AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸುವಂತೆ ಸರ್ಕಾರಕ್ಕೆ ಸುನೀಲ್ ಜೋಶಿ ಮನವಿ

ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಅವರು ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಮ್ಮ ಎಕ್ಸ್​ ಖಾತೆ ಮೂಲಕ ಸಿಎಂ, ಸಾರಿಗೆ ಸಚಿವರನ್ನು ಟ್ಯಾಗ್ ಮಾಡಿ ಗದಗಕ್ಕೆ ವೋಲ್ವೋ ಬಸ್ ಸೇವೆ ಪುನರಾರಂಭಿಸಿ ಎಂದು ಮನವಿ ಮಾಡಿದ್ದಾರೆ.

ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸುವಂತೆ ಸರ್ಕಾರಕ್ಕೆ ಸುನೀಲ್ ಜೋಶಿ ಮನವಿ
ಗದಗ ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸುವಂತೆ ಸರ್ಕಾರಕ್ಕೆ ಸುನೀಲ್ ಜೋಶಿ ಮನವಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಆಯೇಷಾ ಬಾನು|

Updated on:Aug 20, 2024 | 12:13 PM

Share

ಗದಗ, ಆಗಸ್ಟ್.20: ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಪುನಾರಂಭಗೊಳಿಸಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ (Sunil Joshi) ಅವರು ಎಕ್ಸ್ ಖಾತೆಯ (ಟ್ವಿಟರ್) ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಸುನೀಲ್ ಜೋಶಿ ಅವರ ಮನವಿ ಮೇರೆಗೆ ಸಾರಿಗೆ ಇಲಾಖೆ ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಆರಂಭಿಸಿತ್ತು. ಆದರೆ ಈಗ ಸೇವೆ ಸ್ಥಗಿತಗೊಂಡಿದ್ದು ಪುನರಾರಂಭಗೊಳಿಸುವಂತೆ ಜೋಶಿ ಮನವಿ ಮಾಡಿದ್ದಾರೆ.

2023ರಲ್ಲೂ ಸುನೀಲ್ ಜೋಶಿಯವರು ಟ್ವೀಟ್ ಮೂಲಕ ವೋಲ್ವೋ ಬಸ್​ ಸೇವೆಗೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಕ್ರಿಕೆಟಿಗ ಸುನಿಲ್ ಮನವಿಗೆ ಸ್ಪಂದಿಸಿದ್ದ ಆಗಿನ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಬಸ್ ಸೇವೆ ಕಲ್ಪಿಸಿದ್ದರು. ಆದ್ರೆ ಕೆಲ ತಿಂಗಳ ನಂತರ ಸಾರಿಗೆ ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಈಗ ಮತ್ತೆ ಟ್ವೀಟ್ ಮಾಡಿ ಬಸ್ ಸೇವೆ ಪುನರಾರಂಭಗೊಳಿಸಲು ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉಸ್ತುವಾರಿ ಸಚಿವ ಹೆಚ್​ಕೆ ಪಾಟೀಲರನ್ನು ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಅವರ ಟ್ವೀಟ್ ಹೀಗಿದೆ

ಇದನ್ನೂ ಓದಿ: ರಾಜ್ಯಪಾಲರ ಪ್ರಾಸಿಕ್ಯೂಷನ್​ಗೆ ತಿರುಗೇಟು ನೀಡಲು ಸಿಎಂ ಸಿದ್ದರಾಮಯ್ಯ ಮಾಸ್ಟರ್​ ಪ್ಲಾನ್

ಬೆಂಗಳೂರು-ಗದಗ ನಡುವಿನ ವೊಲ್ವೋ ಬಸ್ ಚಿತ್ರದುರ್ಗ, ಹರಿಹರ, ಮುಂಡರಗಿ ಮಾರ್ಗವಾಗಿ ಸಂಚಾರ ಮಾಡುತ್ತಿತ್ತು.ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್-1 ರಿಂದ ಮಧ್ಯಾಹ್ನ 2 ಗಂಟೆಗೆ ಹೊರಡಿ ಸಂಜೆ 6.15ಕ್ಕೆ ಗದಗ ತಲುಪುತ್ತಿತ್ತು. 2023ರ ಜನವರಿ 9ರಂದು ಆಗಿನ ಸಾರಿಗೆ ಸಚಿವರಾಗಿದ್ದ ಶ್ರೀರಾಮುಲು ಅವರು ಗದಗ ಟು ಬೆಂಗಳೂರು ವೋಲ್ವೋ ಬಸ್ ಲೋಕಾರ್ಪಣೆಗೊಳಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:12 pm, Tue, 20 August 24

Follow Us
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!