AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು.

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್​ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Apr 12, 2022 | 6:13 PM

Share

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ.

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ 3 (ವೇಶ್ಯಾಗೃಹ ಇರಿಸುವ ಶಿಕ್ಷೆ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿ), ಐಪಿಸಿ ಸೆಕ್ಷನ್ 4 (ವೇಶ್ಯಾವಾಟಿಕೆಯ ಗಳಿಕೆಯ ಮೇಲೆ ಜೀವನ), ಸೆಕ್ಷನ್ 5 (ವೇಶ್ಯಾವಾಟಿಕೆಗಾಗಿ ವ್ಯಕ್ತಿಯನ್ನು ಪ್ರೇರೇಪಿಸುವುದು ಅಥವಾ ಕರೆದೊಯ್ಯುವುದು) ಮತ್ತು ಅನೈತಿಕ ಸಂಚಾರ ತಡೆ ಕಾಯ್ದೆ (ITPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370 (ವ್ಯಕ್ತಿಗಳ ಕಳ್ಳಸಾಗಣೆ) ಸೆಕ್ಷನ್ 6 (ವೇಶ್ಯಾವಾಟಿಕೆ ನಡೆಸುವ ಆವರಣದಲ್ಲಿ ವ್ಯಕ್ತಿಯನ್ನು ಬಂಧಿಸುವುದು) ಕೇಸ್ ದಾಖಲಿಸಲಾಗಿತ್ತು.

ತನ್ನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಆ ಅರ್ಜಿದಾರ ಹೈಕೋರ್ಟ್​ ಮೊರೆ ಹೋಗಿದ್ದರು. ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿರುವ ಗ್ರಾಹಕರು ವೇಶ್ಯಾಗೃಹವನ್ನು ಇಟ್ಟುಕೊಳ್ಳುವುದಿಲ್ಲ ಅಥವಾ ಆವರಣವನ್ನು ವೇಶ್ಯಾವಾಟಿಕೆಯಾಗಿ ಬಳಸಲು ಅನುಮತಿಸುವುದಿಲ್ಲ, ವೇಶ್ಯಾವಾಟಿಕೆಗೆ ಪ್ರೇರೇಪಿಸುವುದೂ ಇಲ್ಲ ಎಂಬ ಅಂಶವನ್ನು ಗಮನಿಸಿದ ಹೈಕೋರ್ಟ್​ ಆ ಅರ್ಜಿದಾರನ ಅರ್ಜಿಯನ್ನು ಅಂಗೀಕರಿಸಿತು ಮತ್ತು ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್

Crime Updates: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ, ಪ್ರೇಮಿ ಜೊತೆ ಸೇರಿ ಗಂಡನ ಕೊಲೆ

Published On - 6:10 pm, Tue, 12 April 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ