AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟ್ರಾನ್ ಕಾರ್ಮಿಕರು ದೂರು ನೀಡದೆ ದಿಢೀರ್ ಹಾನಿ ಮಾಡ್ತಾರೆ ಅಂದ್ರೆ.. ಇದರ ಹಿಂದೆ ಷಡ್ಯಂತ್ರ ಇದೆ -C.T.ರವಿ

ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಕುರಿತು ರವಿ ಮಾತನಾಡಿದರು.

ವಿಸ್ಟ್ರಾನ್ ಕಾರ್ಮಿಕರು ದೂರು ನೀಡದೆ ದಿಢೀರ್ ಹಾನಿ ಮಾಡ್ತಾರೆ ಅಂದ್ರೆ.. ಇದರ ಹಿಂದೆ ಷಡ್ಯಂತ್ರ ಇದೆ -C.T.ರವಿ
‘ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು’
KUSHAL V
|

Updated on: Dec 20, 2020 | 1:05 PM

Share

ಬೆಂಗಳೂರು: ಸಹಜ ಆಕ್ರೋಶ ಬೇರೆ, ಉದ್ದೇಶಪೂರ್ವಕ ಹಾನಿ ಬೇರೆ. ಕಂಪನಿಯಲ್ಲಿ 470 ಕೋಟಿ ರೂ. ಸಾಮಗ್ರಿ ಹಾನಿ ಆಗಿದೆ. ಇದು ಸಹಜವಾಗಿ ಆಗಿಲ್ಲ, ಉದ್ದೇಶಪೂರ್ವಕ ಇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಕೋಲಾರದ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಕುರಿತು ರವಿ ಮಾತನಾಡಿದರು.

ಸಿಬ್ಬಂದಿ ದೂರು ನೀಡದೆ, ಧರಣಿ ನಡೆಸದೇ ಹಾನಿ ಮಾಡ್ತಾರೆ. ದಿಢೀರ್ ಹಾನಿ ಮಾಡ್ತಾರೆ ಅಂದ್ರೆ ಅದು ಏನನ್ನು ಸೂಚಿಸುತ್ತೆ. ಇದರ ಹಿಂದೆ ಷಡ್ಯಂತ್ರ ಇದೆ ಎಂದು ಸಿ.ಟಿ.ರವಿ ಹೇಳಿದರು.

‘ಹೊಟ್ಟೆಯಲ್ಲಿ ಉರಿ ಇಟ್ಟುಕೊಂಡವರಿಂದ ಕಾಯ್ದೆಗೆ ವಿರೋಧ’ ಕೃಷಿ ತಿದ್ದುಪಡಿ ಮಸೂದೆಗಳು ರೈತರ ಹಿತ ಕಾಪಾಡುತ್ತವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. MSP ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. APMC ಜೊತೆ ಖಾಸಗಿ ಮಾರುಕಟ್ಟೆಗಳು ಇರುತ್ತವೆ ಎಂದು ಹೇಳಿದರು.

ದೆಹಲಿಯಲ್ಲಿ ಅಸಹನೆಯ ಹೋರಾಟ ಮುಂದುವರಿಸಿದ್ದಾರೆ. ಹೋರಾಟದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆರೋಪ ಮಾಡುತ್ತಿರುವವರಿಗೆ ವೈಯಕ್ತಿಕ ಹಿತಾಸಕ್ತಿಗಳಿವೆ. ರೈತರ ದಾರಿ ತಪ್ಪಿಸುವ ಕೆಲಸ ಮಾಡುವವರು, ಹೊಟ್ಟೆಯಲ್ಲಿ ಉರಿ ಇಟ್ಟುಕೊಂಡವರಿಂದ ಕಾಯ್ದೆಗೆ ವಿರೋಧವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

‘ಈಗ ಬಿಜೆಪಿ ರೈತ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ನಡೆಯುತ್ತಿದೆ’ ಮೊದಲು ಪ್ರಧಾನಿ ಮೋದಿಯನ್ನ ಸರ್ವಾಧಿಕಾರಿ ಎಂದು ಕರೆದ್ರು. ಆದ್ರೆ ಅಭಿವೃದ್ಧಿಯ ಮಾದರಿ ಇಟ್ಟುಕೊಂಡು ಅಧಿಕಾರಕ್ಕೆ ಬಂದ್ರು. ಬಿಜೆಪಿ ದಲಿತ ವಿರೋಧಿ ಎಂದು ಅಪಪ್ರಚಾರ ಮಾಡಿದ್ರು. ಆದ್ರೆ ಅಂಬೇಡ್ಕರ್ ಜನ್ಮಸ್ಥಳಕ್ಕೆ ರಾಷ್ಟ್ರೀಯ ಪ್ರಾಮುಖ್ಯತೆ ಕೊಡುವ ಕೆಲಸ ಬಿಜೆಪಿ ಮಾಡಿದೆ ಎಂದು ಸಿ.ಟಿ.ರವಿ ಹೇಳಿದರು.

ಈಗ ಬಿಜೆಪಿ ರೈತ ವಿರೋಧಿ ಎಂದು ಬಿಂಬಿಸಲು ಪ್ರಯತ್ನ ನಡೆಯುತ್ತಿದೆ. ಆದ್ರೆ ಸತ್ಯ ಬೇರೆಯೇ ಇದೆ. ನಮ್ಮ ಸರ್ಕಾರ ರೈತರ ಬದುಕಿನ ಸುಧಾರಣೆಯ ಪರ ಇದೆ. ಕೃಷಿ ಕ್ಷೇತ್ರದಲ್ಲಿ ಮಾರುಕಟ್ಟೆಯ ಸುಧಾರಣೆ ಆಗಬೇಕು. ರೈತ ಜಾಗರಣ ಅಭಿಯಾನ ಪ್ರಾರಂಭಿಸಿದ್ದೇವೆ. ಡಿ.25ರಂದು 1 ಕೋಟಿಗೂ ಹೆಚ್ಚು ರೈತರನ್ನುದ್ದೇಶಿಸಿ ತಾಂತ್ರಿಕತೆಯ ಮೂಲಕ ಮಾತನಾಡುತ್ತಾರೆ ಎಂದು ಸಿ.ಟಿ.ರವಿ ಹೇಳಿದರು.

‘ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸ್ತಿಲ್ಲ.. ಆದ್ರೆ ಅವರು ಪ್ರತಿಭಟನೆ ಮಾಡಿದ್ರೆ ರಾಷ್ಟ್ರದ್ರೋಹಿಗಳೆಂದು ಬಿಂಬಿಸುತ್ತೀರಾ’

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!