AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿ ಅವಘಡ; ಬಳ್ಳಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಕಾಟನ್ ಸುಟ್ಟು ಕರಕಲು

ರೂಪನಗುಡಿ ಬಸವರಾಜ್ ಎಂಬುವರಿಗೆ ಸೇರಿದ ಕಾಟನ್ ಮಿಲ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಆಗಲೆ ಕಾಟನ್ ಮಿಲ್​ನಲ್ಲಿ ಇಡೀ ಹತ್ತಿ ರಾಶಿಗೆ ಬೆಂಕಿ ಅವರಿಸಿಕೊಂಡು ಬಿಟ್ಟಿತ್ತು.

ಅಗ್ನಿ ಅವಘಡ; ಬಳ್ಳಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಕಾಟನ್ ಸುಟ್ಟು ಕರಕಲು
ಸುಟ್ಟು ಕರಕಲಾಗಿರುವ ಹತ್ತಿ
sandhya thejappa
|

Updated on: Mar 25, 2021 | 1:22 PM

Share

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿರುಬೇಸಿಗೆ ಹೆಚ್ಚಾಗುತ್ತಿದ್ದಂತೆ ಅಗ್ನಿ ಅವಘಡಗಳು ಹೆಚ್ಚಾಗುತ್ತಿವೆ. ಕಾಟನ್ ಮಿಲ್​ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕೋಟಿ ಕೋಟಿ ಮೌಲ್ಯದ ಹತ್ತಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ನಗರದ ಹಂದ್ರಾಳು ರಸ್ತೆಯಲ್ಲಿರುವ ಬಿಲ್ವಾ ಕಾಟನ್ ಮಿಲ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ.

ರೂಪನಗುಡಿ ಬಸವರಾಜ್ ಎಂಬುವರಿಗೆ ಸೇರಿದ ಕಾಟನ್ ಮಿಲ್​ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಆಗಲೆ ಕಾಟನ್ ಮಿಲ್​ನಲ್ಲಿ ಇಡೀ ಹತ್ತಿ ರಾಶಿಗೆ ಬೆಂಕಿ ಅವರಿಸಿಕೊಂಡು ಬಿಟ್ಟಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ಮೂರ್ನಾಲ್ಕು ಗಂಟೆಗಳ ಕಾಲ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ತಕ್ಷಣ ನಿಯಂತ್ರಣಕ್ಕೆ ಬಂದಿರಲಿಲ್ಲ. ಮಿಲ್​ನಲ್ಲಿ ಸಂಪೂರ್ಣ ಕಾಟನ್ ಬೆಂಕಿಗೆ ಸುಟ್ಟು ಕರಕಲಾಗಿದೆ. ಇದರಿಂದ ಕೋಟ್ಯಾಂತರ ಮೌಲ್ಯದ ಹತ್ತಿ ನಾಶವಾಗಿದೆ.

ಆಕಸ್ಮಿಕ ಬೆಂಕಿಯಿಂದ ಕೋಟಿ ಕೋಟಿ ರೂ ಮೌಲ್ಯದ ಹತ್ತಿ ಸುಟ್ಟು ಹೋಗಿದೆ

ಕಾಟನ್ ಮಿಲ್ ಮಾಲೀಕರ ಮಾಹಿತಿ ಪ್ರಕಾರ ಸುಮಾರು 7 ಕೋಟಿಗೂ ಅಧಿಕ ಮೌಲ್ಯದ ಕಾಟನ್ ಹಾಗೂ ಬೀಜ ಸುಟ್ಟು ಕರಕಲಾಗಿದೆ. ಹೀಗಾಗಿ ಕಾಟನ್ ಮಿಲ್ ಮಾಲೀಕರು ತುಂಬಾ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ ರೈತರಿಗೂ ಸಂಕಷ್ಟ ಶುರುವಾಗಿದೆ. ಸಾಕಷ್ಟು ರೈತರು ಕಾಟನ್ ಮಿಲ್ಗೆ ಹತ್ತಿ ಮಾರಾಟ ಮಾಡಿದ್ದಾರೆ. ಇನ್ನೂ ಕೆಲ ರೈತರಿಗೆ ಹಣ ಕೊಡಬೇಕಾಗಿದೆ. ಈಗ ಹತ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಮಾಲೀಕರಿಗೆ ಭಾರಿ ನಷ್ಟ ಉಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಇವರ ನೆರವಿಗೆ ಬರಬೇಕು ಅಂತಾ ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ.

ಕಾಟನ್ ಮಿಲ್​ನಲ್ಲಿದ್ದ ಕಾಟನ್ ಜೊತೆಗೆ ಯಂತ್ರೋಪಕರಣಗಳು ಕೂಡ ಬೆಂಕಿಗಾಹುತಿ ಆಗಿವೆ. ಈಗಾಗಲೇ ಸಾಕಷ್ಟು ಆರ್ಥಿಕ ಸಂಕಷ್ಟದಲ್ಲಿದ್ದ ಕಾಟನ್ ಮಿಲ್​ಗೆ ಈಗ ಬೆಂಕಿಗಾಹುತಿಯಿಂದ ಕೋಟಿ ಕೋಟಿ ರೂ. ನಷ್ಟ ಉಂಟಾಗಿದೆ.

ಇದನ್ನೂ ಓದಿ

ಆಟೋದಲ್ಲಿ ಹಾಸ್ಯ ನಟನ ಮೃತದೇಹ ಪತ್ತೆ! ಅನುಮಾನ ಹುಟ್ಟುಹಾಕಿದ ಸಾವು

ಕೊರೊನಾ ಎರಡನೇ ಅಲೆ.. ಮಾಸ್ಕ್ ಹಾಕಲ್ಲ-ದಂಡ ಪಾವತಿಸಲ್ಲ ಎಂದು ಮಾರ್ಷಲ್​ಗಳ ಜೊತೆ ರಗಳೆ ತೆಗೆದ ಜನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್