AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​ ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ಗಂಗಾಧರ​ ಬ. ಸಾಬೋಜಿ
|

Updated on: May 06, 2024 | 3:32 PM

Share

ಬೆಂಗಳೂರು, ಮೇ 5: ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ (hit) ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಪ್ರಭುರಾಮ್​ ಪ್ರಸಾದ್​(33) ಮೃತ ವ್ಯಕ್ತಿ. ಅನಿಲ್ ಕಪಾಳಕ್ಕೆ ಹೊಡೆದ ವ್ಯಕ್ತಿ. ಮೃತ (death) ಪ್ರಭುರಾಮ್ ನಿನ್ನೆ ಮಗನ ಜೊತೆ ಹಬ್ಬಕ್ಕೆಂದು ಬೈಕ್​​ನಲ್ಲಿ ದೇಗುಲದ ಬಳಿ ಹೋಗಿದ್ದ. ದಾರಿ ಮಧ್ಯೆ ಬೈಕ್​ನಲ್ಲಿ ಸೌಂಡ್ ಬರ್ತಿದೆ ಅಂತಾ ಬೈಕ್​ನ್ನು​ ಸೈಡ್​ ಹಾಕಿ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪರಿಚಯಸ್ಥ ಮಹಿಳೆ ಬೈಕ್​ಗೆ​ ಟಚ್ ಮಾಡಿದ್ದಾರೆ.​

ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆ ಬಳಿ ಬಾ ಎಂದು ಮಹಿಳೆ ಹೊರಟು ಹೋಗಿದ್ದಾರೆ. ಮನೆ ಬಳಿ ಹೋದಾಗ ಮಹಿಳೆ ಪತಿ ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​

ಇದನ್ನೂ ಓದಿ: ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ N​.R​.ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಸುನೀಲ್(30), ಉಮೇಶ್(35) ಮೃತಪಟ್ಟಿದ್ದಾರೆ. ಎನ್​.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ರಾಮನಗರ: ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಹಿತಾ(9) ಮೃತ ಪಟ್ಟಿದ್ದಾಳೆ.

ಇದನ್ನೂ ಓದಿ: ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ಏ.28ರಂದು ಕನಕಪುರದ ನಾರಾಣಪ್ಪ‌ ಕೆರೆ ಬಳಿ ನಡೆದಿದ್ದ ಅಪಘಾತ ನಡೆದಿತ್ತು. ತಂದೆ ಜೊತೆ ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರು ಗುದ್ದಿ ಮೋಹಿತಾ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದರು. ಬ್ರೈನ್​ ಡೆಡ್​ ಆಗಿ ಮೋಹಿತಾ ಕೋಮಾಗೆ ಹೋಗಿದ್ದಳು. ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್