ಚಿನ್ನ ಕಳ್ಳಸಾಗಣೆ: ಓರ್ವನನ್ನ ವಶಕ್ಕೆ ಪಡೆದ ಕಸ್ಟಮ್ಸ್​ ಅಧಿಕಾರಿಗಳು

ದಕ್ಷಿಣ ಕನ್ನಡ: ಅಕ್ರಮವಾಗಿ ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. 18.47 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 483.57 ‌ಗ್ರಾಂ. ಚಿ‌ನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಚಿನ್ನ ಕಳ್ಳಸಾಗಣೆ: ಓರ್ವನನ್ನ ವಶಕ್ಕೆ ಪಡೆದ ಕಸ್ಟಮ್ಸ್​ ಅಧಿಕಾರಿಗಳು
ಸಾಧು ಶ್ರೀನಾಥ್​

Updated on: Nov 19, 2019 | 8:47 PM

ದಕ್ಷಿಣ ಕನ್ನಡ: ಅಕ್ರಮವಾಗಿ ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. 18.47 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 483.57 ‌ಗ್ರಾಂ. ಚಿ‌ನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಯಾಣಿಕನನ್ನು ಕಸ್ಟಮ್ಸ್​ ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us