AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಶಾಸಕರು ಅಡ್ಡಮತದಾನ, ಕೋಡ್ ವರ್ಡ್ ಪಾಲಿಸದೇ ಎಡವಟ್ಟು: ಸತ್ಯಶೋಧನಾ ಸಮಿತಿ ವರದಿಯ ಸ್ಫೋಟಕ ಅಂಶ ಬಹಿರಂಗ

BJP MLAs Cross Voting: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣ, ಈಗ ಕಮಲಪಡೆಯಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ಸತ್ಯಾಂಶ ಪತ್ತೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಚಿಸಿದ್ದ ಸತ್ಯಶೋಧನಾ ಸಮಿತಿ ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಹಾಗಿದ್ರೆ ವರದಿಯಲ್ಲಿ ಏನಿದೆ? ಯಾವ ಶಿಫಾರಸುಗಳಿವೆ? ಪಕ್ಷದ ಮುಂದಿನ ನಡೆ ಏನು? ಈ ಕುರಿತ ಇನ್ಸೈಡ್ ವರದಿ ಇಲ್ಲಿದೆ.

12 ಶಾಸಕರು ಅಡ್ಡಮತದಾನ, ಕೋಡ್ ವರ್ಡ್ ಪಾಲಿಸದೇ ಎಡವಟ್ಟು: ಸತ್ಯಶೋಧನಾ ಸಮಿತಿ ವರದಿಯ ಸ್ಫೋಟಕ ಅಂಶ ಬಹಿರಂಗ
ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ
Anil Kalkere
| Edited By: |

Updated on: Jun 27, 2026 | 9:28 PM

Share

ಮುಖ್ಯಾಂಶಗಳು

  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೈ ಸೇರಿದ ಸತ್ಯಶೋಧನಾ ಸಮಿತಿ ವರದಿ
  • ಬಿಜೆಪಿ-ಜೆಡಿಎಸ್ ನಿಂದ 12 ಶಾಸಕರು ಅಡ್ಡಮತದಾನ ಮಾಡಿದ ಶಂಕೆ
  • ಬೆಳಗಾವಿ ಮೂಲದ ಹಿರಿಯ ಶಾಸಕರಿಂದಲೇ ಅಡ್ಡ ಮತದಾನ

ಬೆಂಗಳೂರು, (ಜೂನ್ 27): ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ (karnataka MLC Elections 2026) ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್ (BJP And JDS)  ಶಾಸಕರು ಅಡ್ಡಮತದಾನ (Cross Voting) ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಇದನ್ನು ಹೈಕಮಾಂಡ್ ನಾಯಕರು ಸಹ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಈ ಸಂಬಂಧ ರಾಜ್ಯ ಬಿಜೆಪಿ ರಚಿಸಿದ್ದ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ ನೀಡಿದೆ. ಸಿಟಿ ರವಿ ನೇತೃತ್ವದ ಸಮಿತಿ ಇಂದು (ಜೂನ್ 27) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ನೀಡಿದ್ದು, ಎನ್‌ಡಿಎ ಮೈತ್ರಿಗೆ ಸೇರಿದ್ದ 12 ಮತಗಳಲ್ಲಿ ಒಂದು ಅಸಿಂಧುವಾಗಿದೆ. ಇನ್ನುಳಿದ ಮೂರು ಮತಗಳು ಕ್ರಾಸ್ ವೋಟಿಂಗ್ ಆಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

3 ಪುಟಗಳ ಮಧ್ಯಂತರ ವರದಿ ಸಲ್ಲಿಕೆ

ಮೈತ್ರಿ ಅಭ್ಯರ್ಥಿಗೆ ನಿರೀಕ್ಷಿತ ಮತಗಳು ಸಿಗದ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿ.ಟಿ. ರವಿ, ಮಾಜಿ ಸಚಿವ ಎನ್. ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದರು. ನಾಲ್ಕು ದಿನಗಳ ಕಾಲ ಪಕ್ಷದ ಶಾಸಕರು, ಮುಖಂಡರು ಹಾಗೂ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ಸಮಿತಿ, ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮುಚ್ಚಿದ ಲಕೋಟೆಯಲ್ಲಿ ಸುಮಾರ 3 ಪುಟಗಳ ಮಧ್ಯಂತರ ವರದಿಯನ್ನು ವಿಜಯೇಂದ್ರ ಅವರಿಗೆ ಸಲ್ಲಿಸಿದೆ.

ಇದನ್ನೂ ಓದಿ: ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ವರದಿ ಸಲ್ಲಿಕೆ ಮುನ್ನವೇ ಸ್ಫೋಟಕ ಮಾಹಿತಿ ಬಹಿರಂಗ

ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಸಿ.ಟಿ. ರವಿ, ಪಕ್ಷದ ಅಧ್ಯಕ್ಷರ ಸೂಚನೆಯಂತೆ ಆಂತರಿಕ ತನಿಖೆ ನಡೆಸಿ ವರದಿ ನೀಡಿದ್ದೇವೆ ಎಂದರು. ಮಾಧ್ಯಮಗಳಲ್ಲಿ ಬಂದ ಮಾಹಿತಿ, ವಿವಿಧ ನಾಯಕರ ಅಭಿಪ್ರಾಯ ಹಾಗೂ ಲಭ್ಯ ಮಾಹಿತಿಯ ಆಧಾರದಲ್ಲಿ ವರದಿ ಸಿದ್ಧಪಡಿಸಲಾಗಿದೆ. ಇದು ಸಂಪೂರ್ಣ ಆಂತರಿಕ ವರದಿಯಾಗಿರುವುದರಿಂದ ಸಾರ್ವಜನಿಕವಾಗಿ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಎನ್‌ಡಿಎ ಮೈತ್ರಿಗೆ ಸೇರಿದ್ದ 12 ಮತಗಳಲ್ಲಿ ಒಂದು ಅಸಿಂಧುವಾಗಿದ್ದು, ಮೂರು ಮತಗಳು ಕ್ರಾಸ್ ವೋಟಿಂಗ್ ಆಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಮಿತಿ ನೀಡಿದ ವರದಿಯ ಪ್ರಮುಖ ಅಂಶಗಳೇನು?

  • ಮೈತ್ರಿ ಪಕ್ಷದಿಂದ ಒಟ್ಟು 12 ಶಾಸಕರಿಂದ ಅಡ್ಡ ಮತದಾನ ಮಾಡಿರುವ ಅನುಮಾನ
  • ಈ ಪೈಕಿ ಬಿಜೆಪಿಯಿಂದ ಒಂದು ಅಸಿಂಧು ಮತ
  •  ಒಟ್ಟು ನಾಲ್ಕು ಅಡ್ಡ ಮತಗಳ ಲೆಕ್ಕಾಚಾರ
  • ಅಡ್ಡ ಮತದಾನ ಮಾಡಿದ ಶಾಸಕರ ಹೆಸರುಗಳನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ
  •  ಬದಲಾಗಿ ಅಡ್ಡ ಮತಗಳ ಸಂಖ್ಯೆಯನ್ನು ಮಾತ್ರ ದಾಖಲಿಸಿದೆ
  •  ಅನುಮಾನ ಇರುವ ಶಾಸಕರ ಮೇಲೆ ತೀವ್ರ ನಿಗಾ ಇಡುವಂತೆ ಸಮಿತಿ ಶಿಫಾರಸು

ಬೆಳಗಾವಿ ಮೂಲದ ಹಿರಿಯ ಶಾಸಕರಿಂದಲೇ ಅಡ್ಡ ಮತದಾನ

ಮಾಹಿತಿಯ ಪ್ರಕಾರ, ಬೆಳಗಾವಿ ಮೂಲದ ಹಿರಿಯ ಶಾಸಕರಿಂದಲೇ ಅಡ್ಡ ಮತದಾನ ನಡೆದಿದೆ ಎಂಬ ಶಂಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಸಮಿತಿ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದ್ದು, ಆಂತರಿಕವಾಗಿ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ. ಕೇಂದ್ರ ನಾಯಕತ್ವದ ಮುಂದೆಯೂ ಬೆಳಗಾವಿ ರಾಜಕಾರಣ ಮತ್ತು ಅಡ್ಡ ಮತದಾನ ಪ್ರಕರಣ ಪ್ರಸ್ತಾಪವಾಗಿದ್ದು, ಕುತೂಹಲ ಹೆಚ್ಚಿಸಿದೆ. ಇದೀಗ ಕೇಂದ್ರ ನಾಯಕರು ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ರಾಜ್ಯ ನಾಯಕರಿಗೆ ಸೂಕ್ತ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಕೋಡ್ ವರ್ಡ್ ಸಲಹೆ ಪಾಲಿಸದೆಯೇ ಎಡವಟ್ಟು

ವಿಧಾನ ಪರಿಷತ್ ಚುನಾವಣೆಯ ಮತದಾನದ ಸಂದರ್ಭದಲ್ಲಿ ಶಾಸಕರಿಗೆ ವಿನೂತನ ಮಾದರಿಯ ಕೋಡ್ ವರ್ಡ್ ಸಲಹೆ ನೀಡಲಾಗಿತ್ತು. ಈ ಹಿಂದೆ ರಾಜ್ಯಸಭಾ ಮತ್ತು ಪರಿಷತ್ ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಫಾರ್ಮೆಟ್ ರೆಡಿ ಮಾಡಿದ್ದರು. ಆ ಫಾರ್ಮೆಟ್ ಅನುಗುಣವಾಗಿ ಶಾಸಕರಿಗೆ ಇಂತಹ ವ್ಯಕ್ತಿಗೆ ಮತಹಾಕಲು ಕೋಡ್ ರೆಡಿ ಮಾಡುತ್ತಿದ್ದರು. ಆದ್ರೆ ರಾಜ್ಯ ನಾಯಕರು ಇದನ್ನ ಕಡಗಣಿಸಿರುವ ಆರೋಪ ಕೇಳಿ ಬರ್ತಿದೆ.

ಹಿರಿಯ ನಾಯಕರು ಅಸಮಾಧಾನ

ಪರಿಸ್ಥಿತಿಯನ್ನ ಗಂಭೀರವಾಗಿ ಪರಿಗಣಿಸಿಲ್ಲ ಎಂದ ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ. ಸಂಖ್ಯೆ ಕಡಿಮೆ ಇದ್ದರು ರೆಸಾರ್ಟ್‌ಗೆ ಕರೆದುಕೊಂಡು ಹೋಗಿ ಪ್ಲ್ಯಾನ್ ಮಾಡಿಲ್ಲ. ಮತದಾನದ ಬೆಳಗ್ಗೆ ವಿಪ್ ಜಾರಿ ಮಾಡಿದ್ದಾರೆಂದು ಬಿಜೆಪಿ ಹಿರಿಯ ನಾಯಕರು ಬೇಸರಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ 28 ಮತಗಳು ಅಗತ್ಯ. ಆದ್ರೆ 30 ಮತಗಳು ಹಾಕಿಸಿದ್ದಾರೆ. 29 ಮತದಾನ ಹಾಕಿದ್ರು ಪರವಾಗಿಲ್ಲ. ಆದ್ರೆ 30 ಮತ ಹಾಕಿಸಿ NDA ಅಭ್ಯರ್ಥಿಗೆ ಮತ ಕೊರತೆ ಉಂಟಾಗಿತ್ತು. ಹಿರಿಯರ ಸಲಹೆ ಪರಿಗಣಿಸುತ್ತಿಲ್ಲ ಎಂಬ ಆರೋಪಗಳು, ಅಸಮಾಧಾನವೂ ಜೋರಾಗಿಯೇ ಕೇಳಿ ಬರ್ತಿದೆ‌.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕೂಡ ಪ್ರತಿಕ್ರಿಯೆ ನೀಡಿದ್ದು, ವರದಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆಯಾಗಿದೆ. ಮುಂದಿನ ಹಂತದಲ್ಲಿ ಅದನ್ನು ಪಕ್ಷದ ಹೈಕಮಾಂಡ್‌ಗೆ ರವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ವರದಿ ಆಂತರಿಕ ತನಿಖೆಯ ಭಾಗವಾಗಿರುವುದರಿಂದ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. ಅಡ್ಡ ಮತದಾನ ಮಾಡಿದವರ ಸಂಖ್ಯೆ ಬಗ್ಗೆ ಊಹಾಪೋಹ ನಡೆಸಬಾರದು ಎಂದು ಹೇಳಿದ ಅವರು, ಮುಂದಿನ ಕ್ರಮವನ್ನು ಪಕ್ಷದ ನಾಯಕರೇ ನಿರ್ಧರಿಸಲಿದ್ದಾರೆಂದು ಸ್ಪಷ್ಟಪಡಿಸಿದರು.

ಸದ್ಯಕ್ಕೆ ಸತ್ಯ ಶೋಧನಾ ವರದಿಯ ಆಧಾರದ ಮೇಲೆ ಕೋರ್ ಕಮಿಟಿ ಹಾಗೂ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳುತ್ತೆ ಅಂತ ಹೇಳಲಾಗ್ತಿದೆ. ಮತ್ತೊಂದೆಡೆ ಕೇಂದ್ರದ ನಾಯಕರು ಚುನಾವಣೆ ವೇಳೆ ನೀಡಿದ್ದ ಮಾದರಿಯ ಕೋಡ್ ವರ್ಡ್ ರಾಜ್ಯದ ನಾಯಕರು ಕಡಿಗಣಿಸಿದ್ದು ಮತ್ತೊಂದು ಅಸಮಾಧಾನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!