AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ತೆರಿಗೆ ಮೂಲಕ ಬಿಬಿಎಂಪಿ ಬೊಕ್ಕಸಕ್ಕೆ ಹರಿದುಬಂತು ಕೊಟ್ಯಾಂತರ ರೂ. ಹಣ: ಜುಲೈ ವರೆಗಿನ ಕಲೆಕ್ಷನ್ ಇಲ್ಲಿದೆ

ಲಕ್ಷಕ್ಕೂ ಹೆಚ್ಚು ಜನರು ಒನ್ ಟೈಮ್ ಸೆಟಲ್​ಮೆಂಟ್ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಸಿದ್ದು, ಹೀಗಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೊಕ್ಕಸಕ್ಕೆ 3200 ಕೋಟಿ ರೂ. ಹರಿದು ಬಂದಿದೆ ಎಂದು ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್​ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಮೂಲಕ ಬಿಬಿಎಂಪಿ ಬೊಕ್ಕಸಕ್ಕೆ ಹರಿದುಬಂತು ಕೊಟ್ಯಾಂತರ ರೂ. ಹಣ: ಜುಲೈ ವರೆಗಿನ ಕಲೆಕ್ಷನ್ ಇಲ್ಲಿದೆ
ಆಸ್ತಿ ತೆರಿಗೆ ಮೂಲಕ ಬಿಬಿಎಂಪಿ ಬೊಕ್ಕಸಕ್ಕೆ ಹದಿದುಬಂತು ಕೊಟ್ಯಾಂತರ ರೂ. ಹಣ: ಜುಲೈನಲ್ಲಿನ ಕಲೆಕ್ಷನ್ ವಿವರ ಇಲ್ಲಿದೆ
ಗಂಗಾಧರ​ ಬ. ಸಾಬೋಜಿ
| Edited By: |

Updated on:Aug 01, 2024 | 8:43 PM

Share

ಬೆಂಗಳೂರು, ಆಗಸ್ಟ್​​ 01: ಒನ್ ಟೈಮ್ ಸೆಟಲ್​ಮೆಂಟ್​ ಆಸ್ತಿ ತೆರಿಗೆ (Property tax) ಪಾವತಿಗೆ ನೀಡಿದ್ದ ಗಡುವು ಜುಲೈ 31ರ ಬುಧವಾರ ಮುಕ್ತಾಯವಾಗಿದೆ. ಒಟಿಎಸ್ ಮೂಲಕ 1 ಲಕ್ಷ ಜನರು ತೆರಿಗೆ ಪಾವತಿಸಿದ್ದು ಆ ಮೂಲಕ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೊಕ್ಕಸಕ್ಕೆ 3200 ಕೋಟಿ ರೂ. ಹರಿದು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 800 ಕೋಟಿ ರೂ. ಹೆಚ್ಚಳವಾಗಿದೆ ಎಂದು ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್​ ತಿಳಿಸಿದ್ದಾರೆ.

ಕಳೆದ 10-12 ದಿನಗಳಲ್ಲಿ ಸುಮಾರು 1200 ಕೋಟಿ ರೂ ಸಂಗ್ರಹಿಸಲಾಗಿದೆ. ಲಕ್ಷಕ್ಕೂ ಹೆಚ್ಚು ಜನರು ಒನ್ ಟೈಮ್ ಸೆಟಲ್​ಮೆಂಟ್ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಸಿದ್ದು, ಹೀಗಾಗಿ ಸಂಗ್ರಹವಾದ ಒಟ್ಟು  ಮೊತ್ತದಲ್ಲಿ 380 ಕೋಟಿ ರೂ. ಓಟಿಎಸ್​ ಮೂಲಕ ಸಂಗ್ರಹವಾಗಿದೆ. ಇನ್ನೂ ಸುಮಾರು 150 ಕೋಟಿ ರೂ. ಚೆಕ್ ಮತ್ತು ಡಿಮ್ಯಾಂಡ್ ಡ್ರಾಫ್ಟ್ಗಳ ಮೂಲಕ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಗಡುವು ಅಂತ್ಯ: ಪಾವತಿಸದವರಿಗೆ ಬಡ್ಡಿ ಅಸ್ತ್ರ ಪ್ರಯೋಗಕ್ಕೆ ಬಿಬಿಎಂಪಿ ಸಜ್ಜು

ಬಿಬಿಎಂಪಿಯ ಅಧಿಕಾರಿಗಳ ಮಾಹಿತಿ ಪ್ರಕಾರ ಏಪ್ರಿಲ್ 1 ರಿಂದ ಜುಲೈ 29 ರವರೆಗೆ ಆಸ್ತಿ ತೆರಿಗೆ ಪಾವತಿದಾರರ ಸಂಖ್ಯೆ ಗಮನಾರ್ಹ ಕುಸಿತ ಕಂಡಿದೆ. ಇದಕ್ಕೆ ಒನ್ ಟೈಮ್ ಸೆಟಲ್​ಮೆಂಟ್​ ಯೋಜನೆ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್; ಶೇಕಡ 50 ರಷ್ಟು ರಿಯಾಯಿತಿ

ಇನ್ನು ಇತ್ತೀಚೆಗೆ ಬಿಬಿಎಂಪಿ ಹಂಚಿಕೊಂಡ ಮಾಹಿತಿಯ ಪ್ರಕಾರ ಬೆಂಗಳೂರಿನ ಎಂಟು ವಲಯಗಳಲ್ಲಿ ಸುಮಾರು 2.88 ಲಕ್ಷಕ್ಕೂ ಹೆಚ್ಚು ಜನರು ತೆರಿಗೆ ಪಾವತಿಸಬೇಕಿದ್ದು, 548.94 ಕೋಟಿ ರೂ. ಮೌಲ್ಯದ ಆಸ್ತಿ ತೆರಿಗೆ ಬಾಕಿ ಬಾಕಿ ಇದೆ ಎಂದು ತಿಳಿಸಿದೆ.

ಯಾವ ಯಾವ ವಲಯದಲ್ಲಿ ಎಷ್ಟು ಆಸ್ತಿ ತೆರಿಗೆ ಸಂಗ್ರಹ ಮಾಹಿತಿ ಹೀಗಿದೆ 

ವಲಯ                                        ಏಪ್ರಿಲ್ 2023-ಜುಲೈ 2023            ಏಪ್ರಿಲ್ 2024-ಜುಲೈ 2024

  • ಬೊಮ್ಮನಹಳ್ಳಿ                                   267.12  ಕೋಟಿ                                         316.10 ಕೋಟಿ
  • ದಾಸರಹಳ್ಳಿ                                         70.58   ಕೋಟಿ                                          96.21 ಕೋಟಿ
  • ಪೂರ್ವ                                                456.69 ಕೋಟಿ                                          544.46 ಕೋಟಿ
  • ಮಹದೇವಪುರ                                    643.43 ಕೋಟಿ                                          808.40 ಕೋಟಿ
  • ರಾಜರಾಜೇಶ್ವರಿನಗರ                          163.99  ಕೋಟಿ                                          212.42 ಕೋಟಿ
  • ದಕ್ಷಿಣ                                                  385.86  ಕೋಟಿ                                         459.01 ಕೋಟಿ
  • ಪಶ್ಚಿಮ                                                267.36   ಕೋಟಿ                                         337.82 ಕೋಟಿ
  • ಯಲಹಂಕ                                         202.27  ಕೋಟಿ                                          291.40 ಕೋಟಿ
  • ಒಟ್ಟು                                                  2457.30 ಕೋಟಿ                                         3065.82 ಕೋಟಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Thu, 1 August 24

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!