Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ

ಕಳೆದ ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ಹಾಲಿನ ದರ ಹೆಚ್ಚಳ ಬಗ್ಗೆ ಇಂದು ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

Nandini Milk Price: ಇಂದು ಮಹತ್ವದ ಸಭೆ, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
| Edited By: ರಮೇಶ್ ಬಿ. ಜವಳಗೇರಾ

Updated on:Jul 21, 2023 | 9:43 AM

ಬೆಂಗಳೂರು, (ಜುಲೈ 21): ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ(nandini milk )ಏರಿಕೆ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆಯಾಗಿತ್ತಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಗೆ ಎಲ್ಲಾ ಹಾಲು ಮಾರಾಟ ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿವೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು (ಜುಲೈ 21) ಸಂಜೆ 6 ಗಂಟೆಗೆ ಹಾಲು ಒಕ್ಕೂಟಗಳು, KMF​ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಇಂದು ಸಂಜೆ 6 ಗಂಟೆಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಲರಿಉವ ಮಹತ್ವದ ಸಭೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ, ಅಧಿಕಾರಿಗಳು​ ಭಾಗಿಯಾಗಲಿದ್ದು, ನಂದಿನಿ ಹಾಲಿನ ದರ ಏರಿಕೆ ಭವಿಷ್ಯ ಇಂದೇ ನಿರ್ಧಾರ ಸಾಧ್ಯತೆ ಇದೆ.

ಪ್ರತಿದಿನ ಬೆಂಗಳೂರಿಗೆ 13 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ಇದರಿಂದ ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತೆ. ಪ್ರತಿ ಲೀ ಗೆ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ. ಹೀಗಾಗಿ ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒಕ್ಕೂಟಗಳು ಸರ್ಕಾರಕ್ಕೆ ಒತ್ತಾಯ ಮಾಡಿವೆ.

ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ ಹಾಲು ಮಾರಾಟ ಪ್ರತಿ ಲೀಟರ್ 39 ರೂಪಾಯಿ ಇದೆ ( ಲೀ ಟೋನ್ಡ್ ಹಾಲು ). ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದೆ. ಮಾರಾಟಗಾರರಿಗೆ ಪ್ರತಿ ಲೀಟರ್ ಗೆ 2 ರೂ ಕಮೀಷನ್. ಉಳಿದ 1.50 ಪೈಸೆ ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ಒಕ್ಕೂಟಗಳ ಅಭಿಪ್ರಾಯ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:40 am, Fri, 21 July 23

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ