AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ

ಕಳೆದ ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ
ಸಾಂದರ್ಭಿಕ ಚಿತ್ರ
Anil Kalkere
| Edited By: |

Updated on:Jul 21, 2023 | 9:43 AM

Share

ಬೆಂಗಳೂರು, (ಜುಲೈ 21): ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ(nandini milk )ಏರಿಕೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಗೆ ಎಲ್ಲಾ ಹಾಲು ಮಾರಾಟ ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು (ಜುಲೈ 21) ಸಂಜೆ 6 ಗಂಟೆಗೆ ಹಾಲು ಒಕ್ಕೂಟಗಳು, KMF​ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಇಂದು ಸಂಜೆ 6 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಲರಿಉವ ಮಹತ್ವದ ಸಭೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ, ಅಧಿಕಾರಿಗಳು​ ಭಾಗಿಯಾಗಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ ಇದೆ.

ಪ್ರತಿದಿನ ಬೆಂಗಳೂರಿಗೆ 13 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಇದರಿಂದ ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತೆ. ಪ್ರತಿ ಲೀ ಗೆ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ. ಹೀಗಾಗಿ ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒಕ್ಕೂಟಗಳು ಸರ್ಕಾರಕ್ಕೆ ಒತ್ತಾಯ ಮಾಡಿವೆ.

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ ಹಾಲು ಮಾರಾಟ ಪ್ರತಿ ಲೀಟರ್ 39 ರೂಪಾಯಿ ಇದೆ ( ಲೀ ಟೋನ್ಡ್ ಹಾಲು ). ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದೆ. ಮಾರಾಟಗಾರರಿಗೆ ಪ್ರತಿ ಲೀಟರ್ ಗೆ 2 ರೂ ಕಮೀಷನ್. ಉಳಿದ 1.50 ಪೈಸೆ ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಒಕ್ಕೂಟಗಳ ಅಭಿಪ್ರಾಯ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:40 am, Fri, 21 July 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ