AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೇ ಮಾತನಾಡೂ ಗಿಳಿರಾಮ ಮಾಡ್ತಿದ್ದಾನೆ ಮಾತಿನಿಂದಲೇ ಜಾದು

ಮಡಿಕೇರಿ: ಪ್ರಾಣಿ-ಪಕ್ಷಿ ಸಾಕೋದು ಅಂದ್ರೆ ಎಲ್ಲರಿಗೂ ಪ್ರೀತಿ. ಅದ್ರಲ್ಲೂ ಮನೆಯಲ್ಲಿ ಮಕ್ಕಳಿದ್ದರೆ ಒಂದು ಸಾಕು ಪ್ರಾಣಿಗೆ ಜಾಗ ಕೊಡಲೇಬೇಕು. ಇಷ್ಟೆಲ್ಲಾ ಮುದ್ದು ಮಾಡುವ ಸಾಕು ಪ್ರಾಣಿಗಳು ಮಾತಾಡಲು ಶುರು ಮಾಡಿದ್ರೆ ಹೇಗಿರುತ್ತೆ? ಇದೇ ರೀತಿ ಮಡಿಕೇರಿಯಲ್ಲೂ ಮಾತನಾಡುವ ಗಿಳಿ ಇದೆ. ಗಿಳಿರಾಮನ ಮಾತಿಗೆ ಎಲ್ಲರೂ ಫಿದಾ ಆಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟದಲ್ಲಿ ಮಾತನಾಡುವ ಗಿಳಿ ಇದೆ. ಅದು ಮನೆಗೆ ಬಂದವರನ್ನ ಮಾತನಾಡಿಸುತ್ತಾ, ಕುಶಲೋಪರಿ ವಿಚಾರಿಸೋ ಗಿಳಿರಾಮ. ಪಂಜರ ಸೇರಿದ್ರೂ ಬೇಸರ ಮಾಡಿಕೊಳ್ಳದೆ ಖುಷಿಯಾಗಿರೋ ಹಕ್ಕಿ. […]

ಕನ್ನಡದಲ್ಲೇ ಮಾತನಾಡೂ ಗಿಳಿರಾಮ ಮಾಡ್ತಿದ್ದಾನೆ ಮಾತಿನಿಂದಲೇ ಜಾದು
ಸಾಧು ಶ್ರೀನಾಥ್​
|

Updated on: Nov 22, 2019 | 7:23 AM

Share

ಮಡಿಕೇರಿ: ಪ್ರಾಣಿ-ಪಕ್ಷಿ ಸಾಕೋದು ಅಂದ್ರೆ ಎಲ್ಲರಿಗೂ ಪ್ರೀತಿ. ಅದ್ರಲ್ಲೂ ಮನೆಯಲ್ಲಿ ಮಕ್ಕಳಿದ್ದರೆ ಒಂದು ಸಾಕು ಪ್ರಾಣಿಗೆ ಜಾಗ ಕೊಡಲೇಬೇಕು. ಇಷ್ಟೆಲ್ಲಾ ಮುದ್ದು ಮಾಡುವ ಸಾಕು ಪ್ರಾಣಿಗಳು ಮಾತಾಡಲು ಶುರು ಮಾಡಿದ್ರೆ ಹೇಗಿರುತ್ತೆ? ಇದೇ ರೀತಿ ಮಡಿಕೇರಿಯಲ್ಲೂ ಮಾತನಾಡುವ ಗಿಳಿ ಇದೆ. ಗಿಳಿರಾಮನ ಮಾತಿಗೆ ಎಲ್ಲರೂ ಫಿದಾ ಆಗಿದ್ದಾರೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟದಲ್ಲಿ ಮಾತನಾಡುವ ಗಿಳಿ ಇದೆ. ಅದು ಮನೆಗೆ ಬಂದವರನ್ನ ಮಾತನಾಡಿಸುತ್ತಾ, ಕುಶಲೋಪರಿ ವಿಚಾರಿಸೋ ಗಿಳಿರಾಮ. ಪಂಜರ ಸೇರಿದ್ರೂ ಬೇಸರ ಮಾಡಿಕೊಳ್ಳದೆ ಖುಷಿಯಾಗಿರೋ ಹಕ್ಕಿ. ಆದರೆ ಈ ಗಿಳಿ ಶಾಸ್ತ್ರ ಹೇಳೋ ಗಿಳಿಯಲ್ಲ, ಆಟೋ ಚಾಲಕರೊಬ್ಬರ ಮನೆಯಲ್ಲಿ ಹ್ಯಾಪಿಯಾಗಿ ಬದುಕುತ್ತಿರೋ ಪ್ಯಾರೋಟ್.

ಮಾತನಾಡುವ ಗಿಳಿಯ ಹೆಸರು ರಾಮು, ಚಿಕ್ಕಂದಿನಿಂದ್ಲೇ ಜನರ ಜತೆ ಬೆಳೆದ ಮುದ್ದಾದ ಗಿಳಿ ನೋಡ ನೋಡುತ್ತಿದ್ದಂತೆ ಮಾತು ಕಲಿತುಬಿಟ್ಟಿದೆ. ಮನೆ ಮಕ್ಕಳಾದ ಚಾಯಾಳನ್ನ ಚಾಯಕ್ಕಾ ಅಂತಾ ಹಾಗೇ ಹರ್ಷನನ್ನ ಹರ್ಷಾ ಎಂದು ಮುದ್ದಾಗಿ ಕರೆಯುತ್ತೆ. ಊಟ ಆಯ್ತಾ ಅವ್ವಾ , ಅಂತಾ ಮನೆಯ ಒಡತಿಯನ್ನೂ ಮಾತನಾಡಿಸುತ್ತೆ. ಪುಟಾಣಿ ಮರಿಯಿದ್ದಾಗಲೇ ಗಿಳಿಯನ್ನ ತಂದು ಸಾಕಿದ ಆಟೋ ಚಾಲಕ ಸತೀಶ್, ಈಗಲೂ ಗಿಳಿಗೆ ಆಸರೆ ನೀಡಿದ್ದಾರೆ. ಸದ್ಯ ಈ ಗಿಳಿರಾಮನಿಗೆ 5 ವರ್ಷ ವಯಸ್ಸು.

ಮನೆಯಲ್ಲಿ ಮಾತನಾಡೋದನ್ನ ಗಮನಿಸಿಯೇ ಗಿಳಿ ತೊದಲು ಮಾತುಗಳನ್ನ ಕಲಿತುಬಿಟ್ಟಿದೆ. ಹೆಸರು ಹೇಳು ಎಂದರೆ ಪ್ರತಿಕ್ರಿಯಿಸೋ ಗಿಳಿ, ನಿತ್ಯ ಮನೆಯವರೊಂದಿಗೆ ಕುಳಿತು ಟಿವಿಯನ್ನೂ ನೋಡುತ್ತೆ. ಮನೆಗೆ ಯಾರಾದ್ರು ಹೊಸಬರು ಬಂದ್ರೆ ಸಾಕು, ತಕ್ಷಣ ಯಾರೋ ಬಂದ್ರು ಅಂತಾ ಹೇಳುವಷ್ಟು ಬುದ್ಧಿಶಕ್ತಿ ಹೊಂದಿದೆ. ಇನ್ನು ಡ್ಯಾನ್ಸ್ ಮಾಡೋದ್ರಲ್ಲೂ ಈ ಗಿಳಿ ಯಾರಿಗೂ ಕಮ್ಮಿ ಇಲ್ಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ