AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ

‘ಸೊಸೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ’ ಎಂದು ಪ್ರಭಾವತಿ ಮರಣ ಪತ್ರ ಬರೆದಿಟ್ಟಿದ್ದಾರೆ. ಅಸ್ವಸ್ಥರಾಗಿರುವ ಸುಭಾಷ್ ಚಂಗಪ್ಪಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾಡ್ಜ್​ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 09, 2021 | 10:32 PM

Share

ಮಡಿಕೇರಿ: ತಾಲ್ಲೂಕಿನ ಗೋಣಿಕೊಪ್ಪಲು ಪಟ್ಟಣದ ಲಾಡ್ಜ್​ನಲ್ಲಿ ಸಿ.ಎಸ್.ಪ್ರಭಾವತಿ (70) ಎಂಬಾಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ತೋಲಂಡ ಸುಭಾಷ್ ಚಂಗಪ್ಪ (50) ಪರಿಸ್ಥಿತಿ ಗಂಭೀರವಾಗಿದೆ. ‘ಸೊಸೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ’ ಎಂದು ಪ್ರಭಾವತಿ ಮರಣ ಪತ್ರ ಬರೆದಿಟ್ಟಿದ್ದಾರೆ. ಅಸ್ವಸ್ಥರಾಗಿರುವ ಸುಭಾಷ್ ಚಂಗಪ್ಪಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೀ ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟದಿಂದ ಇಬ್ಬರ ಸಾವು ವಿಜಯಪುರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಟೀ ಹೋಟೆಲ್​ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಕೃಷ್ಣಪ್ಪ (28) ಮತ್ತು ಭೂಮಿಕಾ (11) ಮೃತಪಟ್ಟಿದ್ದಾರೆ. ಖಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಂಡಾ ಕಾಯ್ದೆಯಡಿ ರೌಡೀಶೀಟರ್ ಬಂಧನ ಬೆಂಗಳೂರು: ಸಿಸಿಬಿ ಪೊಲೀಸರು ಗೂಂಡಾಕಾಯ್ದೆಯಡಿ ರೌಡಿಶೀಟರ್ ಸ್ಯಾಮ್ಯುಯೆಲ್​ನನ್ನು (24) ಬಂಧಿಸಿದ್ದಾರೆ. ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸ್ಯಾಮ್ಯುಯೆಲ್ ರೌಡಿಶೀಟರ್ ಆಗಿದ್ದ. 2008ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ಆರೋಪಿ ವಿರುದ್ಧ ಕೊಲೆಯತ್ನ, ಸುಲಿಗೆ ಸೇರಿದಂತೆ 5 ಪ್ರಕರಣಗಳಿದ್ದವು. ನಿರೀಕ್ಷಣಾ ಜಾಮೀನು ಪಡೆದು ಪುನಃ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಸದ್ಯ ಗೂಂಡಾ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಡಿಲು ಬಡಿದು ಎರಡು ಎತ್ತು, ಒಂದು ಹಸು ದುರ್ಮರಣ ಧಾರವಾಡ: ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಎತ್ತು, ಒಂದು ಹಸು ಸತ್ತುಹೋಗಿವೆ. ರೈತ ನಿಂಗಪ್ಪ ಕುಲಕರ್ಣಿಗೆ ಸೇರಿದ 3 ಜಾನುವಾರುಗಳು ಸಾವನ್ನಪ್ಪಿವೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಗಾಳಿಗೆ ಮರ ಉರುಳಿ ಮುರಿದು ಬಿದ್ದ 12 ವಿದ್ಯುತ್ ಕಂಬ ಬಾಗಲಕೋಟೆ: ಜಿಲ್ಲೆಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಭಾರಿ ಗಾಳಿಗೆ ಮರ ಉರುಳಿದ ಕಾರಣ 12 ವಿದ್ಯುತ್ ಕಂಬಗಳು ಮುರಿದುಬಿದ್ದಿವೆ. ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

ಇದನ್ನೂ ಓದಿ: ಡಿ.ಜೆ. ಹಳ್ಳಿ ಮಸೀದಿ ಆಡಳಿತ ಮಂಡಳಿ ವಿಚಾರವಾಗಿ ಮಚ್ಚು ಬೀಸಿದ ದುಷ್ಕರ್ಮಿಗಳು, ಕ್ಯಾಮೆರಾ ಮುಂದೆಯೇ ಕೊಲೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ