AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ; ಸಚಿವ ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದು ಉತ್ತರಕ್ಕಾಗಿ ನಾನು ಅಂಜನಾದ್ರಿಗೆ ಭೇಟಿ ನೀಡಿಲ್ಲ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದ ಯೋಗೇಶ್ವರ್, ಪರೀಕ್ಷೆ ಫಲಿತಾಂಶ ಯಾವಾಗ ಬರತ್ತದೆ ಎಂದು ಗೊತ್ತಿಲ್ಲ. ದೊಡ್ಡವರು ತೀರ್ಮಾನ ಮಾಡುತ್ತಾರೆ ಎಂದರು. ನಾನು, ಬಸನಗೌಡ ಪಾಟೀಲ್ ಯತ್ನಾಳ್ ಸಮಕಾಲೀನರು. ಹೀಗಾಗಿ ಅವರ ಕ್ಷೇತ್ರಕ್ಕೆ ಹೋಗಿ ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.

ಬಿಎಸ್​ವೈರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ; ಸಚಿವ ಸಿ.ಪಿ.ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
Follow us
TV9 Web
| Updated By: sandhya thejappa

Updated on:Jun 30, 2021 | 10:54 AM

ಕೊಪ್ಪಳ: ಯಡಿಯೂರಪ್ಪ ಬೀಳಿಸಲು ರಾಜಕೀಯ ವಿರೋಧಿಗಳು ಒಂದಾಗುತ್ತೀರಾ ಎಂದು ಟಿವಿ9 ಕೇಳಿದ ಪ್ರಶ್ನೆಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಟಾರ್ಗೆಟ್ ಮಾಡಿದರೆ ನಾವೇ ಸುಟ್ಟು ಹೋಗ್ತೀವಿ ಎಂದು ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ಯಡಿಯೂರಪ್ಪ ಪದಚ್ಯುತಿ ಮಾಡುವ ಕೆಲಸ ಮಾಡುತ್ತಿಲ್ಲ. ನಮ್ಮ ಆಂತರಿಕ ಸಮಸ್ಯೆ ಹೇಳಿಕೊಳ್ಳಲು ಹೋಗುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಎಂದಿಗೂ ರಾಜಕೀಯ ವಿರೋಧಿಗಳೇ ಎಂದು ತಿಳಿಸಿದರು.

ಪರೀಕ್ಷೆ ಬರೆದು ಉತ್ತರಕ್ಕಾಗಿ ನಾನು ಅಂಜನಾದ್ರಿಗೆ ಭೇಟಿ ನೀಡಿಲ್ಲ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದ ಯೋಗೇಶ್ವರ್, ಪರೀಕ್ಷೆ ಫಲಿತಾಂಶ ಯಾವಾಗ ಬರತ್ತದೆ ಎಂದು ಗೊತ್ತಿಲ್ಲ. ದೊಡ್ಡವರು ತೀರ್ಮಾನ ಮಾಡುತ್ತಾರೆ ಎಂದರು. ನಾನು, ಬಸನಗೌಡ ಪಾಟೀಲ್ ಯತ್ನಾಳ್ ಸಮಕಾಲೀನರು. ಹೀಗಾಗಿ ಅವರ ಕ್ಷೇತ್ರಕ್ಕೆ ಹೋಗಿ ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿರುವುದು ನನಗೆ ಗೊತ್ತಿಲ್ಲ. ಜಾರಕಿಹೊಳಿ ನನಗೆ ಸಿಕ್ಕಿಲ್ಲ. ಆದರೆ ಸಂಪರ್ಕದಲ್ಲಿದ್ದಾರೆ. ಅವರಿಗೆ ಬಿಜೆಪಿಯಲ್ಲಿ ಯಾರು ಅನ್ಯಾಯ ಮಾಡಿದ್ದಾರೆ ಎಂಬುವದನ್ನು ಅವರ ಬಳಿಯೇ ಕೇಳಬೇಕು ಎಂದು ಸಚಿವರು ತಿಳಿಸಿದರು.

ಅಂಜನಾದ್ರಿಗೆ ದೇಶದ್ಯಾಂತ ಪ್ರವಾಸಿಗರ ದಂಡು ಬರುತ್ತಿದೆ. ಇದರ ಸಂಪೂರ್ಣ ಅಭಿವೃದ್ದಿ ಆಗಬೇಕಿದೆ. ಹನುಮ ಹುಟ್ಟಿದ್ದು ಇಲ್ಲೆ ಎನ್ನುವುದಕ್ಕೆ ಅನೇಕ ದಾಖಲೆಗಳಿವೆ. ಎಲ್ಲ ಪುರಾವೆಗಳು, ಕುರುಹುಗಳಿವೆ. ಟಿಟಿಡಿ ಅವರ ವಾದ ಇರಬಹುದು. ಆದರೆ ಅಂಜನಾದ್ರಿನೇ ಹನುಮ ಹುಟ್ಟಿದ ಮೂಲ ಸ್ಥಳ. ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಯೋಚನೆ ಮಾಡುತ್ತಿದೆ. ಇದಕ್ಕೆ ಸಣ್ಣ ಪುಟ್ಟ ಹಣ ಸಾಲಲ್ಲ. ಪ್ರವಾಸೋದ್ಯಮ, ಧಾರ್ಮಿಕ ದೃಷ್ಟಿಯಿಂದ ಇದು ಮಹತ್ವದ ಕ್ಷೇತ್ರ ಎಂದು ಯೋಗೇಶ್ವರ್ ಅಭಿಪ್ರಾಯಪಟ್ಟರು.

ನಿಯಮ ಉಲ್ಲಂಘಿಸಿ ದೇವಾಲಯಕ್ಕೆ ಭೇಟಿ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಸಚಿವ ಸಿ.ಪಿ.ಯೋಗೇಶ್ವರ್ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ಕೊರೊನಾ ಹಿನ್ನೆಲೆ ಜಿಲ್ಲಾಡಳಿತ ದೇವಾಲಯಕ್ಕೆ ಜನರ ಭೇಟಿಗೆ ನಿಷೇಧ ಹೇರಿತ್ತು. ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ ಸಿ.ಪಿ.ಯೋಗೇಶ್ವರ್ ದೇವಾಲಯಕ್ಕೆ ಹೋಗಿದ್ದಾರೆ. ಇವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಇದನ್ನೂ ಓದಿ

Coronavirus cases in India: 45,951 ಹೊಸ ಕೊವಿಡ್ ಪ್ರಕರಣ ಪತ್ತೆ, 5.57 ಲಕ್ಷಕ್ಕೆ ಇಳಿದ ಸಕ್ರಿಯ ಪ್ರಕರಣ

ಹೃದಯವೇ ಇಲ್ಲದೆ 555 ದಿನ ಕಳೆದ ಪುಣ್ಯಾತ್ಮ; ಕೃತಕ ಹೃದಯ ಹೊತ್ತು ದಾನಿಗಳಿಗೆ ಕಾದವನು ಕೊನೆಗೂ ಗೆದ್ದೇಬಿಟ್ಟ

(CP Yogeshwar says if BS Yediyurappa is targeted we will burn ourselves in koppal)

Published On - 10:53 am, Wed, 30 June 21

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ