AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಅಪರಿಚಿತ ಮಹಿಳೆ ಮತ್ತು ಪುರುಷನ ಶವ ಪತ್ತೆ ಆಗಿದೆ. ನದಿಯಲ್ಲಿ ತೇಲುತ್ತಿದ್ದ ಜೋಡಿ ಶವ ನೋಡಲು ಜನರು ಮುಗಿಬಿದಿದ್ದರು. ಮತ್ತೊಂದು ಪ್ರಕರಣದಲ್ಲಿ ಸಾಲಭಾದೆಗೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ.

ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು
ಕಾವೇರಿ ನದಿಯಲ್ಲಿ ತೇಲಿ ಬಂದ ಮಹಿಳೆ-ಪುರುಷನ ಮೃತದೇಹ: ನೋಡಲು ಮುಗಿಬಿದ್ದ ಜನರು
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 03, 2024 | 6:14 PM

Share

ಮಂಡ್ಯ, ಜೂನ್​​ 03: ಕಾವೇರಿ ನದಿಯಲ್ಲಿ (Kaveri River) ಅಪರಿಚಿತ ಮಹಿಳೆ ಮತ್ತು ಪುರುಷನ ಶವ ಪತ್ತೆ (Dead body) ಆಗಿರುವಂತಹ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಆಗಿದ್ದು, ನದಿಯಲ್ಲಿ ತೇಲುತ್ತಿದ್ದ ಜೋಡಿ ಶವ ನೋಡಲು ಜನರು ಮುಗಿಬಿದಿದ್ದರು. ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ನದಿಯಿಂದ ಶವಗಳನ್ನು ಹೊರ ತೆಗೆದು ಗುರುತು ಪತ್ತೆಗಾಗಿ ತನಿಖೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಲಭಾದೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ 

ಸಾಲಭಾದೆಗೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ನಡೆದಿದೆ. ನಾಗರಾಜಮ್ಮ(52) ಆತ್ಮಹತ್ಯೆಗೆ ಶರಣಾ ರೈತ ಮಹಿಳೆ. ಒಂದೂವರೆ ಎಕರೆ ಜಮೀನು ಹೊಂದಿದ್ದರು.

ಇದನ್ನೂ ಓದಿ: ತಾಯಿ ಸಮಾನ ಅತ್ತಿಗೆ ಜೊತೆಗಿನ ಲವ್ವಿಡವ್ವಿಗಾಗಿ ಸ್ವಂತ ಅಣ್ಣನನ್ನೇ ಕೊಂದ ಕಾಮುಕ ತಮ್ಮ

ಗಂಡ ಮೃತಪಟ್ಟಿದ್ದ ಹಿನ್ನಲೆ ನಾಗರಾಜಮ್ಮ ಕೃಷಿಯನ್ನೆ ನಂಬಿದ್ದರು. ಕೃಷಿ ಹಾಗೂ ರೇಷ್ಮೆ ಹುಳು ಸಾಕಾಣಿಕೆಗಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಬ್ಯಾಂಕ್, ಪ್ರಾಥಮಿಕ ಕೃಷಿ ಪರಿಷತ್ತಿನ ಸಂಘ, ಶ್ರೀಶಕ್ತಿ ಸಂಘ ಹಾಗೂ ಖಾಸಗಿಯವರಿಂದ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ‌ ಮಾಡಿದ್ದಾರೆ. ಸಾಲಭಾದೆ ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿದ ಲೈನ್​ಮನ್ ಸಾವು

ಉಡುಪಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಾಹಿಸಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ನಡೆದಿದೆ. ಸಲೀಂ (38) ಮೃತ ಮೆಸ್ಕಾಂ ಸಿಬ್ಬಂದಿ.

ಇದನ್ನೂ ಓದಿ: Cyber Crime: ಸೈಬರ್​ ವಂಚನೆಯಲ್ಲಿ 2 ಕೋಟಿ ರೂ. ಕಳೆದುಕೊಂಡ ಕಾಫಿ ಬೆಳಗಾರ

ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ ಸಲೀಂ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಬೈಂದೂರು ಪರಿಸರದ ಜನಸ್ನೇಹಿ ಮೆಸ್ಕಾಂ ಸಿಬ್ಬಂದಿ ಆಗಿದ್ದಾರೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ