AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದಾರೆ. ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಸಮರಸಾರಿದ ಬಿಜೆಪಿ ನಾಯಕರು, ನಾಳೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
ರಾಜ್ಯಸಭೆಯಲ್ಲಿ ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on: Feb 27, 2024 | 5:51 PM

Share

ಬೆಂಗಳೂರು, ಫೆ.27: ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Rajya Sabha Election) ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದು, ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಕ್ರಮಕ್ಕೆ ಮುಂದಾದ ರಾಜ್ಯ ಬಿಜೆಪಿ ನಾಯಕರು ನಾಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಎಸ್​.ಟಿ.ಸೋಮಶೇಖರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಹೀಗೆ ದೂರು ನೀಡಲು ಬಿಜೆಪಿಗೆ 15 ದಿನಗಳ ಕಾಲಾವಕಾಶವಿದೆ. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಕೋರ್ಟ್​ ಮೊರೆ ಹೋಗಲು ಬಿಜೆಪಿ ನಾಯಕರು ಚಿಂತಿಸಿದ್ದಾರೆ.

ಹೈಕಮಾಂಡ್​ಗೆ ಮಾಹಿತಿ ನೀಡಲಿರುವ ರಾಜ್ಯ ಬಿಜೆಪಿ

ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು​ ಬಿಜೆಪಿ ವಿಪ್ ಉಲ್ಲಂಘನೆ ಮಾಡಿದ ಕುರಿತು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್​ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕ ಮಾಹಿತಿ ನೀಡಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್​ ಅನರ್ಹವಾಗ್ತಾರಾ? ಏನು ಕ್ರಮವಾಗಬಹುದು? ಇಲ್ಲಿದೆ ವಿವರ

ಬ್ಯಾಲೆಟ್ ಪೇಪರ್ ಬದಲಾವಣೆಗೆ ಸೂಚಿಸಿದ ಬಿಜೆಪಿ ಏಜೆಂಟ್

ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್​ ಮಕೇನ್​ ಅವರಿಗೆ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್​ಗೆ ಮತ ಹಾಕಿ ಬಿಜೆಪಿ ಅಧಿಕೃತ ಏಜೆಂಟ್ ಆಗಿದ್ದ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ತೋರಿಸಿದ್ದರು.

ಅಡ್ಡಮತದಾನವಾದ ಬಗ್ಗೆ ತಿಳಿದ ಬೆಲ್ಲದ್, ಬ್ಯಾಲೆಟ್ ರದ್ದುಗೊಳಿಸಿ ಇನ್ನೊಂದು ಬ್ಯಾಲೆಟ್ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದರು. ಆದರೆ ಇಲ್ಲ, ತೋರಿಸುತ್ತಿದ್ದೇನೆ ನೋಡಿ ಎಂದು ಸೋಮಶೇಖರ್ ಅವರು ಬಾಕ್ಸ್​ಗೆ ಮತ ಪತ್ರ ಹಾಕಿದರು. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸಿದ್ದನ್ನು ಪಕ್ಷ ನೇಮಿಸಿದ ಅಧಿಕೃತ ಏಜೆಂಟರ್​ಗಳಿಗೆ ತೋರಿಸುವ ನಿಮಯ ಇದೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ