AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿಗೆ ಪೊಲೀಸರಿಂದ ಮತ್ತೊಂದು ನೋಟಿಸ್ ಜಾರಿ; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸಂಬಂಧಿಸಿದಂತೆ ಸಿಡಿ ಲೇಡಿಗೆ ಕಬ್ಬನ್​ಪಾರ್ಕ್​ ಠಾಣೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿದೆ.

ಸಿಡಿ ಲೇಡಿಗೆ ಪೊಲೀಸರಿಂದ ಮತ್ತೊಂದು ನೋಟಿಸ್ ಜಾರಿ; ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಸಂತ್ರಸ್ತೆ
KUSHAL V
|

Updated on: Mar 29, 2021 | 6:51 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸಂಬಂಧಿಸಿದಂತೆ ಸಿಡಿ ಲೇಡಿಗೆ ಕಬ್ಬನ್​ಪಾರ್ಕ್​ ಠಾಣೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನಾಳೆ ಬೆಳಗ್ಗೆ 10ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿದೆ. ಸಿಡಿ ಲೇಡಿ ಪರ ವಕೀಲ ಜಗದೀಶ್​ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ವೈದ್ಯಕೀಯ ಪರೀಕ್ಷೆಗಾಗಿ ಹಾಜರಾಗಬೇಕಿದೆ. CRPC ಸೆಕ್ಷನ್​ 161ರಡಿ ತನಿಖಾಧಿಕಾರಿ ಮುಂದೆ ಹಾಜರಾಗಿ 161ರ ಅಡಿಯಲ್ಲಿ, ಮ್ಯಾಜಿಸ್ಟ್ರೇಟ್ ಮುಂದೆ 164ರ ಅಡಿಯಲ್ಲಿ ಹೇಳಿಕೆ ನೀಡಬೇಕಿದೆ. ಜೊತೆಗೆ, ಅಪರಾಧ ನಡೆದ ಸ್ಥಳ ಗುರುತಿಸುವಿಕೆ, ಪಂಚನಾಮೆ ಸಂದರ್ಭದಲ್ಲಿ ಖುದ್ದು ಹಾಜರಾಗಬೇಕಿರುವ ಅಗತ್ಯವಿರುವುದರಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ ಠಾಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿದೆ.

ಇತ್ತ, ಯುವತಿ ಹೇಳಿಕೆ ಕೊಡಿಸಲು ಕೋರಿದ್ದ ಅರ್ಜಿ ಪರಿಗಣನೆಯಾಗಿದೆ ಎಂದು ಅರ್ಜಿ ಹಾಕಿದ್ದ ಸಂತ್ರಸ್ತೆ ಪರ ವಕೀಲ ಜಗದೀಶ್ ಅವರ ಟೀಮ್ ಟಿವಿ9ಗೆ ಮಾಹಿತಿ ನೀಡಿದೆ. ಜಡ್ಜ್ ಮುಂದೆ ಹೇಳಿಕೆ ಕೊಡಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ, ಕೋರ್ಟ್‌ ಇ-ಮೇಲ್‌ ಸೂಚನೆಗೆ ಕಾಯಲು ತೀರ್ಮಾನ ಮಾಡಲಾಗಿದೆ ಎಂದು ಜಗದೀಶ್​ ಅವರ ಟೀಂ ಮಾಹಿತಿ ನೀಡಿದೆ. ಯುವತಿ ಯಾವಾಗ ಹಾಜರುಪಡಿಸಿಬೇಕೆಂಬ ಸೂಚನೆಗಾಗಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಡೆಪ್ಯೂಟಿ ರಿಜಿಸ್ಟ್ರಾರ್‌ಗೆ ವಕೀಲ ಜಗದೀಶ್ ಅರ್ಜಿ ಸಲ್ಲಿಸಿದ್ದಾರೆ.

ಬೆಳಗಾವಿಗೆ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತ್ತ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಗೆ ತೆರಳಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿಯವರ ಪತ್ನಿ. ಹೀಗಾಗಿ, ಮಂಗಳಾ ಅವರ ನಾಮಪತ್ರ ಸಲ್ಲಿಕೆಯ ವೇಳೆ ರಮೇಶ್ ಉಪಸ್ಥಿತರಿರುವ ಸಾಧ್ಯತೆಯಿದೆ.

ಇದನ್ನೂ ಓದಿ: ‘ಟಗರು’ಗೆ ಮೇಕೆ ಗಿಫ್ಟ್​ ಕೊಟ್ಟು ಕೇಕೆ ಹಾಕಿದ ಅಭಿಮಾನಿಗಳು; ಮೇಕೆಯನ್ನು ಕಾಂಗ್ರೆಸ್​ಗೆ ಬರಮಾಡಿಕೊಂಡ ಡಿಕೆಶಿ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್