AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದಾರೆ. ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಸಮರಸಾರಿದ ಬಿಜೆಪಿ ನಾಯಕರು, ನಾಳೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
ರಾಜ್ಯಸಭೆಯಲ್ಲಿ ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on: Feb 27, 2024 | 5:51 PM

Share

ಬೆಂಗಳೂರು, ಫೆ.27: ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ (Rajya Sabha Election) ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ಅವರು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಹಾಕಿದ್ದು, ಇನ್ನೊಬ್ಬ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಮತದಾನಕ್ಕೆ ಆಗಮಿಸದೆ ಗೈರಾಗಿದ್ದಾರೆ. ಸದ್ಯ, ಈ ಇಬ್ಬರು ನಾಯಕರ ವಿರುದ್ಧ ಕ್ರಮಕ್ಕೆ ಮುಂದಾದ ರಾಜ್ಯ ಬಿಜೆಪಿ ನಾಯಕರು ನಾಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಮುಂದಾಗಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಎಸ್​.ಟಿ.ಸೋಮಶೇಖರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್ ಯುಟಿ ಖಾದರ್​ಗೆ ದೂರು ನೀಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಹೀಗೆ ದೂರು ನೀಡಲು ಬಿಜೆಪಿಗೆ 15 ದಿನಗಳ ಕಾಲಾವಕಾಶವಿದೆ. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ಕೋರ್ಟ್​ ಮೊರೆ ಹೋಗಲು ಬಿಜೆಪಿ ನಾಯಕರು ಚಿಂತಿಸಿದ್ದಾರೆ.

ಹೈಕಮಾಂಡ್​ಗೆ ಮಾಹಿತಿ ನೀಡಲಿರುವ ರಾಜ್ಯ ಬಿಜೆಪಿ

ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರು​ ಬಿಜೆಪಿ ವಿಪ್ ಉಲ್ಲಂಘನೆ ಮಾಡಿದ ಕುರಿತು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್​ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪ್ರತ್ಯೇಕ ಮಾಹಿತಿ ನೀಡಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಡ್ಡಮತದಾನ ಮಾಡಿದ ಬಿಜೆಪಿ ಶಾಸಕ ಸೋಮಶೇಖರ್​ ಅನರ್ಹವಾಗ್ತಾರಾ? ಏನು ಕ್ರಮವಾಗಬಹುದು? ಇಲ್ಲಿದೆ ವಿವರ

ಬ್ಯಾಲೆಟ್ ಪೇಪರ್ ಬದಲಾವಣೆಗೆ ಸೂಚಿಸಿದ ಬಿಜೆಪಿ ಏಜೆಂಟ್

ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್​ ಮಕೇನ್​ ಅವರಿಗೆ ಮತ ಚಲಾಯಿಸಿದ್ದಾರೆ. ಬ್ಯಾಲೆಟ್ ಪೇಪರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್​ಗೆ ಮತ ಹಾಕಿ ಬಿಜೆಪಿ ಅಧಿಕೃತ ಏಜೆಂಟ್ ಆಗಿದ್ದ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ತೋರಿಸಿದ್ದರು.

ಅಡ್ಡಮತದಾನವಾದ ಬಗ್ಗೆ ತಿಳಿದ ಬೆಲ್ಲದ್, ಬ್ಯಾಲೆಟ್ ರದ್ದುಗೊಳಿಸಿ ಇನ್ನೊಂದು ಬ್ಯಾಲೆಟ್ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದರು. ಆದರೆ ಇಲ್ಲ, ತೋರಿಸುತ್ತಿದ್ದೇನೆ ನೋಡಿ ಎಂದು ಸೋಮಶೇಖರ್ ಅವರು ಬಾಕ್ಸ್​ಗೆ ಮತ ಪತ್ರ ಹಾಕಿದರು. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸಿದ್ದನ್ನು ಪಕ್ಷ ನೇಮಿಸಿದ ಅಧಿಕೃತ ಏಜೆಂಟರ್​ಗಳಿಗೆ ತೋರಿಸುವ ನಿಮಯ ಇದೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ