ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​ ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು
ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

Updated on: May 06, 2024 | 3:32 PM

ಬೆಂಗಳೂರು, ಮೇ 5: ಜಗಳ ಆಡುವಾಗ ಕಪಾಳಕ್ಕೆ ಹೊಡೆದಿದ್ದರಿಂದ (hit) ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಪ್ರಭುರಾಮ್​ ಪ್ರಸಾದ್​(33) ಮೃತ ವ್ಯಕ್ತಿ. ಅನಿಲ್ ಕಪಾಳಕ್ಕೆ ಹೊಡೆದ ವ್ಯಕ್ತಿ. ಮೃತ (death) ಪ್ರಭುರಾಮ್ ನಿನ್ನೆ ಮಗನ ಜೊತೆ ಹಬ್ಬಕ್ಕೆಂದು ಬೈಕ್​​ನಲ್ಲಿ ದೇಗುಲದ ಬಳಿ ಹೋಗಿದ್ದ. ದಾರಿ ಮಧ್ಯೆ ಬೈಕ್​ನಲ್ಲಿ ಸೌಂಡ್ ಬರ್ತಿದೆ ಅಂತಾ ಬೈಕ್​ನ್ನು​ ಸೈಡ್​ ಹಾಕಿ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪರಿಚಯಸ್ಥ ಮಹಿಳೆ ಬೈಕ್​ಗೆ​ ಟಚ್ ಮಾಡಿದ್ದಾರೆ.​

ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆ ಬಳಿ ಬಾ ಎಂದು ಮಹಿಳೆ ಹೊರಟು ಹೋಗಿದ್ದಾರೆ. ಮನೆ ಬಳಿ ಹೋದಾಗ ಮಹಿಳೆ ಪತಿ ಅನಿಲ್ ಜತೆ ಪ್ರಭುರಾಮ್ ಜಗಳವಾಗಿದೆ. ಈ ವೇಳೆ ಪ್ರಭುರಾಮ್​ ಕೆನ್ನೆಗೆ 4-5 ಬಾರಿ ಅನಿಲ್ ಹೊಡೆದಿದ್ದಾರೆ.​

ಇದನ್ನೂ ಓದಿ: ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಜಗಳದ ಬಳಿಕ ಮನೆಗೆ ಹೋಗಿ ನೋವಿನಲ್ಲೇ ಮಲಗಿದ್ದ ಪ್ರಭುರಾಮ್, ರಾತ್ರಿ 1 ಗಂಟೆ ಸುಮಾರಿಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ N​.R​.ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಸುನೀಲ್(30), ಉಮೇಶ್(35) ಮೃತಪಟ್ಟಿದ್ದಾರೆ. ಎನ್​.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ರಾಮನಗರ: ಅಪಘಾತದಲ್ಲಿ ಗಾಯಗೊಂಡು 8 ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರಿನ ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಹಿತಾ(9) ಮೃತ ಪಟ್ಟಿದ್ದಾಳೆ.

ಇದನ್ನೂ ಓದಿ: ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ಏ.28ರಂದು ಕನಕಪುರದ ನಾರಾಣಪ್ಪ‌ ಕೆರೆ ಬಳಿ ನಡೆದಿದ್ದ ಅಪಘಾತ ನಡೆದಿತ್ತು. ತಂದೆ ಜೊತೆ ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರು ಗುದ್ದಿ ಮೋಹಿತಾ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದರು. ಬ್ರೈನ್​ ಡೆಡ್​ ಆಗಿ ಮೋಹಿತಾ ಕೋಮಾಗೆ ಹೋಗಿದ್ದಳು. ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವರದಿ: ಪ್ರದೀಪ್​ 

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us