AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ

ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್​ನಲ್ಲಿ ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ನಡೆದಿದೆ. ಕಲ್ಕೆರೆ ನಿವಾಸಿ ನವೀನ್​ ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ
ಕ್ಷುಲ್ಲಕ ಕಾರಣಕ್ಕೆ ಬಾರ್​​ಲ್ಲಿ ಗಲಾಟೆ: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ
ರಾಮು, ಆನೇಕಲ್​
| Edited By: |

Updated on: Jun 26, 2024 | 10:06 PM

Share

ಆನೇಕಲ್​, ಜೂನ್​ 26: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್​ನಲ್ಲಿ (bar) ನಡೆದಿದೆ. ನವೀನ್ (35) ಮೃತ ವ್ಯಕ್ತಿ (death). ಇಂದು ಸಂಜೆ ಬಾರ್​ಗೆ ಮದ್ಯ ಸೇವಿಸಲು ಹೋಗಿದ್ದಾರೆ. ಇದೇ ವೇಳೆ ಪಕ್ಕದ ಟೇಬಲ್​ನಲ್ಲಿಯೇ ಕುಳಿತಿದ್ದ ಆರೋಪಿಗಳು ಯಾಕೋ ಗುರಾಯಿಸುತ್ತೀಯ ಎಂದು ವ್ಯಕ್ತಿ​ ಮೇಲೆ ಬಿಯರ್​ ಬಾಟಲ್​ನಿಂದ ತಲೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡು ವ್ಯಕ್ತಿ​​ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆತ್ ನೋಟ್ ಬರೆದಿಟ್ಟು ಯುವಕ ಅತ್ಮಹತ್ಯೆ

ಮೈಸೂರು: ಸಾಯಿ ಗಾರ್ಮೆಂಟ್ಸ್​​​ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿರಣ್(28) ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿರುವಂತಹ ಘಟನೆ ನಿನ್ನೆ ಸಂಜೆ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ಕಿರಣ್​ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ನಿವಾಸಿ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎಜಿಎಂ ಲೋಕೇಶ್, ಹೆಚ್ಆರ್​​ ಎಜಿಎಂ ಅನಿಲ್ ಕಾರಣ. ಉದ್ದೇಶಪೂರ್ವಕವಾಗಿಯೇ ನನ್ನನ್ನು ಕೆಲಸದಿಂದ ತೆಗೆದು, ಕೆಲಸ ಸಿಗದ ರೀತಿ ಮಾಡಿದ್ದಾರೆಂದು ಡೆತ್​ ನೋಟ್​​​ನಲ್ಲಿ ಉಲ್ಲೇಖಿಸಿದ್ದಾನೆ​. ​​ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಸವಾರ ಸಾವು

ಕೆಎಸ್​ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಮೈಸೂರು ಹೆಚ್.ಡಿ ಕೋಟೆ ರಸ್ತೆಯಲ್ಲಿ ನಡೆದಿದೆ. ಕುಮಾರ್ (30) ಮೃತ ದುರ್ದೈವಿ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು

ಚಿತ್ರದುರ್ಗ: ಮನೆ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ನಡೆದಿದೆ. ಹಳೇ ಮನೆ ದುರಸ್ತಿ ವೇಳೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದೆ. ರಾಮಜೋಗಿಹಳ್ಳಿಯ ಮುರುಳೀಧರ್(45) ದುರ್ಮರಣ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.