AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೇ ಮಾತನಾಡೂ ಗಿಳಿರಾಮ ಮಾಡ್ತಿದ್ದಾನೆ ಮಾತಿನಿಂದಲೇ ಜಾದು

ಮಡಿಕೇರಿ: ಪ್ರಾಣಿ-ಪಕ್ಷಿ ಸಾಕೋದು ಅಂದ್ರೆ ಎಲ್ಲರಿಗೂ ಪ್ರೀತಿ. ಅದ್ರಲ್ಲೂ ಮನೆಯಲ್ಲಿ ಮಕ್ಕಳಿದ್ದರೆ ಒಂದು ಸಾಕು ಪ್ರಾಣಿಗೆ ಜಾಗ ಕೊಡಲೇಬೇಕು. ಇಷ್ಟೆಲ್ಲಾ ಮುದ್ದು ಮಾಡುವ ಸಾಕು ಪ್ರಾಣಿಗಳು ಮಾತಾಡಲು ಶುರು ಮಾಡಿದ್ರೆ ಹೇಗಿರುತ್ತೆ? ಇದೇ ರೀತಿ ಮಡಿಕೇರಿಯಲ್ಲೂ ಮಾತನಾಡುವ ಗಿಳಿ ಇದೆ. ಗಿಳಿರಾಮನ ಮಾತಿಗೆ ಎಲ್ಲರೂ ಫಿದಾ ಆಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟದಲ್ಲಿ ಮಾತನಾಡುವ ಗಿಳಿ ಇದೆ. ಅದು ಮನೆಗೆ ಬಂದವರನ್ನ ಮಾತನಾಡಿಸುತ್ತಾ, ಕುಶಲೋಪರಿ ವಿಚಾರಿಸೋ ಗಿಳಿರಾಮ. ಪಂಜರ ಸೇರಿದ್ರೂ ಬೇಸರ ಮಾಡಿಕೊಳ್ಳದೆ ಖುಷಿಯಾಗಿರೋ ಹಕ್ಕಿ. […]

ಕನ್ನಡದಲ್ಲೇ ಮಾತನಾಡೂ ಗಿಳಿರಾಮ ಮಾಡ್ತಿದ್ದಾನೆ ಮಾತಿನಿಂದಲೇ ಜಾದು
ಸಾಧು ಶ್ರೀನಾಥ್​
|

Updated on: Nov 22, 2019 | 7:23 AM

Share

ಮಡಿಕೇರಿ: ಪ್ರಾಣಿ-ಪಕ್ಷಿ ಸಾಕೋದು ಅಂದ್ರೆ ಎಲ್ಲರಿಗೂ ಪ್ರೀತಿ. ಅದ್ರಲ್ಲೂ ಮನೆಯಲ್ಲಿ ಮಕ್ಕಳಿದ್ದರೆ ಒಂದು ಸಾಕು ಪ್ರಾಣಿಗೆ ಜಾಗ ಕೊಡಲೇಬೇಕು. ಇಷ್ಟೆಲ್ಲಾ ಮುದ್ದು ಮಾಡುವ ಸಾಕು ಪ್ರಾಣಿಗಳು ಮಾತಾಡಲು ಶುರು ಮಾಡಿದ್ರೆ ಹೇಗಿರುತ್ತೆ? ಇದೇ ರೀತಿ ಮಡಿಕೇರಿಯಲ್ಲೂ ಮಾತನಾಡುವ ಗಿಳಿ ಇದೆ. ಗಿಳಿರಾಮನ ಮಾತಿಗೆ ಎಲ್ಲರೂ ಫಿದಾ ಆಗಿದ್ದಾರೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟದಲ್ಲಿ ಮಾತನಾಡುವ ಗಿಳಿ ಇದೆ. ಅದು ಮನೆಗೆ ಬಂದವರನ್ನ ಮಾತನಾಡಿಸುತ್ತಾ, ಕುಶಲೋಪರಿ ವಿಚಾರಿಸೋ ಗಿಳಿರಾಮ. ಪಂಜರ ಸೇರಿದ್ರೂ ಬೇಸರ ಮಾಡಿಕೊಳ್ಳದೆ ಖುಷಿಯಾಗಿರೋ ಹಕ್ಕಿ. ಆದರೆ ಈ ಗಿಳಿ ಶಾಸ್ತ್ರ ಹೇಳೋ ಗಿಳಿಯಲ್ಲ, ಆಟೋ ಚಾಲಕರೊಬ್ಬರ ಮನೆಯಲ್ಲಿ ಹ್ಯಾಪಿಯಾಗಿ ಬದುಕುತ್ತಿರೋ ಪ್ಯಾರೋಟ್.

ಮಾತನಾಡುವ ಗಿಳಿಯ ಹೆಸರು ರಾಮು, ಚಿಕ್ಕಂದಿನಿಂದ್ಲೇ ಜನರ ಜತೆ ಬೆಳೆದ ಮುದ್ದಾದ ಗಿಳಿ ನೋಡ ನೋಡುತ್ತಿದ್ದಂತೆ ಮಾತು ಕಲಿತುಬಿಟ್ಟಿದೆ. ಮನೆ ಮಕ್ಕಳಾದ ಚಾಯಾಳನ್ನ ಚಾಯಕ್ಕಾ ಅಂತಾ ಹಾಗೇ ಹರ್ಷನನ್ನ ಹರ್ಷಾ ಎಂದು ಮುದ್ದಾಗಿ ಕರೆಯುತ್ತೆ. ಊಟ ಆಯ್ತಾ ಅವ್ವಾ , ಅಂತಾ ಮನೆಯ ಒಡತಿಯನ್ನೂ ಮಾತನಾಡಿಸುತ್ತೆ. ಪುಟಾಣಿ ಮರಿಯಿದ್ದಾಗಲೇ ಗಿಳಿಯನ್ನ ತಂದು ಸಾಕಿದ ಆಟೋ ಚಾಲಕ ಸತೀಶ್, ಈಗಲೂ ಗಿಳಿಗೆ ಆಸರೆ ನೀಡಿದ್ದಾರೆ. ಸದ್ಯ ಈ ಗಿಳಿರಾಮನಿಗೆ 5 ವರ್ಷ ವಯಸ್ಸು.

ಮನೆಯಲ್ಲಿ ಮಾತನಾಡೋದನ್ನ ಗಮನಿಸಿಯೇ ಗಿಳಿ ತೊದಲು ಮಾತುಗಳನ್ನ ಕಲಿತುಬಿಟ್ಟಿದೆ. ಹೆಸರು ಹೇಳು ಎಂದರೆ ಪ್ರತಿಕ್ರಿಯಿಸೋ ಗಿಳಿ, ನಿತ್ಯ ಮನೆಯವರೊಂದಿಗೆ ಕುಳಿತು ಟಿವಿಯನ್ನೂ ನೋಡುತ್ತೆ. ಮನೆಗೆ ಯಾರಾದ್ರು ಹೊಸಬರು ಬಂದ್ರೆ ಸಾಕು, ತಕ್ಷಣ ಯಾರೋ ಬಂದ್ರು ಅಂತಾ ಹೇಳುವಷ್ಟು ಬುದ್ಧಿಶಕ್ತಿ ಹೊಂದಿದೆ. ಇನ್ನು ಡ್ಯಾನ್ಸ್ ಮಾಡೋದ್ರಲ್ಲೂ ಈ ಗಿಳಿ ಯಾರಿಗೂ ಕಮ್ಮಿ ಇಲ್ಲ.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?