AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ‌; ಚಂದ್ರಯಾನ ಕುರಿತ ಪ್ರಕಾಶ್ ರಾಜ್ ಟ್ವೀಟ್​ಗೆ ಸಿಟಿ ರವಿ ಕಿಡಿ

CT Ravi reaction to Prakash Raj tweet; ಕೆಲವರಿಗೆ ಚಂದ್ರಯಾನ ಯಶಸ್ವಿಯಾಗುತ್ತದೆ ಎಂದು ಸಂಕಟ ಶುರುವಾಗಿದೆ. ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಯಶಸ್ವಿಯಾದರೆ ಇವರಿಗೆ ಸಂಕಟ. ಕೆಲವರಿಗೆ‌ ಹಿಂದುಗಡೆ ಮೆಣಸಿನಕಾಯಿ ಇಟ್ಟುಕೊಂಡ ರೀತಿ ಆಗುತ್ತದೆ ಎಂದು ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ‌; ಚಂದ್ರಯಾನ ಕುರಿತ ಪ್ರಕಾಶ್ ರಾಜ್ ಟ್ವೀಟ್​ಗೆ ಸಿಟಿ ರವಿ ಕಿಡಿ
ಸಿಟಿ ರವಿ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Aug 21, 2023 | 3:19 PM

Share

ಬೆಂಗಳೂರು, ಆಗಸ್ಟ್ 21: ಚಂದ್ರಯಾನ-3 ರ ಬಗ್ಗೆ ನಟ ಪ್ರಕಾಶ್​ ರಾಜ್​ (Prakash Raj) ವ್ಯಂಗ್ಯದ ಟ್ವೀಟ್​ ಮಾಡಿರುವುದಕ್ಕೆ ಬಿಜೆಪಿ ನಾಯಕ ಸಿಟಿ ರವಿ (CT Ravi) ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ‌ ಇದೆ. ಅಂಥವರಿಗೆ ಚಂದ್ರಯಾನ ಯಶಸ್ವಿಯಾಗುತ್ತದೆ ಎಂದು ಸಂಕಟ ಶುರುವಾಗಿದೆ. ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಯಶಸ್ವಿಯಾದರೆ ಇವರಿಗೆ ಸಂಕಟ. ಕೆಲವರಿಗೆ‌ ಹಿಂದುಗಡೆ ಮೆಣಸಿನಕಾಯಿ ಇಟ್ಟುಕೊಂಡ ರೀತಿ ಆಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಚಂದ್ರಯಾನ-3 ಲ್ಯಾಂಡಿಂಗ್‌ಗೆ ಎರಡು ದಿನ ಬಾಕಿ ಇರುವಾಗ ಪ್ರಕಾಶ್ ರಾಜ್ ಇಸ್ರೋದ ಮಾಜಿ ಮುಖ್ಯಸ್ಥ ಕೆ ಶಿವನ್ ಅವರನ್ನು ಅಪಹಾಸ್ಯ ಮಾಡಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಹತ್ತಾರು ಮಂದಿ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾ. ನಾಗಮೋಹನ್ ದಾಸ್ ಕಾಂಗ್ರೆಸ್ ಮರ್ಜಿಯಲ್ಲಿರುವವರು; ಸಿಟಿ ರವಿ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ 40% ಕಮಿಷನ್​ ಬಗ್ಗೆ ನ್ಯಾ. ನಾಗಮೋಹನ್ ನೇತೃತ್ವದಲ್ಲಿ ತನಿಖೆ ನಡೆಸುವುದಕ್ಕೆ ಸಿಟಿ ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾ. ನಾಗಮೋಹನ್ ದಾಸ್​ ನೇತೃತ್ವದ ಸಮಿತಿ ಮೇಲೆ ನಂಬಿಕೆ ಇಲ್ಲ. ನ್ಯಾ. ನಾಗಮೋಹನ್ ದಾಸ್ ಕಾಂಗ್ರೆಸ್ ಮರ್ಜಿಯಲ್ಲಿರುವವರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲು ಅವಕಾಶ ಇದೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್​​ಗೆ ತಿರುಗೇಟು

ಕೋಳಿ ಕೇಳಿ ಮಸಾಲೆ ಅರೆಯಲು ಆಗುತ್ತಾ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಿಟಿ ರವಿ, ಮಸಾಲೆ ಅರೆಯೋದು ಅವರಿಗೆ ಮಾತ್ರ ಗೊತ್ತಿರುವ ವಿದ್ಯೆಯಲ್ಲ. ನಾವೂ ಮಸಾಲೆ ಅರೆಯುತ್ತೇವೆ. ನಮಗೂ ಅರೆಯಲು ಬರುತ್ತದೆ. ಮಲೆನಾಡಿನ ಅಡುಗೆ ತಿಂದವರಿಗೆ ಇದು ಗೊತ್ತು ಎಂದು ಹೇಳಿದ್ದಾರೆ.

ಕೆಲವು ಮಂದಿ ನಾಯಕರು ಬಿಜೆಪಿ ಬಿಟ್ಟು ಹೋಗುತ್ತಾರೆ ಅನ್ನೋದು ಊಹಾಪೋಹ. ಅಧಿಕಾರ ಇಲ್ಲದಾಗಲೂ ಸೈದ್ಧಾಂತಿಕವಾಗಿ ಬದ್ಧರಾಗಿ ಪಕ್ಷ ಕಟ್ಟಿದ್ದೇವೆ. ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನದ ಬಗ್ಗೆ ವ್ಯಂಗ್ಯವಾಡಿದ ನಟ ಪ್ರಕಾಶ್ ರಾಜ್; ಖಡಕ್ ಆಗಿ ಪ್ರತಿಕ್ರಿಯಿಸಿದ ನೆಟ್ಟಿಗರು

ಕಾಂಗ್ರೆಸ್​​ ಶಾಸಕರು ಹಾಗೂ ಸಚಿವರ ನಡುವೆ ವರ್ಗಾವಣೆಗಾಗಿ ಗಲಾಟೆ ನಡೀತಿದೆ. ಎಸ್​ಸಿಪಿ, ಟಿಎಸ್​ಪಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಜಾಲತಾಣದಲ್ಲಿ ಅಭಿಪ್ರಾಯ ಹೊರಹಾಕಿದವರ ವಿರುದ್ಧವೂ ಕೇಸ್ ದಾಖಲಿಸಲಾಗುತ್ತಿದೆ. ಅಭಿಪ್ರಾಯ ಹೊರಹಾಕಿದವರ ವಿರುದ್ಧ ಕೇಸ್ ದಾಖಲಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸಲಾಗುವುದು. ಆಗಸ್ಟ್ 28 ರಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಸೆಪ್ಟೆಂಬರ್ 8ರ ವರೆಗೆ ಜಿಲ್ಲಾಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ರವಿ ಹೇಳಿದ್ದಾರೆ.

ಕರ್ನಾಟಕಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 21 August 23