AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಮೊಬೈಲ್​​ಗಾಗಿ ಸೋದರಿಯರಿಬ್ಬರ ಜಗಳ: ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಕ್ಷುಲ್ಲಕ ಕಾರಣಕ್ಕೆ ಅತ್ತಿಗೆಯನ್ನೇ ಮೈದುನ ಹತ್ಯೆಗೈದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸೂರು ಗ್ರಾಮದ ಮುಖ್ಯರಸ್ತೆಯ ಸಿಂಗಸಂದ್ರದಲ್ಲಿ ನಡೆದಿದೆ. ಬಿಹಾರ ಮೂಲದ ಗುಡಿಯಾ ಬೇಬಿ(42) ಯನ್ನು ರಾಜೇಶ್ ಕುಮಾರ್ ಹತ್ಯೆ ಮಾಡಿದ್ದಾರೆ. ರಾಜೇಶ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಆನೇಕಲ್: ಮೊಬೈಲ್​​ಗಾಗಿ ಸೋದರಿಯರಿಬ್ಬರ ಜಗಳ: ಅತ್ತಿಗೆಯನ್ನೇ ಹತ್ಯೆಗೈದ ಮೈದುನ
ಪ್ರಾತಿನಿಧಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Mar 25, 2024 | 8:07 PM

Share

ಆನೇಕಲ್, ಮಾರ್ಚ್​ 25: ಕ್ಷುಲ್ಲಕ ಕಾರಣಕ್ಕೆ ಅತ್ತಿಗೆಯನ್ನೇ ಮೈದುನ ಹತ್ಯೆಗೈದಿರುವಂತಹ (killed)  ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೊಸೂರು ಗ್ರಾಮದ ಮುಖ್ಯರಸ್ತೆಯ ಸಿಂಗಸಂದ್ರದಲ್ಲಿ ನಡೆದಿದೆ. ಬಿಹಾರ ಮೂಲದ ಗುಡಿಯಾ ಬೇಬಿ(42) ಯನ್ನು ರಾಜೇಶ್ ಕುಮಾರ್ ಹತ್ಯೆ ಮಾಡಿದ್ದಾರೆ. ಮೊಬೈಲ್​​ಗಾಗಿ ಅಕ್ಕ ಗುಡಿಯಾ ಬೇಬಿ ಹಾಗೂ ತಂಗಿ ಗೀತಾ ಕುಮಾರಿ ಜಗಳ ಮಾಡಿದ್ದಾರೆ. ಜಗಳ ಬಿಡಿಸಲು ಬಂದಿದ್ದ ಗುಡಿಯಾ ತಂಗಿ ಗಂಡ ರಾಜೇಶ್​ ಕುಮಾರ್​ನನ್ನ ಗುಡಿಯಾ ಬೇಬಿ ನಿಂದಿಸಿದ್ದಾಳೆ. ಹೀಗಾಗಿ ಸಿಟ್ಟಿನಿಂದ ಅತ್ತಿಗೆ ಮೇಲೆ ದೊಣ್ಣೆಯಿಂದ ಮೈದುನ ಥಳಿಸಿದ್ದಾರೆ.

ಹಲ್ಲೆಗೊಳಗಾಗಿದ್ದ ಗುಡಿಯಾ ಬೇಬಿ ಗಾಯಗೊಂಡಿದ್ದರು. ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಾಜೇಶ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಓವರ್​ಟೇಕ್ ಮಾಡುವ ಭರದಲ್ಲಿ ಪಿಕಪ್ ವಾಹನದಡಿ ಬಿದ್ದ ಬೈಕ್​​ ಸವಾರ ಸಾವು

ಮಂಗಳೂರು: ಓವರ್​ಟೇಕ್ ಮಾಡುವ ಭರದಲ್ಲಿ ಪಿಕಪ್ ವಾಹನದಡಿ ಬೈಕ್​ ಸವಾರ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಳಿ ಘಟನೆ ನಡೆದಿದೆ.

ಇದನ್ನೂ ಓದಿ: ಪತ್ನಿ ಮೇಲೆ ಪತಿಯಿಂದ ಹಲ್ಲೆ: ತಡೆಯಲು ಬಂದ ಪೊಲೀಸರ ಕೈಕಚ್ಚಿ ಹಲ್ಲೆಗೆ ಯತ್ನ

ಲಾಯಿಲ ನಿವಾಸಿ ಪುರುಷೋತ್ತಮ(19) ಮೃತ ವ್ಯಕ್ತಿ. ತೌಫಿಕ್(17) ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಳಿನ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವು

ಹಾವೇರಿ: ಮರಳಿನ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ನಡೆದಿದೆ. ಬಸವರಾಜ್ ಪವಾರ್(12), ನಾಗರಾಜ್ ಪವಾರ್(9) ಮೃತರು. ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ದುರಂತ ನಡೆದಿದೆ.

ಇದನ್ನೂ ಓದಿ: ಬೆಳಗಾವಿ ಪೊಲೀಸ್ ಠಾಣೆ ಆವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಅಕ್ರಮ ಮರಳುಗಾರಿಕೆಯೇ ದುರಂತಕ್ಕೆ ಕಾರಣ. ಮರಳು ದಂಧೆ ತಡೆಯುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು