AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಪ್ರತಿ ಬಾರಿ ದೆಹಲಿಗೆ ಬಂದಾಗ ಸುದ್ದಿ ಆಗುತ್ತೆ; ಇದೊಂದು ಖಾಸಗಿ ಭೇಟಿ, ರಾಜಕೀಯ ಉದ್ದೇಶವಿಲ್ಲ: ಸಿ ಪಿ ಯೋಗೇಶ್ವರ್

ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದೇನೆಂದು ಸಿ.ಪಿ. ಯೋಗೇಶ್ವರ್ ನೀಡಿದ ಹೇಳಿಕೆಗೆ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್‌ರದ್ದು ನಕಲಿ ಪರೀಕ್ಷೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಪ್ರತಿ ಬಾರಿ ದೆಹಲಿಗೆ ಬಂದಾಗ ಸುದ್ದಿ ಆಗುತ್ತೆ; ಇದೊಂದು ಖಾಸಗಿ ಭೇಟಿ, ರಾಜಕೀಯ ಉದ್ದೇಶವಿಲ್ಲ: ಸಿ ಪಿ ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
TV9 Web
| Edited By: |

Updated on: Jun 26, 2021 | 7:26 PM

Share

ದೆಹಲಿ: ನಾನು ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಬಂದಿದ್ದೇನೆ. ನಾನು ಪ್ರತಿ ಬಾರಿ ದೆಹಲಿಗೆ ಬಂದಾಗ ಸುದ್ದಿ ಆಗುತ್ತೆ. ಆದರೆ, ಇದೊಂದು ಖಾಸಗಿ ಭೇಟಿ. ನಾನು ದೆಹಲಿಗೆ ಬಂದಿರುವುದಕ್ಕೆ ರಾಜಕೀಯ ಉದ್ದೇಶವಿಲ್ಲ ಎಂದು ದೆಹಲಿಯಲ್ಲಿ ಇಂದು (ಜೂನ್ 26) ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುವ ವಿಚಾರವಾಗಿ ಪ್ರಶ್ನೆ ಕೇಳಿದಾಗ, ಈ ಬಗ್ಗೆ ನಿನ್ನೆ ಹೇಳಿದ್ದೇನೆ ಮತ್ತೇನೂ ಹೇಳಲ್ಲ ಎಂದು ಯೋಗೇಶ್ವರ್ ತಿಳಿಸಿದ್ದಾರೆ. ಬಳಿಕ, ಸಂಜೆ 4 ಗಂಟೆಗೆ ವಿಮಾನದ ಮೂಲಕ‌ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದೇನೆಂದು ಸಿ.ಪಿ. ಯೋಗೇಶ್ವರ್ ನೀಡಿದ ಹೇಳಿಕೆಗೆ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್‌ರದ್ದು ನಕಲಿ ಪರೀಕ್ಷೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಿಜವಾದ ಪರೀಕ್ಷೆ ಬರೆದವ್ರು ಫೇಲಾಗಿದ್ದಾರೆ. ನಕಲಿ ಪರೀಕ್ಷೆ ಬರೆದವರು ಆತ್ಮಾವಲೋಕನ ಮಾಡಿಕೊಳ್ಳಲಿ. ಪರೀಕ್ಷೆ ಬರೆದವರಿಗೆ ಅವರ ಹಣೆಬರಹ ಗೊತ್ತಿರುತ್ತೆ. ಎಷ್ಟು ಮಾರ್ಕ್ಸ್ ಬರತ್ತೆ ಅಂತಾ ಅವರಿಗೆ ಗೊತ್ತಿರುತ್ತೆ ಎಂದು ಹೇಳಿದ್ದಾರೆ. ಸಿಎಂಗೆ ಈಗಾಗಲೇ ವರಿಷ್ಠರು ಒಳ್ಳೇ ಅಂಕ ಕೊಟ್ಟಿದ್ದಾರೆ. ಒಳ್ಳೆಯ ಕೆಲಸದ ಆಧಾರದ ಮೇಲೆ ಅಂಕ ಕೊಟ್ಟಿದ್ದಾರೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆ ಮಾಡಿ ಚರ್ಚಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆಂದೂ ಹೇಳಿದ್ದಾರೆ. ಸೂರ್ಯ, ಚಂದ್ರ ಇರುವವರೆಗೆ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಬಿಎಸ್‌ವೈ ನೇತೃತ್ವದಲ್ಲೇ ನಡೆಯುತ್ತೆ. ಬಿಜೆಪಿ ಸಂಸದ ರಾಘವೇಂದ್ರಗೆ ಕೇಂದ್ರ ಸಚಿವರನ್ನಾಗಿ ಮಾಡಿ. ಸಿಎಂ ಸ್ಥಾನದಿಂದ ಬಿಎಸ್​ವೈ ಕೆಳಗಿಳಿಸುವ ವಿಚಾರ ಊಹಾಪೋಹ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವಾರದಿಂದಲೇ ಪ್ರವಾಸಿ ಸ್ಥಳಗಳು ಓಪನ್ : ಸಚಿವ ಸಿ ಪಿ ಯೋಗೇಶ್ವರ್ ಘೋಷಣೆ

ಕೊವಿಡ್ ನಿಯಮ ಉಲ್ಲಂಘಿಸಿದ ಸಚಿವ ಸಿ.ಪಿ.ಯೋಗೇಶ್ವರ್; ದೇವಸ್ಥಾನದಲ್ಲಿ ಕೇಕ್ ಕತ್ತರಿಸಿ ಪತ್ನಿ ಹುಟ್ಟುಹಬ್ಬ ಆಚರಣೆ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ