ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದಾರೆ. ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಸಮರಸಾರಿದ ಬಿಜೆಪಿ ನಾಯಕರು, ನಾಳೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
ರಾಜ್ಯಸಭೆಯಲ್ಲಿ ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
Follow us
| Updated By: Rakesh Nayak Manchi

Updated on: Feb 27, 2024 | 5:51 PM

ಬೆಂಗಳೂರು, ಫೆ.27: ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Rajya Sabha Election) ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದು, ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಕ್ರಮಕ್ಕೆ ಮುಂದಾದ ರಾಜ್ಯ ಬಿಜೆಪಿ ನಾಯಕರು ನಾಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಎಸ್​.ಟಿ.ಸೋಮಶೇಖರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಹೀಗೆ ದೂರು ನೀಡಲು ಬಿಜೆಪಿಗೆ 15 ದಿನಗಳ ಕಾಲಾವಕಾಶವಿದೆ. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಕೋರ್ಟ್​ ಮೊರೆ ಹೋಗಲು ಬಿಜೆಪಿ ನಾಯಕರು ಚಿಂತಿಸಿದ್ದಾರೆ.

ಹೈಕಮಾಂಡ್​ಗೆ ಮಾಹಿತಿ ನೀಡಲಿರುವ ರಾಜ್ಯ ಬಿಜೆಪಿ

ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು​ ಬಿಜೆಪಿ ವಿಪ್ ಉಲ್ಲಂಘನೆ ಮಾಡಿದ ಕುರಿತು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್​ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕ ಮಾಹಿತಿ ನೀಡಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್​ ಅನರ್ಹವಾಗ್ತಾರಾ? ಏನು ಕ್ರಮವಾಗಬಹುದು? ಇಲ್ಲಿದೆ ವಿವರ

ಬ್ಯಾಲೆಟ್ ಪೇಪರ್ ಬದಲಾವಣೆಗೆ ಸೂಚಿಸಿದ ಬಿಜೆಪಿ ಏಜೆಂಟ್

ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್​ ಮಕೇನ್​ ಅವರಿಗೆ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್​ಗೆ ಮತ ಹಾಕಿ ಬಿಜೆಪಿ ಅಧಿಕೃತ ಏಜೆಂಟ್ ಆಗಿದ್ದ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ತೋರಿಸಿದ್ದರು.

ಅಡ್ಡಮತದಾನವಾದ ಬಗ್ಗೆ ತಿಳಿದ ಬೆಲ್ಲದ್, ಬ್ಯಾಲೆಟ್ ರದ್ದುಗೊಳಿಸಿ ಇನ್ನೊಂದು ಬ್ಯಾಲೆಟ್ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದರು. ಆದರೆ ಇಲ್ಲ, ತೋರಿಸುತ್ತಿದ್ದೇನೆ ನೋಡಿ ಎಂದು ಸೋಮಶೇಖರ್ ಅವರು ಬಾಕ್ಸ್​ಗೆ ಮತ ಪತ್ರ ಹಾಕಿದರು. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸಿದ್ದನ್ನು ಪಕ್ಷ ನೇಮಿಸಿದ ಅಧಿಕೃತ ಏಜೆಂಟರ್​ಗಳಿಗೆ ತೋರಿಸುವ ನಿಮಯ ಇದೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ