AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು.

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Apr 12, 2022 | 6:13 PM

Share

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಆ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು. ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್

Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ

Published On - 6:10 pm, Tue, 12 April 22

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ