Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ; ಪ್ರತಿಭಟನೆ ಬಿಡದ ಕಾಂಗ್ರೆಸ್​

ಈ ಮಸೂದೆಯ ರಾಜ್ಯಪಾಲರ ಅಂಕಿತದೊಂದಿಗೆ ಕಾಯ್ದೆಯಾಗಿ ಜಾರಿಯಾದ ನಂತರ ಗೋ ಹತ್ಯೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ ಮತ್ತು ₹ 5ರಿಂದ 10 ಲಕ್ಷ ದಂಡ ವಿಧಿಸಲು ಅವಕಾಶವಿದೆ.

ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ; ಪ್ರತಿಭಟನೆ ಬಿಡದ ಕಾಂಗ್ರೆಸ್​
ಸಾಂದರ್ಭಿಕ ಚಿತ್ರ
Follow us
Lakshmi Hegde
| Updated By: sandhya thejappa

Updated on:Dec 10, 2020 | 12:36 PM

ಬೆಂಗಳೂರು: ಬಹುಚರ್ಚಿತ ಗೋ ಹತ್ಯೆ ನಿಷೇಧ ವಿಧೇಯಕ ಇಂದು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಈ ಮಸೂದೆಯ ರಾಜ್ಯಪಾಲರ ಅಂಕಿತದೊಂದಿಗೆ ಕಾಯ್ದೆಯಾಗಿ ಜಾರಿಯಾದ ನಂತರ ಗೋ ಹತ್ಯೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ ಮತ್ತು ₹ 5ರಿಂದ 10 ಲಕ್ಷ ದಂಡ ವಿಧಿಸಲು ಅವಕಾಶವಿದೆ.

ವಿಧೇಯಕಕ್ಕೆ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತು. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸದನದ ಬಾವಿಗೆ ಇಳಿದು ಪ್ರತಿಭಟನೆಯನ್ನೂ ನಡೆಸಿತು. ಗೋವಾದಲ್ಲೂ ಬಿಜೆಪಿ ಸರ್ಕಾರವಿದೆ. ಆದರೆ ಅಲ್ಲಿ ಇಲ್ಲದ ಗೋ ಹತ್ಯೆ ನಿಷೇಧ ಇಲ್ಲೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಎಲ್ಲ ಗದ್ದಲ, ಗಲಾಟೆ, ವಿರೋಧದ ನಡುವೆಯೂ ಮಸೂದೆ ಅಂಗೀಕಾರ ಆಗಿ, ಸ್ಪೀಕರ್​ ಉಳಿದ ಕಾರ್ಯಕಲಾಪ ಕೈಗೆತ್ತಿಕೊಂಡರೂ ಕಾಂಗ್ರೆಸ್​ ಪ್ರತಿಭಟನೆ ನಿಲ್ಲಿಸಲಿಲ್ಲ. ವಿಧೇಯಕದ ಪ್ರಸ್ತಾವದಲ್ಲಿ ಗೋ ಹತ್ಯೆಯ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆಯ ಪ್ರಸ್ತಾವವಿತ್ತು. ಆದರೆ ಇಂದು ಮಂಡನೆಯಾದ ದಾಖಲೆಯಲ್ಲಿ ಇದು 7 ವರ್ಷಕ್ಕೆ ಏರಿಕೆಯಾಗಿದೆ. ಅದೇ ರೀತಿ ಕನಿಷ್ಠ ದಂಡವನ್ನು ₹ 50 ಸಾವಿರದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಗೋ ಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಭರ್ಜರಿ ಸದ್ದು ಮಾಡಿತ್ತು. ವಿಪಕ್ಷಗಳಂತೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದೇ ಬಂತು. ಆದರೆ ಎಲ್ಲ ವಿರೋಧದ ನಡುವೆಯೂ ಇಂದು ವಿಧೇಯಕಕ್ಕೆ ವಿಧಾನಸಭೆಯ ಅನುಮೋದನೆ ದೊರೆತಿದೆ.

ಸದ್ಯ ವಿಧಾನಸಭೆಯಲ್ಲಿ ಅಂಗೀಕಾರ ಆಗಿರುವ ಗೋಹತ್ಯೆ ನಿಷೇಧ ವಿಧೇಯಕ ವಿಧಾನ ಪರಿಷತ್​ನಲ್ಲೂ ಅಂಗೀಕಾರವಾಗಿ, ರಾಜ್ಯಪಾಲರ ಅನುಮೋದನೆ ಪಡೆದ ಬಳಿಕ ಕಾಯ್ದೆಯಾಗಲಿದೆ.

ಕೊವಿಡ್ ತಡೆಗೆ ಬಿಗಿ ಕ್ರಮ: ರಾಜ್ಯ ಸರ್ಕಾರ ಜಾರಿಗೊಳಿಸಿತು ಹೊಸ ನೀತಿ, ಏನದು?

Published On - 6:54 pm, Wed, 9 December 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ