ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ. ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಅಂಗಡಿ ಮುಚ್ಚಿಸದಂತೆ […]

ಭಾರತ್ ಬಂದ್: ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಸಿಪಿಎಂ ಕಾರ್ಯಕರ್ತರ ಪುಂಡಾಟಿಕೆ
ಸಾಧು ಶ್ರೀನಾಥ್​

Updated on: Jan 09, 2020 | 10:47 AM

ಚಿಕ್ಕಬಳ್ಳಾಪುರ: ಇಂದು ದೇಶವ್ಯಾಪ್ತಿ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ.

ಪಕ್ಷದ ಮುಖಂಡರಾದ ಲಕ್ಷ್ಮಿ ನಾರಾಯಣ ಅಂಗಡಿ ಮಾಲೀಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಟಿ ಅಂಗಡಿ ಮುಚ್ಚುವಂತೆ ಮಾಲೀಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಾಗೂ ಚಹಾ ಮಾಡಲು ಕಾಯಿಸಿದ ಹಾಲನ್ನು ಚೆಲ್ಲಲು ಸಹ ಯತ್ನ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಅಂಗಡಿ ಮುಚ್ಚಿಸದಂತೆ ಖಾಕಿ ಖಡಕ್ ವಾರ್ನಿಂಗ್:
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಸಂಪೂರ್ಣ ಬಂದ್ ಬಿಸಿ ತಟ್ಟಿದೆ. ಸಿಪಿಐ(ಎಂ) ಕಾರ್ಯಕರ್ತರು 4 ತಂಡಗಳಾಗಿ ಮಾಡಿಕೊಂಡು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಹೀಗಾಗಿ ಸಿಪಿಐ(ಎಂ) ಕಾರ್ಯಕರ್ತರಿಗೆ ಪೊಲೀಸರು ಬಲವಂತವಾಗಿ ಅಂಗಡಿ ಮುಚ್ಚಿಸದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


Published On - 7:48 am, Wed, 8 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us