AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ

ತನ್ನ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನನ್ನು ಪ್ರೀತಿಸಿದ ಮಗಳನ್ನು ಅಪ್ಪನೇ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದಲ್ಲಿ ನಡೆದಿದೆ.

Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ
ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಜ ಗ್ರಾಮದಲ್ಲಿ ಕಬ್ಬಿನ ಗದ್ದೆ ಬೆಂಕಿಗೆ ಆಹುತಿಯಾಗಿದೆ.
TV9 Web
| Edited By: |

Updated on:Oct 28, 2021 | 10:43 PM

Share

ಚಿಕ್ಕಮಗಳೂರು: ತನ್ನ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿಯೊಬ್ಬನನ್ನು ಪ್ರೀತಿಸಿದ ಮಗಳನ್ನು ಅಪ್ಪನೇ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದಲ್ಲಿ ನಡೆದಿದೆ. 18 ವರ್ಷದ ಮಗಳ ಕುತ್ತಿಗೆಗೆ ವೇಲ್ ಬಿಗಿದು ಅಪ್ಪನೇ ಕೊಲೆ ಮಾಡಿದ್ದಾನೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಶಿಕಾರಿಪುರ ತಾಲ್ಲೂಕಿನ ಕೆಂಚೇಗೌಡನಕೊಪ್ಪಲು ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಕಬ್ಬಿನಗದ್ದೆ ಬೆಂಕಿಗೆ ಆಹುತಿ ವಿಜಯಪುರ: ವಿದ್ಯುತ್​ ಶಾರ್ಟ್​​ ಸರ್ಕೀಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿಬಿದ್ದಿದ್ದು, ನಾಲ್ಕು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಚಡಚಣ ತಾಲ್ಲೂಕಿನ ಉಮರಜ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಮಲ್ಲಪ್ಪ ಇರಮಾಣಿ, ಉಮೇಶ್​​​ ಕಾಶೀನಾಥ ಅವರಿಗೆ ಸೇರಿದ ಬೆಳೆ ಭಸ್ಮವಾಗಿದೆ. ರೈತರಿಗೆ ಸುಮಾರು ₹ 8 ಲಕ್ಷ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ. ಚಡಚಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಸ್-ಬೈಕ್ ಡಿಕ್ಕಿ: ವ್ಯಕ್ತಿ ಸಾವು ಕೋಲಾರ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿಯಾಗಿ ದ್ವಿಚಕ್ರ ವಾಹನ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪಾತಬಲ್ಲಪಲ್ಲಿ ಬಳಿ ನಡೆದಿದೆ. ಮೃತನನ್ನು ಆಂಧ್ರ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಪುಂಗನೂರಿಗೆ ಹೋಗುತ್ತಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೊಬೈಲ್ ಕಸಿದು ಪರಾರಿ ನೆಲಮಂಗಲ: ಬೈಕ್​ನಲ್ಲಿ ತೆರಳುತ್ತಿದ್ದ ಜೋಡಿಯೊಂದು ಮಾತನಾಡುತ್ತಾ ತೆರಳುತ್ತಿದ್ದ ಯುವತಿಯಿಂದ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಹೆಸರಘಟ್ಟ ರಸ್ತೆಯ ಸೌಂದರ್ಯ ಕಾಲೇಜು ಬಳಿ ನಡೆದಿದೆ. ಪಲ್ಸರ್​ ಬೈಕ್​ನಲ್ಲಿ ಬಂದಿದ್ದ ಯುವಕ, ಯುವತಿ ಈ ಕೃತ್ಯ ಎಸಗಿದ್ದಾರೆ. ಮುನಿಕೊಂಡಪ್ಪ ಲೇಔಟ್​ನ ಶಿಲ್ಪಾ ಮೊಬೈಲ್ ಕಳೆದುಕೊಂಡವರು. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಒಟ್ಟಿಗೇ ಮದ್ಯಪಾನ ಮಾಡಲು ಲಿಕ್ಕರ್​ ಶಾಪ್​​​ಗೆ ಹೋದ ಸ್ನೇಹಿತರು; 10 ರೂ.ಗಾಗಿ ನಡೆದೇ ಹೋಯ್ತು ಭೀಕರ ಕೊಲೆ ಇದನ್ನೂ ಓದಿ: ರೈತರು ಪ್ರತಿಭಟನೆ ನಡೆಸುತ್ತಿದ್ದ ಜಾಗದಲ್ಲಿ ಭೀಕರ ಅಪಘಾತ; ಟ್ರಕ್​ ಹರಿದು ಮೂವರು ರೈತ ಮಹಿಳೆಯರ ದುರ್ಮರಣ

Published On - 10:42 pm, Thu, 28 October 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು