ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​ ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
Follow us
|

Updated on: May 06, 2024 | 3:32 PM

ಬೆಂಗಳೂರು, ಮೇ 5: ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ (hit) ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಪ್ರಭುರಾಮ್​ ಪ್ರಸಾದ್​(33) ಮೃತ ವ್ಯಕ್ತಿ. ಅನಿಲ್ ಕಪಾಳಕ್ಕೆ ಹೊಡೆದ ವ್ಯಕ್ತಿ. ಮೃತ (death) ಪ್ರಭುರಾಮ್ ನಿನ್ನೆ ಮಗನ ಜೊತೆ ಹಬ್ಬಕ್ಕೆಂದು ಬೈಕ್​​ನಲ್ಲಿ ದೇಗುಲದ ಬಳಿ ಹೋಗಿದ್ದ. ದಾರಿ ಮಧ್ಯೆ ಬೈಕ್​ನಲ್ಲಿ ಸೌಂಡ್ ಬರ್ತಿದೆ ಅಂತಾ ಬೈಕ್​ನ್ನು​ ಸೈಡ್​ ಹಾಕಿ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪರಿಚಯಸ್ಥ ಮಹಿಳೆ ಬೈಕ್​ಗೆ​ ಟಚ್ ಮಾಡಿದ್ದಾರೆ.​

ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆ ಬಳಿ ಬಾ ಎಂದು ಮಹಿಳೆ ಹೊರಟು ಹೋಗಿದ್ದಾರೆ. ಮನೆ ಬಳಿ ಹೋದಾಗ ಮಹಿಳೆ ಪತಿ ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​

ಇದನ್ನೂ ಓದಿ: ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ N​.R​.ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಸುನೀಲ್(30), ಉಮೇಶ್(35) ಮೃತಪಟ್ಟಿದ್ದಾರೆ. ಎನ್​.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ರಾಮನಗರ: ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಹಿತಾ(9) ಮೃತ ಪಟ್ಟಿದ್ದಾಳೆ.

ಇದನ್ನೂ ಓದಿ: ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ಏ.28ರಂದು ಕನಕಪುರದ ನಾರಾಣಪ್ಪ‌ ಕೆರೆ ಬಳಿ ನಡೆದಿದ್ದ ಅಪಘಾತ ನಡೆದಿತ್ತು. ತಂದೆ ಜೊತೆ ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರು ಗುದ್ದಿ ಮೋಹಿತಾ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದರು. ಬ್ರೈನ್​ ಡೆಡ್​ ಆಗಿ ಮೋಹಿತಾ ಕೋಮಾಗೆ ಹೋಗಿದ್ದಳು. ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ