AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನದ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪ್ರಕರಣದ ಚೆಂಡು!

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಟಿ ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿರುವ ಪ್ರಕರಣದ ಚೆಂಡು ಈಗ ರಾಜಭವನದ ಅಂಗಳಕ್ಕೆ ತಲುಪಿದೆ. ರಾಜ್ಯಪಾಲರನ್ನು ಬಿಜೆಪಿ ನಿಯೋಗ ಭೇಟಿಯಾದ ಕೆಲವೇ ಹೊತ್ತಲ್ಲಿ ಸಿಟಿ ರವಿಗೆ ಬುಲಾವ್ ಹೋಗಿದ್ದು, ಅವರೂ ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರಾಜಭವನದ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪ್ರಕರಣದ ಚೆಂಡು!
ಸಿಟಿ ರವಿ, ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್, ಲಕ್ಷ್ಮೀ ಹೆಬ್ಬಾಳ್ಕರ್
ಕಿರಣ್​ ಹನಿಯಡ್ಕ
| Edited By: |

Updated on: Dec 30, 2024 | 1:43 PM

Share

ಬೆಂಗಳೂರು, ಡಿಸೆಂಬರ್ 30: ಡಿಸೆಂಬರ್ 19 ರ ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವನ್ನೂ ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು ರವಿಯನ್ನ ಬಂಧಿಸಿದ್ದೂ ಆಯ್ತು, ಕೋರ್ಟ್​ ಸೂಚನೆ ಮೇರೆಗೆ ರಿಲೀಸ್​ ಮಾಡಿದ್ದೂ ಆಯ್ತು. ಕೊನೆಗೆ ಈಗ

ಇದೀಗ ಪ್ರಕರಣ ರಾಜ್ಯಪಾಲರವರೆಗೂ ತಲುಪಿದೆ. ಪ್ರಕರಣದ ಹಿನ್ನೆಲೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ಗೆ ದೂರು ನೀಡಿತ್ತು. ಈ ಹಿನ್ನೆಲೆ ರಾಜ್ಯಪಾಲರು ಸಿ.ಟಿ.ರವಿಗೆ ಬುಲಾವ್​ ನೀಡಿದ್ದರು. ಸದ್ಯ ಸಿಟಿ ರವಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ರನ್ನ ಭೇಟಿಯಾಗಿ ಜಟಾಪಟಿಯ ಕುರಿತು ಮಾಹಿತಿ ನೀಡಿದ್ದು, ಪ್ರಕರಣದ ದಿಕ್ಕು ತಪ್ಪಿಸುತ್ತಿರುವ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಎಂದಿರುವ ಸಭಾಪತಿ!

ಇನ್ನು ಈಗಾಗಲೇ ಅಂದರೆ, ಡಿಸೆಂಬರ್ 25ರಂದೇ ಎರಡೂ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದೆ. ಆದರೂ ಇದುವರೆಗೂ ಸಿಐಡಿ ತಂಡ ಬೆಳಗಾವಿಗೆ ಭೇಟಿ ನೀಡಿಲ್ಲ. ಸದ್ಯದಲ್ಲೇ ಸಿಐಡಿ ಟೀಂ ಬೆಳಗಾವಿಗೆ ತಲುಪಲಿದೆ. ಆದರೆ ಸಿಐಡಿಗೆ ಇಲ್ಲೊಂದು ಸವಾಲು ಎದುರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ದೂರಿನನ್ವಯ ಸ್ಥಳ ಮಹಜರು ನಡೆಸಬೇಕಾದರೆ ಸುವರ್ಣಸೌಧಕ್ಕೆ ಕಾಲಿಡಬೇಕು. ಆದರೆ, ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಅಂತ ಖಡಾಖಂಡಿತವಾಗಿ ನುಡಿದಿದ್ದಾರೆ. ಹೀಗಾಗಿ ಸಿಐಡಿ ಮುಂದಿನ ಯೋಜನೆ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಇದೆ.

ಪರಿಷತ್ ಸಭಾಪತಿ ನಿರ್ಧಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಆ ಬಗ್ಗೆ ಹೇಳಿಕೆ ಕೊಡಲ್ಲ ಅಂದಿದ್ದಾರೆ. ಸುವರ್ಣಸೌಧದಲ್ಲಿನ ಗಲಾಟೆ ಬಗ್ಗೆ ಮಾತ್ರ ಸಿಐಡಿ ತನಿಖೆ ಪ್ರಾರಂಭಿಸಿದ್ದು, ಅವರ ಕೆಲಸ ಮಾಡುತ್ತಾರೆ. ತನಿಖೆ ಆಗಲಿ ವರದಿ ಬಂದಾಗ ಎಲ್ಲವನ್ನೂ ಹೇಳುತ್ತೇವೆ ಎಂದು ಹೇಳಿದ್ದಾರೆ.

ಪತ್ತೆಯಾಗದ ಸಿಟಿ ರವಿ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳು!

ಇನ್ನು ಡಿ.22 ರಂದು ಸಿ.ಟಿ.ರವಿ ಮೇಲೆ ಹಲ್ಲೆ ಸಂಬಂಧ ಅಪರಿಚಿತರ ವಿರುದ್ಧ ದೂರು ದಾಖಲಾಗಿತ್ತು. ಹಿರೇಬಾಗೇವಾಡಿ ಪೊಲೀಸರು ಖುದ್ದು ಸ್ವಯಂಪ್ರೇರಿತ ಕೇಸ್​ ದಾಖಲಿಸಿಕೊಂಡಿದ್ದರು. ಆದರೆ, ದೂರು ದಾಖಲಾಗಿ 8 ದಿನಗಳಾದರೂ ಇನ್ನೂ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಇದರಿಂದ ಸಿಡಿದಿರುವ ಪರಿಷತ್ ಸದಸ್ಯ ಸಿ.ಟಿ.ರವಿ, ಯಾಕೆ ಗೂಂಡಾಗಳನ್ನ ಇದುವರೆಗೂ ಬಂಧಿಸಿಲ್ಲ. ನಾನು ಕೊಟ್ಟಿರುವ ದೂರಿನಲ್ಲಿ ಹೆಸರು ದಾಖಲಿಸಿದ್ದರೂ ಅಪರಿಚಿತರು ಎಂದು ನಮೂದಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಖಾಸುಮ್ಮನೆ ರಾಹುಲ್ ಗಾಂಧಿ ಹೆಸರು ಬಳಸಬೇಡಿ: ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ

ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಲು ತಯಾರಿ ನಡೆಸಿದ್ದಾರೆ. ಈಗಾಗಲೇ ಎರಡು ಘಟನಾವಳಿಗಳ ಕುರಿತು ಮಾಹಿತಿ ಪಡೆದಿರುವ ಸಿಐಡಿ ತನಿಖೆ ಇನ್ನಷ್ಟು ಚುರುಕುಗೊಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?