AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ; ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ಕೊಲೆ ಮಾಡಿದ್ದ ಆರೋಪಿ ಬಂಧನ

ಪ್ರಸನ್ನ ಕುಮಾರ್ ಅಣ್ಣನ ಮಗಳು ಮೌನಿಕಾಳನ್ನ ಆರೋಪಿ ರವಿಕುಮಾರ್ ಮದುವೆಯಾಗಿದ್ದ. ಮೌನಿಕಾಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪ್ರಸನ್ನ ಅಕೆಯನ್ನು ವಾಪಸ್ ತವರು ಮನೆಗೆ ಕರೆಸಿಕೊಂಡಿದ್ದ. ಕೋರ್ಟ್ನಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿತ್ತು.

ಕೌಟುಂಬಿಕ ಕಲಹ; ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ಕೊಲೆ ಮಾಡಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Dec 09, 2021 | 8:44 AM

Share

ತುಮಕೂರು: ಬಿ.ಕೆ.ಹಳ್ಳಿ ಬಳಿ ಪ್ರಸನ್ನಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರವಿಕುಮಾರ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿ ಕೌಟುಂಬಿಕ ಕಲಹ ಹಿನ್ನೆಲೆ ಡಿ.7ರಂದು ಕೊಲೆ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ (46) ಕೊಲೆಯಾದವ. ಅಪ್ಪಾಜಿಹಳ್ಳಿ ಗ್ರಾಮದ ರವಿಕುಮಾರ್ (35) ಬಂಧಿತ ಆರೋಪಿ.

ಪ್ರಸನ್ನ ಕುಮಾರ್ ಅಣ್ಣನ ಮಗಳು ಮೌನಿಕಾಳನ್ನ ಆರೋಪಿ ರವಿಕುಮಾರ್ ಮದುವೆಯಾಗಿದ್ದ. ಮೌನಿಕಾಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪ್ರಸನ್ನ ಅಕೆಯನ್ನು ವಾಪಸ್ ತವರು ಮನೆಗೆ ಕರೆಸಿಕೊಂಡಿದ್ದ. ಕೋರ್ಟ್ನಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿತ್ತು. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆ ಪ್ರಸನ್ನನನ್ನು ರವಿಕುಮಾರ್ ಕೊಲೆ ಮಾಡಿದ್ದ. ಪಾವಗಡಕ್ಕೆ ಹೋಗಿ ಬರುವಾಗ ಬಿಕೆ ಹಳ್ಳಿ ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಸದ್ಯ ತಿರುಮಣಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಚಾಲನೆ ವೇಳೆ ಆಕಸ್ಮಿಕವಾಗಿ ಬಿದ್ದು ಚಾಲಕ ಸಾವು ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಟ್ರ್ಯಾಕ್ಟರ್‌ನಿಂದ ಕೆಳಕ್ಕೆ ಬಿದ್ದು ಚಕ್ರದಡಿ ಸಿಲುಕಿ ಚಾಲಕ ಮೃತಪಟ್ಟಿದ್ದಾನೆ. ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ಗೆ ಸಿಲುಕಿ ಚಾಲಕ ಜೀವ ಕಳೆದುಕೊಂಡಿದ್ದಾನೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಾಟ ಮಾಡಿ ಮರಳುತ್ತಿದ್ದ ವೇಳೆ ಅಫಜಲಪುರ ಪಟ್ಟಣದಿಂದ ಕರಜಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡೇರಿ ಸರ್ಕಾರಿ ಶಾಲೆ ಬಳಿ 280 ಗ್ರಾಂ ಒಣ ಗಾಂಜಾ ಜಪ್ತಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾಮದ ಸರ್ಕಾರಿ ಶಾಲೆ ಬಳಿ ಗಾಂಜಾ ಮಾರುತ್ತಿದ್ದಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು ಮಧುಗಿರಿ ಅಬಕಾರಿ ಇಲಾಖೆ ಅಧಿಕಾರಿಗಳು 280 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದಿದ್ದಾರೆ. ಗಾಂಜಾ ಮಾರುತ್ತಿದ್ದ ಅಮರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೋಟ್ಸ್ ನೀಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ಎರಗಿದ ಕಾಮುಕ, ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ