AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆ್ಯಂಬುಲೆನ್ಸ್ ಬಿಡಲು ಸಿಬ್ಬಂದಿ ಆಕ್ರೋಶ, ಮೃತದೇಹ ದಹನಕ್ಕೂ ಪಾಲಿಸಬೇಕು ರೂಲ್ಸ್! ಮಾರ್ಷಲ್​ಗಳ ಕಾಟ

ಖಾಸಗಿ ಆ್ಯಂಬುಲೆನ್ಸ್ನಲ್ಲಿ ಮೃತದೇಹ ತಂದಿದ ಹಿನ್ನೆಲೆಯಲ್ಲಿ ಮೃತದೇಹ ದಹನಕ್ಕೆ ಚಿತಾಗಾರ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ಕಳೆದ ರಾತ್ರಿಯಿಂದ ಚಿತಾಗಾರದ ಮುಂದೆ ಮೃತರ ಕುಟುಂಬಸ್ಥರು ಕಾಯುವಂತಾಗಿದೆ....

ಖಾಸಗಿ ಆ್ಯಂಬುಲೆನ್ಸ್ ಬಿಡಲು ಸಿಬ್ಬಂದಿ ಆಕ್ರೋಶ, ಮೃತದೇಹ ದಹನಕ್ಕೂ ಪಾಲಿಸಬೇಕು ರೂಲ್ಸ್! ಮಾರ್ಷಲ್​ಗಳ ಕಾಟ
ಮೇಡಿ ಅಗ್ರಹಾರ ಚಿತಾಗಾರ
ಆಯೇಷಾ ಬಾನು
|

Updated on: Apr 26, 2021 | 1:19 PM

Share

ಬೆಂಗಳೂರು: ಕೊರೊನಾ 2ನೇ ಅಲೆ ರಾಜಧಾನಿ ಬೆಂಗಳೂರಿಗೆ ಅಪ್ಪಳಿಸಿದಾಗಿನಿಂದ ಸಾವು-ನೋವುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದರ ನಡುವೆ ಅನೇಕ ಸಮಸ್ಯೆಗಳು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕುತ್ತಿವೆ. ಇನ್ನು ಬೆಂಗಳೂರಿನ ಮೇಡಿ ಅಗ್ರಹಾರ ಚಿತಾಗಾರದ ಮುಂದೆ ಗಲಾಟೆ ನಡೆದಿದೆ. ಸರ್ಕಾರದ ರೂಲ್ಸ್ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ಮೃತ ಕುಟುಂಬಸ್ಥರು ಚಿತಾಗಾರ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ ಘಟನೆ ನಡೆದಿದೆ.

ಖಾಸಗಿ ಆ್ಯಂಬುಲೆನ್ಸ್ನಲ್ಲಿ ಮೃತದೇಹ ತಂದಿದ್ದ ಹಿನ್ನೆಲೆಯಲ್ಲಿ ಮೃತದೇಹ ದಹನಕ್ಕೆ ಚಿತಾಗಾರ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ಹೀಗಾಗಿ ಕಳೆದ ರಾತ್ರಿಯಿಂದ ಚಿತಾಗಾರದ ಮುಂದೆ ಮೃತರ ಕುಟುಂಬಸ್ಥರು ಕಾಯುವಂತಾಗಿದೆ. 42 ವರ್ಷದ ಮಹಿಳೆ ಕೊರೊನಾದಿಂದ ನಾರಾಯಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಾತ್ರಿ ಮೃತದೇಹವನ್ನು ಖಾಸಗಿ ಆಸ್ಪತ್ರೆ ಮೂಲಕ ತರಲಾಗಿತ್ತು.

ಈ ವೇಳೆ ಬೆಳಗ್ಗೆ 9 ಘಂಟೆಗೆ ಅಂತ್ಯಕ್ರಿಯೆ ಮಾಡುವುದಾಗಿ ಚಿತಾಗಾರ ಸಿಬ್ಬಂದಿ ತಿಳಿಸಿದ್ದರು. ಆದ್ರೆ ಇದೀಗ ಮೃತ ದೇಹ ದಹನ ಮಾಡೋಕೆ ಹಿಂದೇಟು ಹಾಕಿದ್ದಾರೆ. ಅಲ್ಲದೆ ಈ ಬಗ್ಗೆ ಆಸ್ಪತ್ರೆಯಿಂದಲೂ ಯಾವುದೇ ಮಾಹಿತಿ ನೀಡದ ಆರೋಪವಿದೆ. ಹೀಗಾಗಿ ಖಾಸಗಿ ಆ್ಯಂಬುಲೆನ್ಸ್ಗಳನ್ನ ಮಾರ್ಷಲ್ಗಳು ತಡೆಯುತ್ತಿದ್ದಾರೆ.

ಪಿಯುಸಿ ಓದುತ್ತಿರುವ ಮೃತ ಮಹಿಳೆಯ ಮಗಳು ಅಮ್ಮನನ್ನ ಕಳೆದುಕೊಂಡು ರೋಧಿಸುತ್ತಿದ್ದಾಳೆ. ಅಪ್ರಾಪ್ತೆ ಮಗಳು ಹಾಗೂ ಮಗ ಈಗ ತಾಯಿ ಇಲ್ಲದ ತಬ್ಬಲಿಯಾಗಿದ್ದಾರೆ. ಚಿತಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊನೆಗೆ ಮಕ್ಕಳ ಕಣ್ಣೀರಿಗೆ ಕರಗಿದ ಸಿಬ್ಬಂದಿ ಖಾಸಗಿ ಆ್ಯಂಬುಲೆನ್ಸ್ ಅನ್ನು ಒಳಗೆ ಬಿಟ್ಟಿದ್ದಾರೆ. ಗಲಾಟೆ ಬಳಿಕ ಮೃತ ದೇಹ ದಹನಕ್ಕೆ ಚಿತಾಗಾರ ಸಿಬ್ಬಂದಿ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ