AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತಾಗಾರ ತುಂಬಿದೆ: ಸ್ಮಶಾನಗಳ ಮುಂದೆಯೂ ಹೌಸ್​ಫುಲ್​ ಬೋರ್ಡ್​, ಬುಕ್ಕಿಂಗ್​ ಫುಲ್​ ಆದ ನಂತರ ಅವಕಾಶವಿಲ್ಲ

ಚಾಮರಾಜಪೇಟೆಯ ಟಿ.ಆರ್.ಮಿಲ್ ಸಮೀಪದ ಸ್ಮಶಾನದ ಗೇಟ್​ನಲ್ಲಿ ಹೌಸ್​ಫುಲ್ ಫಲಕ ನೇತಾಡುತ್ತಿದೆ. ದಿನಕ್ಕೆ 20 ಮೃತದೇಹಗಳ ಅಂತ್ಯಕ್ರಿಯೆಗೆ ಅವಕಾಶ ಇದ್ದು, ಈಗಾಗಲೇ 19 ಮೃತದೇಹಗಳ ದಹನಕ್ಕೆ ಬುಕ್ಕಿಂಗ್ ಆಗಿದೆ. ಇನ್ನು ಹೆಚ್ಚಿನ ಶವಗಳನ್ನು ತಂದರೆ ಅಂತ್ಯ ಸಂಸ್ಕಾರ ಮಾಡಿಸುವುದಕ್ಕೆ ಆಗುವುದಿಲ್ಲ ಎಂಬ ಕಾರಣಕ್ಕೆ ಸಿಬ್ಬಂದಿ ಸೂಚನಾ ಫಲಕವನ್ನೇ ಹಾಕಿದ್ದಾರೆ.

ಚಿತಾಗಾರ ತುಂಬಿದೆ: ಸ್ಮಶಾನಗಳ ಮುಂದೆಯೂ ಹೌಸ್​ಫುಲ್​ ಬೋರ್ಡ್​, ಬುಕ್ಕಿಂಗ್​ ಫುಲ್​ ಆದ ನಂತರ ಅವಕಾಶವಿಲ್ಲ
ಚಿತಾಗಾರದ ಮುಂದೆ ಹೌಸ್​ಫುಲ್ ಬೋರ್ಡ್​
Skanda
| Edited By: |

Updated on: May 04, 2021 | 9:14 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಪರಿಸ್ಥಿತಿ ಸಂಪೂರ್ಣ ಬಿಗಡಾಯಿಸಿದ್ದು, ಸೋಂಕಿತರ ಸಂಖ್ಯೆ ಹಾಗೂ ಸೋಂಕಿತರ ಮರಣ ಪ್ರಮಾಣ ಎರಡೂ ಗಣನೀಯವಾಗಿ ಏರಿಕೆ ಕಾಣುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಡುವವರ ಅಂತ್ಯಸಂಸ್ಕಾರ ಕ್ರಿಯೆ ನಡೆಸುವುದೂ ದೊಡ್ಡ ಸವಾಲಾಗಿದ್ದು, ಸಿನಿಮಾ ಥಿಯೇಟರ್ ಮುಂಭಾಗದಲ್ಲಿ ಕಾಣುವಂತೆ ಸ್ಮಶಾನದಲ್ಲೂ ಹೌಸ್​ಫುಲ್ ಫಲಕಗಳು ಕಣ್ಣಿಗೆ ರಾಚಲಾರಂಭಿಸಿವೆ. ಕೊರೊನಾ ಸೋಂಕಿತರ ಮರಣ ಪ್ರಮಾಣ ಹೆಚ್ಚಾದ ಕಾರಣ ಸ್ಮಶಾನಗಳಿಗೆ ಬಿಡುವೇ ಇಲ್ಲದಂತಾಗಿದ್ದು ಶವ ಸುಡುವುದಕ್ಕೆ ಬುಕ್ಕಿಂಗ್ ಮಾಡಿಕೊಂಡು ಜನ ಬರುತ್ತಿದ್ದಾರೆ.

ಚಾಮರಾಜಪೇಟೆಯ ಟಿ.ಆರ್.ಮಿಲ್ ಸಮೀಪದ ಸ್ಮಶಾನದ ಗೇಟ್​ನಲ್ಲಿ ಹೌಸ್​ಫುಲ್ ಫಲಕ ನೇತಾಡುತ್ತಿದೆ. ದಿನಕ್ಕೆ 20 ಮೃತದೇಹಗಳ ಅಂತ್ಯಕ್ರಿಯೆಗೆ ಅವಕಾಶ ಇದ್ದು, ಈಗಾಗಲೇ 19 ಮೃತದೇಹಗಳ ದಹನಕ್ಕೆ ಬುಕ್ಕಿಂಗ್ ಆಗಿದೆ. ಇನ್ನು ಹೆಚ್ಚಿನ ಶವಗಳನ್ನು ತಂದರೆ ಅಂತ್ಯ ಸಂಸ್ಕಾರ ಮಾಡಿಸುವುದಕ್ಕೆ ಆಗುವುದಿಲ್ಲ ಎಂಬ ಕಾರಣಕ್ಕೆ ಸಿಬ್ಬಂದಿ ಸೂಚನಾ ಫಲಕವನ್ನೇ ಹಾಕಿದ್ದಾರೆ.

ಸುಮನಹಳ್ಳಿ ಚಿತಾಗಾರ ತಾತ್ಕಾಲಿಕ ಸ್ಥಗಿತ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಶವ ಸಂಸ್ಕಾರ ಮಾಡಲಾಗುತ್ತಿರುವ ಕಾರಣ ಸುದ್ದಿಯಲ್ಲಿರುವ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಇದೀಗ ವಾರದ ಮಟ್ಟಿಗೆ ಅಂತ್ಯ ಸಂಸ್ಕಾರ ಕ್ರಿಯೆ ಸ್ಥಗಿತಗೊಳ್ಳುತ್ತಿದೆ. ಇಂದಿನಿಂದ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸ್ಥಗಿತಗೊಳ್ಳುತ್ತಿದ್ದು, ತುರ್ತು ನಿರ್ವಹಣಾ ಕೆಲಸ ಹಿನ್ನೆಲೆ 7 ದಿನಗಳ ಕಾಲ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಫರ್ನೇಸ್​ಗಳನ್ನು ಬದಲಾಯಿಸುವ ಸಲುವಾಗಿ ಮೇ 4ರಿಂದ ಮೇ 10ರವರೆಗೆ ಅಂತ್ಯಕ್ರಿಯೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ.

ಇದನ್ನೂ ಓದಿ: ಸುಮನಹಳ್ಳಿ ಚಿತಾಗಾರ ಬಂದ್: ಇಂದಿನಿಂದ ಏಳು ದಿನಗಳ ಕಾಲ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಂತ್ಯಕ್ರಿಯೆ ಸ್ಥಗಿತ 

ಚಿತಾಗಾರಗಳ ಎದುರು ಹೆಚ್ಚಿದ ಕ್ಯೂ; ಒಂದೆಡೆಯಿಂದ ಮತ್ತೊಂದೆಡೆ ಶವ ಕೊಂಡೊಯ್ಯುತ್ತಿರುವ ಸಂಬಂಧಿಕರು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?