AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ; ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ಕೊಲೆ ಮಾಡಿದ್ದ ಆರೋಪಿ ಬಂಧನ

ಪ್ರಸನ್ನ ಕುಮಾರ್ ಅಣ್ಣನ ಮಗಳು ಮೌನಿಕಾಳನ್ನ ಆರೋಪಿ ರವಿಕುಮಾರ್ ಮದುವೆಯಾಗಿದ್ದ. ಮೌನಿಕಾಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪ್ರಸನ್ನ ಅಕೆಯನ್ನು ವಾಪಸ್ ತವರು ಮನೆಗೆ ಕರೆಸಿಕೊಂಡಿದ್ದ. ಕೋರ್ಟ್ನಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿತ್ತು.

ಕೌಟುಂಬಿಕ ಕಲಹ; ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ ಕೊಲೆ ಮಾಡಿದ್ದ ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 09, 2021 | 8:44 AM

Share

ತುಮಕೂರು: ಬಿ.ಕೆ.ಹಳ್ಳಿ ಬಳಿ ಪ್ರಸನ್ನಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರವಿಕುಮಾರ್(35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಬಳಿ ಕೌಟುಂಬಿಕ ಕಲಹ ಹಿನ್ನೆಲೆ ಡಿ.7ರಂದು ಕೊಲೆ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್ (46) ಕೊಲೆಯಾದವ. ಅಪ್ಪಾಜಿಹಳ್ಳಿ ಗ್ರಾಮದ ರವಿಕುಮಾರ್ (35) ಬಂಧಿತ ಆರೋಪಿ.

ಪ್ರಸನ್ನ ಕುಮಾರ್ ಅಣ್ಣನ ಮಗಳು ಮೌನಿಕಾಳನ್ನ ಆರೋಪಿ ರವಿಕುಮಾರ್ ಮದುವೆಯಾಗಿದ್ದ. ಮೌನಿಕಾಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪ್ರಸನ್ನ ಅಕೆಯನ್ನು ವಾಪಸ್ ತವರು ಮನೆಗೆ ಕರೆಸಿಕೊಂಡಿದ್ದ. ಕೋರ್ಟ್ನಲ್ಲಿ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿತ್ತು. ಹೀಗಾಗಿ ಕೌಟುಂಬಿಕ ಕಲಹ ಹಿನ್ನೆಲೆ ಪ್ರಸನ್ನನನ್ನು ರವಿಕುಮಾರ್ ಕೊಲೆ ಮಾಡಿದ್ದ. ಪಾವಗಡಕ್ಕೆ ಹೋಗಿ ಬರುವಾಗ ಬಿಕೆ ಹಳ್ಳಿ ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಸದ್ಯ ತಿರುಮಣಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಚಾಲನೆ ವೇಳೆ ಆಕಸ್ಮಿಕವಾಗಿ ಬಿದ್ದು ಚಾಲಕ ಸಾವು ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಟ್ರ್ಯಾಕ್ಟರ್‌ನಿಂದ ಕೆಳಕ್ಕೆ ಬಿದ್ದು ಚಕ್ರದಡಿ ಸಿಲುಕಿ ಚಾಲಕ ಮೃತಪಟ್ಟಿದ್ದಾನೆ. ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ಗೆ ಸಿಲುಕಿ ಚಾಲಕ ಜೀವ ಕಳೆದುಕೊಂಡಿದ್ದಾನೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಾಟ ಮಾಡಿ ಮರಳುತ್ತಿದ್ದ ವೇಳೆ ಅಫಜಲಪುರ ಪಟ್ಟಣದಿಂದ ಕರಜಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡೇರಿ ಸರ್ಕಾರಿ ಶಾಲೆ ಬಳಿ 280 ಗ್ರಾಂ ಒಣ ಗಾಂಜಾ ಜಪ್ತಿ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾಮದ ಸರ್ಕಾರಿ ಶಾಲೆ ಬಳಿ ಗಾಂಜಾ ಮಾರುತ್ತಿದ್ದಾಗ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು ಮಧುಗಿರಿ ಅಬಕಾರಿ ಇಲಾಖೆ ಅಧಿಕಾರಿಗಳು 280 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದಿದ್ದಾರೆ. ಗಾಂಜಾ ಮಾರುತ್ತಿದ್ದ ಅಮರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೋಟ್ಸ್ ನೀಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ಎರಗಿದ ಕಾಮುಕ, ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?