AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮತ್ತು ಬೆಂಗಳೂರು ಬಂದ್​ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್​​, ಇಲ್ಲಿದೆ ವಿವರ

ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿತ್ತು. ಶುಕ್ರವಾರದ ಕರ್ನಾಟಕ ಬಂದ್​​ ನಡೆಸಿದ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ಆರ್​​ಟಿಸಿ ಹಾಗೂ ಮೆಟ್ರೋ ನಿಗಮಕ್ಕೆ ಕೋಟ್ಯಾಂತರ ರುಪಾಯಿ ನಷ್ಟವಾಗಿದೆ.

ಕರ್ನಾಟಕ ಮತ್ತು ಬೆಂಗಳೂರು ಬಂದ್​ನಿಂದ ರಾಜ್ಯಕ್ಕೆ ಕೋಟಿ ಕೋಟಿ ರೂ. ಲಾಸ್​​, ಇಲ್ಲಿದೆ ವಿವರ
ವಿಧಾನಸೌಧ
ಕಿರಣ್​ ಸೂರ್ಯ
| Edited By: |

Updated on: Sep 30, 2023 | 10:04 AM

Share

ಬೆಂಗಳೂರು ಸೆ.30: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹರಿಸುವತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು, ರೈತರು, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ (Karnataka Government) ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಒಂದೇ ವಾರದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಿದ್ದವು. ಇದರಿಂದ ಸರ್ಕಾರಕ್ಕೆ ಕೋಟಿ ಕೋಟಿ ರೂ. ನಷ್ಟವಾಗಿದೆ. ವಾರದಲ್ಲಿ ಎರಡು, ಎರಡು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳಿಗೆ, ಹೋಟೆಲ್, ಬಾರ್ ರೆಸ್ಟೋರೆಂಟ್ ಮತ್ತು ವೈನ್ ಸ್ಟೋರ್ಸ್ ನಷ್ಟ ಅನುಭವಿಸಿವೆ.

ಕಾವೇರಿ ನೀರಿಗಾಗಿ ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿತ್ತು. ಶುಕ್ರವಾರದ ಕರ್ನಾಟಕ ಬಂದ್​​ ನಡೆಸಿದ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ಆರ್​​ಟಿಸಿ ಹಾಗೂ ಮೆಟ್ರೋ ನಿಗಮಕ್ಕೆ ಕೋಟ್ಯಾಂತರ ರುಪಾಯಿ ನಷ್ಟವಾಗಿದೆ. ಮಂಗಳವಾರ ಮತ್ತು ಶುಕ್ರವಾರ ಕೆಎಸ್ಆರ್ಟಿಸಿ ಬಿಎಂಟಿಸಿ ಮತ್ತು ‌ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ತೀರ ‌ಕಡಿಮೆ ಇತ್ತು. ಈ ಹಿನ್ನೆಲೆಯಲ್ಲಿ ಮೂರು ನಿಗಮಗಳಿಗೆ ಅಂದಾಜು 15 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮೂರು ನಿಗಮಗಳ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ​ ರಾಜ್ಯ ಸರ್ಕಾರ

ಮೆಟ್ರೋ ಒಂದು ದಿನದ ಆದಾಯ- 1.6 ರಿಂದ 1.7 ಕೋಟಿ ರೂ., ಕೆಎಸ್ಆರ್​​ಟಿಸಿಗೆ 9 ರಿಂದ 10 ಕೋಟಿ ರೂ. ಹಾಗೂ ಬಿಎಂಟಿಸಿಗೆ 4 ರಿಂದ 5 ಕೋಟಿ ರೂ. ಆದಾಯ ಹರಿದು ಬರುತ್ತಿತ್ತು. ಆದರೆ ಬಂದ್​​ನಿಂದ ಸಾಕಷ್ಟು ನಷ್ಟವಾಗಿದೆ.

ಬೆಂಗಳೂರಿನಲ್ಲಿ ಸುಮಾರು ಐದು ಸಾವಿರ ಹೋಟೆಲ್​ಗಳಿವೆ. ಮಂಗಳವಾರ ಮತ್ತು ಶುಕ್ರವಾರದ ಬಂದ್ ನಿಂದ ಅಂದಾಜು 100 ರಿಂದ 120 ಕೋಟಿ ರುಪಾಯಿ ಲಾಸ್​ ಆಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದಲ್ಲಿ 10 ಸಾವಿರ ಹೋಟೆಲ್​ಗಳಿವೆ. ಶುಕ್ರವಾರದ ಬಂದ್​ನಿಂದ ಅಂದಾಜು 150 ರಿಂದ 160 ಕೋಟಿ ರೂ. ನಷ್ಟವಾಗಿದೆ ಎಂದು ಹೊಟೇಲ್​ ಮತ್ತು ಮದ್ಯ ಮಾರಾಟ ಅಸೋಸಿಯೇಷನ್ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಒಟ್ಟು 3850 ಮದ್ಯ ಮಾರಾಟ ಅಂಗಡಿಗಳಿವೆ. ಮಂಗಳವಾರ ಮತ್ತು ಶುಕ್ರವಾರದ ಬಂದ್​ನಿಂದ ಅಂದಾಜು 180 ರಿಂದ 200 ಕೋಟಿ ರೂಪಾಯಿ ವಹಿವಾಟು ನಷ್ಟ ಉಂಟಾಗಿರುವ ಬಗ್ಗೆ ಟಿವಿ9 ಡಿಜಿಟಲ್​ಗೆ ಮಾಹಿತಿ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ