Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ, ಸದ್ಯಕ್ಕೆ ಶಾಂತಿಯ ವಾತಾವರಣ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಬೆಂಕಿ ಜ್ವಾಲೆಯಂತೆ ಹಬ್ಬಿತ್ತು. ಪರಿಸ್ಥಿತಿ ನಿಯಂತ್ರಿಸಲು ಖಾಕಿ ಪಡೆ ಫೈರಿಂಗ್​ ಮಾಡಿತ್ತು. ಇದಕ್ಕೆ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಮಂಗಳೂರು ಮಾಜಿ ಮೇಯರ್ ಅಶ್ರಫ್ ಸೇರಿ ಐವರಿಗೆ ಗುಂಡು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿತ್ತು. ನಗರದಲ್ಲಿ ಸದ್ಯಕ್ಕೆ ಶಾಂತಿಯ ವಾತಾವರಣವಿದೆ. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಗರದ ಕೆಲವೆಡೆ […]

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ, ಸದ್ಯಕ್ಕೆ ಶಾಂತಿಯ ವಾತಾವರಣ
Follow us
ಸಾಧು ಶ್ರೀನಾಥ್​
|

Updated on:Dec 20, 2019 | 11:18 AM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ನಡೆದ ಪ್ರತಿಭಟನೆ ಬೆಂಕಿ ಜ್ವಾಲೆಯಂತೆ ಹಬ್ಬಿತ್ತು. ಪರಿಸ್ಥಿತಿ ನಿಯಂತ್ರಿಸಲು ಖಾಕಿ ಪಡೆ ಫೈರಿಂಗ್​ ಮಾಡಿತ್ತು. ಇದಕ್ಕೆ ಇಬ್ಬರು ಮೃತಪಟ್ಟಿದ್ದರು. ಅಲ್ಲದೆ ಮಂಗಳೂರು ಮಾಜಿ ಮೇಯರ್ ಅಶ್ರಫ್ ಸೇರಿ ಐವರಿಗೆ ಗುಂಡು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಾಗಿತ್ತು. ನಗರದಲ್ಲಿ ಸದ್ಯಕ್ಕೆ ಶಾಂತಿಯ ವಾತಾವರಣವಿದೆ. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂಟರ್​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಗರದ ಕೆಲವೆಡೆ ಹೋಟೆಲ್‌ಗಳು ಓಪನ್ ಆಗಿವೆ. ಕರ್ಫ್ಯೂ ಜಾರಿ ಹಿನ್ನೆಲೆ ನಗರದಲ್ಲಿ ಬಸ್ ಸೇವೆ ಇಲ್ಲ.

ಜ್ಯೋತಿ ಸರ್ಕಲ್​, ಬಂಟ್ ಹಾಸ್ಟೆಲ್, ಕಂಕನಾಡಿ, ಎಂಜಿ ರಸ್ತೆ, ಸ್ಟೇಟ್ ಬ್ಯಾಂಕ್ ರಸ್ತೆಗಳಲ್ಲಿ ವಾಹನಗಳ ಸಂಚಾರ ವಿರಳವಾಗಿದೆ. ಬೇರೆಡೆಯಿಂದ ಬಂದ ಪ್ರಯಾಣಿಕರಿಗೆ ಪೊಲೀಸರು ಸಹಾಯ ಮಾಡುತ್ತಿದ್ದಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಶಾಂತಿ ಕಾಪಾಡುವಂತೆ ಮೈಕ್ ಮೂಲಕ ಪೊಲೀಸರು ಮನವಿ ಮಾಡುತ್ತಿದ್ದಾರೆ.

Published On - 8:47 am, Fri, 20 December 19

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್