AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವರ್ಗಾವಣೆ ನೆಪ ಹೇಳಿ ಮಹಿಳಾ ವಾರ್ಡನ್​​ ಮೇಲೆ ಅತ್ಯಾಚಾರ ಆರೋಪ, ತಲೆಮರೆಸಿಕೊಂಡ ವಾರ್ಡನ್

ತನ್ನ ಮಕ್ಕಳ ಶಿಕ್ಷಣದ ದೃಷ್ಠಿಯಿಂದ ದಾವಣಗೆರೆಗೆ ವರ್ಗಾವಣೆ ಕೇಳಿದ್ದರು. ಈ ವೇಳೆ ವಾರ್ಡನ್ ಮೋಹನ್, ತಾನು ವರ್ಗಾವಣೆ ಮಾಡಿಸಿದ್ದು, ವರ್ಗಾವಣೆ ಆದೇಶ ತನ್ನ ಬಳಿ ಇದೆ ಎಂದು ಸುಳ್ಳು ಹೇಳಿ ಮಹಿಳಾ ವಾರ್ಡನ್ ಅನ್ನು ತನ್ನ ಮನೆಗೆ ಕರೆಯಿಸಿ ಅತ್ಯಾಚಾರ ಎಸಗಿದ್ದಾನಂತೆ.

ದಾವಣಗೆರೆ: ವರ್ಗಾವಣೆ ನೆಪ ಹೇಳಿ ಮಹಿಳಾ ವಾರ್ಡನ್​​ ಮೇಲೆ ಅತ್ಯಾಚಾರ ಆರೋಪ, ತಲೆಮರೆಸಿಕೊಂಡ ವಾರ್ಡನ್
ವಿದ್ಯಾನಗರ ಪೊಲೀಸ್ ಠಾಣೆ
TV9 Web
| Updated By: ಆಯೇಷಾ ಬಾನು|

Updated on:Nov 10, 2022 | 2:35 PM

Share

ದಾವಣಗೆರೆ: ವರ್ಗಾವಣೆ ನೆಪ ಹೇಳಿ ಮಹಿಳಾ ವಾರ್ಡನ್​​ ಮೇಲೆ ಅತ್ಯಾಚಾರ? ಎಸಗಲಾಗಿದೆ ಎಂಬ ಆರೋಪ ಬಾಯ್ಸ್​​ ಹಾಸ್ಟೆಲ್​ ವಾರ್ಡನ್ ಮೋಹನ್ ರಾಮಪ್ಪ ವಿರುದ್ಧ ಕೇಳಿ ಬಂದಿದೆ. ಈ ಬಗ್ಗೆ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ವಾರ್ಡನ್ ದೂರು ದಾಖಲಿಸಿದ್ದು ವಾರ್ಡನ್ ಮೋಹನ್ ತಲೆಮರೆಸಿಕೊಂಡಿದ್ದಾನೆ.

ಬಹುದಿನಗಳಿಂದ ತಾಲೂಕಾ ಕೇಂದ್ರದ ಹಾಸ್ಟೆಲ್​ನಲ್ಲಿ ಸೇವೆಯಲ್ಲಿ‌ದ್ದ ಮಹಿಳಾ ವಾರ್ಡನ್, ತನ್ನ ಮಕ್ಕಳ ಶಿಕ್ಷಣದ ದೃಷ್ಠಿಯಿಂದ ದಾವಣಗೆರೆಗೆ ವರ್ಗಾವಣೆ ಕೇಳಿದ್ದರು. ಈ ವೇಳೆ ವಾರ್ಡನ್ ಮೋಹನ್, ತಾನು ವರ್ಗಾವಣೆ ಮಾಡಿಸಿದ್ದು, ವರ್ಗಾವಣೆ ಆದೇಶ ತನ್ನ ಬಳಿ ಇದೆ ಎಂದು ಸುಳ್ಳು ಹೇಳಿ ಮಹಿಳಾ ವಾರ್ಡನ್ ಅನ್ನು ತನ್ನ ಮನೆಗೆ ಕರೆಯಿಸಿ ಅತ್ಯಾಚಾರ ಎಸಗಿದ್ದಾನಂತೆ. ಈ ಸಂಬಂಧ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಮಹಿಳಾ ವಾರ್ಡನ್ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಮೋಹನ್ ತಲೆ ಮರೆಸಿಕೊಂಡಿದ್ದಾನೆ.

ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಲೇಡಿ ಡಾಕ್ಟರ್​ ಜತೆ ಅಸಭ್ಯ ವರ್ತನೆ

ಮಂಗಳೂರು: ಖಾಸಗಿ ಬಸ್​ನಲ್ಲಿ ಲೇಡಿ ಡಾಕ್ಟರ್​ ಪ್ರಯಾಣಿಕರೊಬ್ಬರ ಜತೆ ಖಾಸಗಿ ಬಸ್ (private bus) ಕ್ಲೀನರ್​ ಮಹಮ್ಮದ್​​ ಇಮ್ರಾನ್ ​(26) ಅಸಭ್ಯ ವರ್ತನೆ (harassment) ತೋರಿದ್ದು, ಆತನನ್ನು ಬಂಧಿಸಲಾಗಿದೆ (arrest). ಬಂಧಿತ ಆರೋಪಿ, ಮಂಗಳೂರಿನ ಬಜ್ಪೆ ಕೆಂಜಾರು ನಿವಾಸಿ. ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ವೈದ್ಯೆ ಜತೆ ದುರ್ವತನೆ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್​​ 151/2022 U/s 354ರಡಿ ಕೇಸ್​​​ ದಾಖಲುಗೊಂಡಿದೆ. ಖಾಸಗಿ ಬಸ್​​ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು.

ಆರೋಪಿ ಇಮ್ರಾನ್​​​ ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ. ಪ್ಯಾಂಟ್ ಜಿಪ್ ಓಪನ್ ಮಾಡಿ ಅಸಭ್ಯ ನಡವಳಿಕೆ ತೋರಿದ ಎಂದು ಸಂತ್ರಸ್ತೆ, ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯೆ ದೂರಿನಲ್ಲಿ ದಾಖಲಿಸಿದ್ದಾರೆ. ದೂರುದಾರ ಮಹಿಳಾ ಪ್ರಯಾಣಿಕರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಪೊಲೀಸ್ ದೂರು ನೀಡುವ ವಿಚಾರ ಗೊತ್ತಾಗಿ ಆರೋಪಿ ಇಮ್ರಾನ್ ಮಹಿಳೆಗೆ ಬೆದರಿಕೆಯನ್ನು ಹಾಕಿದ್ದ ಎಂದು ತಿಳಿದುಬಂದಿದೆ.

ಮಾಲೂರಿನಲ್ಲಿ ಮತ್ತೆ ಕದ್ದು ಮುಚ್ವಿ ಕೋಳಿ ಪಂದ್ಯ

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕುಂತೂರು ಬಳಿ ಕೋಳಿ ಪಂದ್ಯ ನಡೆದಿದೆ. ಕುಂತೂರು ಗ್ರಾಮದ ಬಳಿಯ ನೀಲಗಿರಿ ತೋಪಿನಲ್ಲಿ ಕೋಳಿ ಪಂದ್ಯ ಆಯೋಜನೆ ಮಾಡಲಾಗಿದ್ದು ತಲಾ ಒಬ್ಬರಿಗೆ 300 ರೂಪಾಯಿ ಪ್ರವೇಶ ಶುಲ್ಕ ನಿಗಧಿ ಮಾಡಲಾಗಿದೆ. ಕೋಳಿ ಪಂದ್ಯದ ವೇಳೆ ಲಕ್ಷಾಂತರ ರೂಪಾಯಿ ಪಣಕ್ಕಿಟ್ಟು ಜೂಜಾಡಲಾಗಿದೆ. ಕೋಳಿ ಪಂದ್ಯದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

Published On - 1:51 pm, Thu, 10 November 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​