ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಅಸ್ಸಾಂನಲ್ಲಿ ರಸ್ತೆ ಅಪಘಾತ: ಮೈಸೂರು ಮೂಲದ ಸಿಆರ್‌ಪಿಎಫ್ ಯೋಧ ಸಾವು
ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್
ಸಾಧು ಶ್ರೀನಾಥ್​ Edited By:

Updated on: Mar 01, 2021 | 12:55 PM

ಮೈಸೂರು: ಅಸ್ಸಾಂ ರಾಜ್ಯದಲ್ಲಿ ನಡೆದಿರುವ ರಸ್ತೆ ಅಪಘಾತದಲ್ಲಿ ಯೋಧರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸಿಆರ್‌ಪಿಎಫ್ ಪೇದೆ 34 ವರ್ಷದ ಮೋಹನ್ ಮೃತ ದುರ್ದೈವಿ. ಇವರು ತಿ.ನರಸೀಪುರ ತಾಲೂಕಿನ ಮುಡುಕುತೊರೆ ಸಮೀಪದ ಬೆಟ್ಟಹಳ್ಳಿ ಗ್ರಾಮದ ನಿವಾಸಿ.

ಸೇನೆಗೆ ಸೇರಿ 10 ವರ್ಷ ಪೂರೈಸಿದ್ದ ಮೋಹನ್, ಇತ್ತೀಚೆಗೆ ಅಸ್ಸಾಂನಲ್ಲಿ ಹೈವೇ ಪೆಟ್ರೋಲಿಂಗ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಮೋಹನ್​ ಅವರು ರಸ್ತೆ ದಾಟುವಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪೋಷಕರು, ಮೃತದೇಹದ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Soldiers Family Assault: ಯೋಧರ ಕುಟುಂಬಸ್ಥರ ಮೇಲೆ ಪಕ್ಕದ ಮನೆಯವರಿಂದ ಹಲ್ಲೆ: 9 ಜನರ ವಿರುದ್ಧ ದೂರು ದಾಖಲು

ಇದನ್ನೂ ಓದಿ: ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us