AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನದಾತನ ಬದುಕಿಗೆ ಕೊಳ್ಳಿ ಇಟ್ಟ ವಿದ್ಯುತ್ ತಂತಿಗಳು : ಬೆಳೆದು ನಿಂತಿದ್ದ ಅಡಿಕೆ, ಬಾಳೆ ಬೆಳೆ ಬೆಂಕಿಗಾಹುತಿ!

ರೈತ ಪ್ರವೀಣನ ಜಮೀನಿನಲ್ಲಿ ಬೆಳೆದಿದ್ದ ಐದರಿಂದ ಆರು ಲಕ್ಷ ರುಪಾಯಿ ಬೆಲೆ ಬಾಳುವ ಅಡಿಕೆ ಮತ್ತು ಬಾಳೆ ಬೆಳೆ ಸುಟ್ಟು ಕರಕಲಾಗಿವೆ. ಅದರ ಜೊತೆಗೆ ಜಮೀನಿಗೆ ನೀರು ಹಾಯಿಸಲು ಬಳಸುತ್ತಿದ್ದ ಪೈಪುಗಳು, ವಿದ್ಯುತ್ ಬೋರ್ಡ್ ಹೀಗೆ ನೀರಾವರಿ ಕೃಷಿಗೆ ಬಳಸುತ್ತಿದ್ದ ವಸ್ತುಗಳೆಲ್ಲವೂ ಸುಟ್ಟು ಹಾಳಾಗಿವೆ.

ಅನ್ನದಾತನ ಬದುಕಿಗೆ ಕೊಳ್ಳಿ ಇಟ್ಟ ವಿದ್ಯುತ್ ತಂತಿಗಳು : ಬೆಳೆದು ನಿಂತಿದ್ದ ಅಡಿಕೆ, ಬಾಳೆ ಬೆಳೆ ಬೆಂಕಿಗಾಹುತಿ!
ಬೆಳೆ ಸುಟ್ಟ ವಿದ್ಯುತ್ ತಂತಿಗಳು
ಪೃಥ್ವಿಶಂಕರ
|

Updated on:Mar 07, 2021 | 10:54 AM

Share

ಹಾವೇರಿ: ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿರುವ ಆ ರೈತನಿಗೆ ಕೃಷಿ ಬಿಟ್ಟರೆ ಬೇರೇನೂ ಗೊತ್ತಿರಲಿಲ್ಲ. ಇರುವ ನಾಲ್ಕು ಎಕರೆ ಜಮೀನಿನಲ್ಲಿ ಅಲ್ಲಿ ಇಲ್ಲಿ ಸಾಲ ಮಾಡಿಕೊಂಡು ಬೋರವೆಲ್ ಕೊರೆಸಿ, ನೀರಾವರಿ ಕೃಷಿ ಮಾಡಿಕೊಂಡು ಅಡಿಕೆ ಮತ್ತು ಬಾಳೆ ಬೆಳೆ ಬೆಳೆದಿದ್ದರು. ಅಡಿಕೆ‌‌ ಮತ್ತು ಬಾಳೆ‌ ಬೆಳೆ ಆಗಸದೆತ್ತರಕ್ಕೆ ಬೆಳೆದು ನಿಂತಿತ್ತು. ಆದರೆ ವಿದ್ಯುತ್ ತಂತಿಗಳಿಂದ ಹೊತ್ತಿಕೊಂಡ ಬೆಂಕಿಯ ಕಿಡಿ, ರೈತನ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ.

ಬೆಳೆ ಸುಟ್ಟ ವಿದ್ಯುತ್ ತಂತಿಗಳು.. ಹಿರೇಕೆರೂರು ಪಟ್ಟಣದ ರೈತ ಪ್ರವೀಣ ಅಬಲೂರ ಎಂಬುವರು ನಾಲ್ಕು ಎಕರೆ ಜಮೀನಿನಲ್ಲಿ ಅಡಿಕೆ ಮತ್ತು ಬಾಳೆ ಬೆಳೆದಿದ್ದರು. ಆದರೆ ರೈತ ಪ್ರವೀಣನ ಜಮೀನಿನಲ್ಲಿ‌ ವಿದ್ಯುತ್ ತಂತಿಗಳು ಹಾದು ಹೋಗಿದ್ದವು. ಆರಂಭದಲ್ಲಿ ಬೆಳೆ ಚಿಕ್ಕದಾಗಿದ್ದಗಲೆ ರೈತನಿಗೆ ವಿದ್ಯುತ್ ತಂತಿಗಳು ಆತಂಕ ಸೃಷ್ಟಿಸಿದ್ದವು‌. ಆಗಿನಿಂದಲೂ ರೈತ ಪ್ರವೀಣ ಸಾಕಷ್ಟು ಬಾರಿ ವಿದ್ಯುತ್ ಇಲಾಖೆ ಅಧಿಕಾರಿಗಳು ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳ ಮಾರ್ಗ ಬದಲಿಸುವಂತೆ ಮನವಿ ಮಾಡಿಕೊಂಡಿದ್ದನು. ಆದರೂ ಅಧಿಕಾರಿಗಳು ಪ್ರವೀಣನ ಮನವಿಗೆ ಸ್ಪಂಧಿಸಿರಲಿಲ್ಲ. ಹೀಗಾಗಿ ವಿದ್ಯುತ್ ತಂತಿಗಳಿಂದ ಹೊತ್ತಿಕೊಂಡ ಕಿಡಿ ಬಾಳೆ ಮತ್ತು ಅಡಿಕೆ ಬೆಳೆ ಸುಟ್ಟು ಕರಕಲಾಗುವಂತೆ ಮಾಡಿದೆ.

ಬೆಳೆ ಜೊತೆಗೆ ಪರಿಕರಗಳು ಸುಟ್ಟು ಕರಕಲು.. ರೈತ ಪ್ರವೀಣನ ಜಮೀನಿನಲ್ಲಿ ಬೆಳೆದಿದ್ದ ಐದರಿಂದ ಆರು ಲಕ್ಷ ರುಪಾಯಿ ಬೆಲೆ ಬಾಳುವ ಅಡಿಕೆ ಮತ್ತು ಬಾಳೆ ಬೆಳೆ ಸುಟ್ಟು ಕರಕಲಾಗಿವೆ. ಅದರ ಜೊತೆಗೆ ಜಮೀನಿಗೆ ನೀರು ಹಾಯಿಸಲು ಬಳಸುತ್ತಿದ್ದ ಪೈಪುಗಳು, ವಿದ್ಯುತ್ ಬೋರ್ಡ್ ಹೀಗೆ ನೀರಾವರಿ ಕೃಷಿಗೆ ಬಳಸುತ್ತಿದ್ದ ವಸ್ತುಗಳೆಲ್ಲವೂ ಸುಟ್ಟು ಹಾಳಾಗಿವೆ. ವಿದ್ಯುತ್ ತಂತಿಗಳಿಂದ ಹೊತ್ತಿಕೊಂಡ ಕಿಡಿಗೆ ಬೆಳೆಗಳು ಮಾತ್ರವಲ್ಲ ರೈತನ ಬದುಕಿಗೆ ಕೊಳ್ಳಿ ಬಿದ್ದಂತಾಗಿದೆ.

ಬೆಳೆ ಹಾಳಾದ ಮೇಲೆ ಜಮೀನಿಗೆ ಬಂದರು.. ಜಮೀನಿನಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿರುವ ಬಗ್ಗೆ ರೈತ ಪ್ರವೀಣ ಸಾಕಷ್ಟು ಬಾರಿ ವಿದ್ಯುತ್ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದ. ಆದರೆ ಅಧಿಕಾರಿಗಳು ಕನಿಷ್ಠಪಕ್ಷ ರೈತನ ಜಮೀನಿಗೆ ಭೇಟಿ ನೀಡುವ ಗೋಜಿಗೆ ಹೋಗಿರಲಿಲ್ಲ. ಆದರೆ ವಿದ್ಯುತ್ ತಂತಿಯ ಕಿಡಿ ಹೊತ್ತಿಕೊಂಡು ಬೆಳೆ ಸುಟ್ಟು ಕರಕಲಾದ ಮೇಲೆ‌ ವಿದ್ಯುತ್ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಮೀನಿಗೆ ಬಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದರು. ಆದರೆ ಐದರಿಂದ ಆರು ಲಕ್ಷ ರುಪಾಯಿಯಷ್ಟು ಬೆಳೆ ಮತ್ತು ಕೃಷಿ ಪರಿಕರಗಳು ಸುಟ್ಟು ಹಾಳಾಗಿವೆ.

ಬಾಳೆ ಮತ್ತು ಅಡಿಕೆ ಬೆಳೆದಿದ್ದ ಜಮೀನಿಗೆ ಬೆಂಕಿ ಬಿದ್ದು ಹಾಳಾದ ಮೇಲೆ‌ ಜಮೀನಿಗೆ ಭೇಟಿ ನೀಡಿ ವಿದ್ಯುತ್ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರೈತ ತನ್ನ ಸಂಕಟವನ್ನು ಅಧಿಕಾರಿಗಳ ಬಳಿ ಹೇಳಿಕೊಂಡ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ. ಆದರೆ ಅಧಿಕಾರಿಗಳು ಮಾತ್ರ ಈ ಬಗ್ಗೆ ತುಟಿ ಬಿಚ್ಚದೆ ಹಾನಿಯಾಗಿರುವ ಸ್ಥಳವನ್ನು ನೋಡಿ ಸೂಕ್ತ ಪರಿಹಾರ ಕೊಡಿಸುವುದಾಗಿ ಹೇಳಿ ಅಲ್ಲಿಂದ ಹೊರಟು ಹೋಗಿದ್ದಾರೆ.

ಜಮೀನಿನಲ್ಲಿ ವಿದ್ಯುತ್ ತಂತಿಗಳು ಹಾದು ಹೋಗಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದೆ. ವಿದ್ಯುತ್ ತಂತಿಗಳಿಂದ ಬೆಂಕಿ ಅವಘಡಗಳು ಸಂಭವಿಸುತ್ತವೆ ಎಂದು ಹೇಳುತ್ತಲೆ ಇದ್ದೆ. ಆದರೆ ಈಗ ಬೆಂಕಿ ಹೊತ್ತಿಕೊಂಡು ಬೆಳೆ ಸುಟ್ಟು ಕರಕಲಾಗಿದೆ. ಅಧಿಕಾರಿಗಳು ಈಗ ಬಂದು ಸಮಾಧಾನ ಹೇಳುತ್ತಿದ್ದಾರೆ. ಹಾಳಾದ ಮೇಲೆ ಏನು ಪ್ರಯೋಜನ. ರೈತರ ಬಗ್ಗೆ ನಿರ್ಲಕ್ಷ್ಯ ತೋರುವ ಇಂತಹ ಅಧಿಕಾರಿಗಳ ಮೇಲೆ ಸಂಬಂಧಿಸಿದ ಇಲಾಖೆಯ ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. -ಪ್ರವೀಣ ಅಬಲೂರ – ಬೆಳೆ ಹಾನಿಗೊಳಗಾದ ರೈತ.

ಇದನ್ನೂ ಓದಿ:ತಡರಾತ್ರಿ ಆಹಾರವ ಹುಡುಕಿ ಬಂದ ಕಾಡಾನೆ.. ಟ್ರಾನ್ಸ್​​ಫಾರ್ಮರ್​​ ಮೂಲಕ ವಿದ್ಯುತ್ ಪ್ರವಹಿಸಿ ಸಾವು

Published On - 10:51 am, Sun, 7 March 21

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್