Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾದವಿವಾದ ಮುಗಿದಿದೆ, ತೀರ್ಪು ನಿರೀಕ್ಷೆಯಲ್ಲಿದ್ದೇವೆ; ಸಿ.ಪಿ.ಯೋಗೇಶ್ವರ್

ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯೋಗೇಶ್ವರ್, ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಿದ್ದಾರೆ.

ವಾದವಿವಾದ ಮುಗಿದಿದೆ, ತೀರ್ಪು ನಿರೀಕ್ಷೆಯಲ್ಲಿದ್ದೇವೆ; ಸಿ.ಪಿ.ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
Follow us
TV9 Web
| Updated By: sandhya thejappa

Updated on:Jun 29, 2021 | 11:44 AM

ಕಲಬುರಗಿ: ನಮ್ಮಲ್ಲಿ ವಾದವಿವಾದ ಮುಗಿದಿದೆ. ತೀರ್ಪು ನಿರೀಕ್ಷೆಯಲ್ಲಿದ್ದೇವೆ ಎಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ಕೊರೊನಾ ಸೋಂಕಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದಂತೆ, ನಮ್ಮ ವರಿಷ್ಠರು ಮಾರ್ಗಸೂಚಿ ಕೊಡುವ ಆಶಾಭಾವನೆ ಇದೆ. ನನ್ನ ಭಾವನೆಗಳನ್ನು ಹೈಕಮಾಂಡ್ ಮುಂದೆ ಹೇಳಿದ್ದೇನೆ. ತೀರ್ಪು ಏನು ಬರುತ್ತದೆ ಎಂದು ಕಾಯೋಣವೆಂದು ಯೋಗೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯೋಗೇಶ್ವರ್, ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ ಎಂದಿದ್ದಾರೆ.

ನಂತರ ಮಾತನಾಡಿದ ಅವರು ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಆಗುವ ಅವಕಾಶ ಕೊಡಲ್ಲ. ಡಿ.ಕೆ.ಶಿವಕುಮಾರ್ ಬಹಳಷ್ಟು ಕನಸು ಕಾಣುತ್ತಿದ್ದಾರೆ. ಡಿ.ಕೆ.ಶಿವಕುಮಾರ್ಗೆ ಶಾಸಕರ ಬೆಂಬಲ ಇದ್ದಂಗೆ ಕಾಣಲ್ಲ. ಕಾಂಗ್ರೆಸ್​ನಲ್ಲಿ ದಲಿತ ಸಿಎಂ ಆಗಬೇಕೆಂದು ಪ್ರಯತ್ನ ನಡೆಯುತ್ತಿದೆ. ಕಳೆದ ಸರ್ಕಾರದಲ್ಲೂ ಇಂತಹದೊಂದು ಪ್ರಯತ್ನ ನಡೆದಿತ್ತು. 70 ವರ್ಷಗಳಿಂದ ದಲಿತ ಸಮುದಾಯ ಕಾಂಗ್ರೆಸ್ ಪರ ಇತ್ತು. ಅವರಿಗೆ ಅನ್ಯಾಯ ಆಗಿದೆ ಎಂಬ ಧ್ವನಿ ಪ್ರಾರಂಭವಾಗಿದೆ. ಇನ್ನೆರಡು ವರ್ಷದ ಬಳಿಕ ಏನಾಗುತ್ತೋ ಕಾದು ನೋಡೋಣ ಎಂದು ಸಚಿವರು ಹೇಳಿದರು.

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಚಿವ ಯೋಗೇಶ್ವರ್ ಆಗಮಿಸುತ್ತಿದ್ದಾರೆ. ನಗರದ ಹೊರ ಭಾಗದ ಭೂತನಾಳ ಕೆರೆಯ ಬಳಿ ಪ್ರವಾಸೋಧ್ಯಮ ಇಲಾಖೆಯ ತ್ರೀ ಸ್ಟಾರ್ ಹೊಟೇಲ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಹಾಗೂ ನಗರದ ಗಗನ್ ಮಹಲ್​ನಲ್ಲಿ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಕಾಮಗಾರಿಗಳಿಗೆ ಭೂಮಿ ‌ಪೂಜೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ

ಯಡಿಯೂರಪ್ಪ ಸಿಎಂ ಆಗಲು ನನ್ನ ಕೊಡುಗೆಯೂ ಇದೆ: ಸಚಿವ ಸಿ.ಪಿ.ಯೋಗೇಶ್ವರ್

ದೆಹಲಿಯಲ್ಲಿ ಇಂದು ರಾಹುಲ್ ಗಾಂಧಿ, ಪ್ರಿಯಾಂಕಾರನ್ನು ಭೇಟಿಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

(CP Yogeshwar says argument is over but Awaiting judgment in Kalaburagi)

Published On - 11:40 am, Tue, 29 June 21

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ