲ್ಲ. ಅಷ್ಟಕ್ಕೂ ಜಿಹಾದ್ ಅನ್ನೋದು ಅರೆಬಿಕ್ ಶಬ್ದ. ಇವರು ಯಾಕೆ ಅದನ್ನು ಬಳಸುತ್ತಾರೋ ಗೊತ್ತಾಗುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಈ ಬಾರಿ ಲವ್ ಜಿಹಾದೂ ಇಲ್ಲ, ಡವ್ ಜಿಹಾದೂ ಇಲ್ಲ.. ‘ಸಾಮ್ರಾಟ್​’ ಅಶೋಕ್​ ಸ್ಪಷ್ಟನೆ

ಇಂದಿನಿಂದ 7 ದಿನಗಳ ಕಾಲ ಚಳಿಗಾಲದ ಅಧಿವೇಶನ: ಮಂಡನೆಯಾಗತ್ತಾ ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆ?

Follow Us
Lakshmi Hegde
Lakshmi Hegde
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ