AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!

ಬೆಳಗಾವಿಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನದ ಬಳಿಕ ಬೆಂಗಳೂರಿಗೆ ಕರೆದೊಯ್ಯಲು ಪೊಲೀಸರು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಪೂರ್ತಿ ಅವರನ್ನು ಜಿಲ್ಲೆ ಜಿಲ್ಲೆಗಳ ವಿವಿಧೆಡೆ ಸುತ್ತಾಡಿಸಲಾಗಿದೆ. ತಲೆಗೆ ಗಾಯವಾಗಿದ್ದರೂ ಕಾರಿನಲ್ಲೇ ಒಯ್ಯಲಾಗಿದೆ ಎಂಬ ಆರೋಪವೂ ಇದೆ. ಸಿಟಿ ರವಿ ಅವರನ್ನು ರಾತ್ರಿ ಎಲ್ಲೆಲ್ಲ ಸುತ್ತಾಡಿಸಿದ್ದಾರೆ, ಆಮೇಲೆ ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬ ವಿವರ ಇಲ್ಲಿದೆ.

ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!
ಪೊಲೀಸ್ ಕಾರಿನಲ್ಲಿ ಸಿಟಿ ರವಿ
ಸಹದೇವ್​ ಮಾನೆ
| Edited By: |

Updated on: Dec 20, 2024 | 7:38 AM

Share

ಬೆಳಗಾವಿ, ಡಿಸೆಂಬರ್ 20: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಬೆಳಗಾವಿಯಲ್ಲಿ ಗುರುವಾರ ತಡರಾತ್ರಿ ವರೆಗೂ ಹೈಡ್ರಾಮವೇ ನಡೆದಿದೆ. ಪರಿಣಾಮವಾಗಿ ರಾತ್ರಿ ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ಸಿಟಿ ರವಿ ಅವರನ್ನು ಪೊಲೀಸರು ಕಾರಿನಲ್ಲೇ ಒಂದು ಪ್ರದೇಶದಿಂದ ಮತ್ತೊಂದು ಕಡೆಗೆ ಕರೆದೊಯ್ಯುತ್ತಾ ಕಾಲಹರಣ ಮಾಡಿದ್ದಾರೆ.

ಏತನ್ಮಧ್ಯೆ, ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಮಾನವೀಯತೆ ಮರೆತು ಕಾರಿನಲ್ಲೇ ಕರೆದುಕೊಂಡು ಸುತ್ತಾಟ ಮಾಡಿರುವ ಆರೋಪವೂ ಪೊಲೀಸರ ವಿರುದ್ಧ ಕೇಳಿಬಂದಿದೆ.

ರಾತ್ರಿ ಏನೇನಾಯ್ತು?

  1. ಸಿಟಿ ರವಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಪೊಲೀಸರು ಬೆಳಗಾವಿ ಜಿಲ್ಲೆಯ ನಿರ್ಜನ ಪ್ರದೇಶ ಸೇರಿ ಜಮೀನು, ತೋಟ ಎಲ್ಲ ಕಡೆ ಸುತ್ತಾಡಿಸಿದ್ದಾರೆ.
  2. ರಾತ್ರಿ 12.05ಕ್ಕೆ ಖಾನಾಪುರ ಪೊಲೀಸ್ ಠಾಣೆಯಿಂದ ಸ್ಥಳಾಂತರ.
  3. ರಾತ್ರಿ 12.45ಕ್ಕೆ ಕಿತ್ತೂರಿಗೆ ಆಗಮನ, ಇಲ್ಲಿ ಸುಮಾರು ಅರ್ಧ ಗಂಟೆ ಕಾಲ ಕಾರು ನಿಲ್ಲಿಸಿ ಕಾಲಹರಣ.
  4. ರಾತ್ರಿ 1.30ಕ್ಕೆ ಕಿತ್ತೂರಿನಿಂದ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಮಾರ್ಗವಾಗಿ ಮತ್ತೆ ಬೆಳಗಾವಿ ಜಿಲ್ಲೆಯ ಬೆಳವಡಿ ಗ್ರಾಮಕ್ಕೆ ತಲುಪಿದ್ದಾರೆ.
  5. ರಾತ್ರಿ 1.45ಕ್ಕೆ ಸವದತ್ತಿ ಪಟ್ಟಣಕ್ಕೆ ತಲುಪಿ 15 ನಿಮಿಷ ಕಾಲಹರಣ ಮಾಡಲಾಗಿದೆ.
  6. ತಡರಾತ್ರಿ 2.45 ಕ್ಕೆ ರಾಮದುರ್ಗದ ಡಿವೈಎಸ್‌ಪಿ ಕಚೇರಿಗೆ ಆಗಮನ.
  7. ರಾಮದುರ್ಗ ಡಿವೈಎಸ್‌ಪಿ ಕಚೇರಿಯಲ್ಲಿ ಸಿಟಿ ರವಿ ತಲೆ ಗಾಯಕ್ಕೆ ಬ್ಯಾಂಡೇಜ್ ಹಾಕಿಸಿದ ಪೊಲೀಸರು.
  8. ತಡರಾತ್ರಿ 2.55ಕ್ಕೆ ಸಿಟಿ ರವಿಗೆ ಬ್ಯಾಂಡೇಜ್ ಹಾಕಿದ ನರ್ಸ್.
  9. ನಸುಕಿನ 3.25ಕ್ಕೆ ರಾಮದುರ್ಗ ಡಿವೈಎಸ್‌ಪಿ ಕಚೇರಿಯಿಂದ ಹೊರ ಕರೆದುಕೊಂಡು ಬಂದ ಪೊಲೀಸರು.
  10. ಅಲ್ಲಿಂದ ಎರಡು ಬಾರಿ ರಾಮದುರ್ಗ ಪಟ್ಟಣದ ರಸ್ತೆಯಲ್ಲಿ ಅತ್ತಿಂದಿತ್ತ ಓಡಾಟ‌.
  11. ಇದರಿಂದ ಆಕ್ರೋಶಗೊಂಡು ರಸ್ತೆಯಲ್ಲಿ ಧರಣಿ ಕುಳಿತು ಶೂಟ್ ಮಾಡಿ ಎಂದು ಪೊಲೀಸರ ವಿರುದ್ಧ ಸಿಟಿ ರವಿ ಆಕ್ರೋಶ.
  12. ರವಿ ಅವರನ್ನು ಕಾರಿಗೆ ಹತ್ತಿಸಿ ಮತ್ತೆ ಬಾಗಲಕೋಟೆ ಕಡೆಗೆ ಪ್ರಯಾಣ.
  13. ನಸುಕಿನ ಜಾವ 4 ಗಂಟೆಗೆ ಲೋಕಾಪುರ ಬಳಿ ಸಿಟಿ ರವಿ ವಾಹನ ನಿಲ್ಲಿಸಿದ್ದಾರೆ.
  14. 4.30ಕ್ಕೆ ಯಾದವಾಡ ಬಳಿ ಸೇತುವೆ ಮೇಲೆ ಸಿಟಿ ರವಿ ಕಾರು ನಿಲ್ಲಿಸಿ ಪೊಲೀಸರ ಮಾತುಕತೆ.
  15. ಮೂರು ಕಡೆಗಳಲ್ಲಿ ಮಾಧ್ಯಮವರಿಗೆ ತಡೆ.
  16. ಬೆಳಗ್ಗೆ 4.50 ಗಂಟೆಗೆ ಹುಲಕುಂದ ಗ್ರಾಮದ ಬಳಿ ಸಿಟಿ ರವಿಗೆ ತಡೆ. ತಡೆದು ಮತ್ತೆ ಮಾತುಕತೆ ನಡೆಸಿ ಹದಿನೈದು ಸಮಯ ಕಾಲಹರಣ.
  17. ಬೆಳಗ್ಗೆ 6 ಗಂಟೆಗೆ ಬಟಕುರ್ಕಿ ಕಡೆ ಮತ್ತೆ ಸಿಟಿ ರವಿ ಕಾರು ನಿಲ್ಲಿಸಿ ಕಾಲಹರಣ.
  18. ಬೆಳಗ್ಗೆ 6.40 ಕ್ಕೆ ಯರಗಟ್ಟಿ ಪಟ್ಟಣಕ್ಕೆ ಎಂಟ್ರಿ ಅಲ್ಲಿಂದ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಪೊಲೀಸರು.

ಇದನ್ನೂ ಓದಿ: ರಕ್ತ ಬರುವಂತೆ ಹಲ್ಲೆ, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ