ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಇದೇ ಶಕ್ತಿ ಪ್ರದರ್ಶನಕ್ಕಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದಾಳ ಉರುಳಿಸಿದ್ದರು. ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಕರೆತರುವಲ್ಲಿ ಅವರ ಆಪರೇಷನ್‌ ಯಶಸ್ವಿಯಾಗಿದೆ. ಇದೀಗ ದಳಪತಿಗಳ ಕೋಟೆಯಲ್ಲಿ ಪವರ್ ಶೋ ನಡೆಸಿ, ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ
ಕಾಂಗ್ರೆಸ್ ರೋಡ್ ಶೋ
Edited By:

Updated on: Oct 24, 2024 | 2:51 PM

ಚನ್ನಪಟ್ಟಣ, ಅಕ್ಟೋಬರ್ 24: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.

ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ಱಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಱಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಱಲಿಯಲ್ಲಿ ಪಾಲ್ಗೊಂಡರು.

ರೋಡ್‌ ಶೋ ವೇಳೆ ಹಿಂದೆ ನಿಂತಿದ್ದ ಸಿಪಿ ಯೋಗೇಶ್ವರ್‌ರನ್ನ ಗಮನಿಸಿದ ಸಿಎಂ ಮುಂದೆ ಕರೆದರು. ಈ ವೇಳೆ, ‘ಇರಲಿ ಪರವಾಗಿಲ್ಲ ನಿಲ್ಲಿ ಸರ್’ ಅಂತಾ ಯೋಗೇಶ್ವರ್ ಹೇಳಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಸಿಪಿ ಯೋಗೇಶ್ವರ್

ನಾಮಪತ್ರ ಸಲ್ಲಿಕೆಗೂ ಮುನ್ನ ‘ಟಿವಿ9’ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್, ಬಿಜೆಪಿ ನನಗೆ ಟಿಕೆಟ್ ಕೊಡಲ್ಲ ಎಂಬುದು ಗೊತ್ತಿತ್ತು. ನಿನ್ನೆವರೆಗೂ ಕಾದಿದ್ದೆ ಎಂದರು. ಅಲ್ಲದೆ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ಒಂದೆರಡು ದಿನ ಕಾದಿದ್ದರೆ, ರಾಜಕೀಯವಾಗಿ ನನ್ನ ಮುಗಿಸುವ ಸಂಚು ಹೂಡಲಾಗಿತ್ತು ಎಂದು ಆರೋಪಿಸಿದರು.

ಸಿಪಿವೈ ಬಂದಿದ್ದಕ್ಕೆ ಚನ್ನಪಟ್ಟಣ ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬ ಚರ್ಚೆಗೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು. ಚನ್ನಪಟ್ಟಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು ಬೈ ಎಲೆಕ್ಷನ್​: ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್‌

ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ

ಸಂಡೂರು ಅಖಾಡದಿಂದ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಂ ಮಾಜಿ ಸಚಿವ ನಾಗೇಂದ್ರ, ಸೇರಿದಂತೆ ಕೈ ನಾಯಕರು ಭಾಗಿಯಾಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Thu, 24 October 24

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us