AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಮನವಿ ತಿರಸ್ಕರಿಸಿದ CWRC: ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದ ಡಿಕೆ ಶಿವಕುಮಾರ್

ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್​ಸಿ ಆದೇಶ ಹೊರಸಿದ್ದು, ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡಿನ ಮನವಿಯನ್ನು ಸಮಿತಿ ತಿರಸ್ಕರಿಸಿದ್ದು ಸಂತಸವಾಗಿದೆ ಎಂದಿದ್ದಾರೆ.

ತಮಿಳುನಾಡು ಮನವಿ ತಿರಸ್ಕರಿಸಿದ CWRC: ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್Image Credit source: PTI
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on: Sep 26, 2023 | 7:11 PM

Share

ಬೆಂಗಳೂರು, ಸೆ.26: ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ಕಾವೇರಿ ನೀರು (Cauvery Water) ಹರಿಸುವಂತೆ ಸಿಡಬ್ಲ್ಯೂಆರ್​ಸಿ (CWRC) ಆದೇಶ ಹೊರಸಿದ್ದು, ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡಿನ ಮನವಿಯನ್ನು ಸಮಿತಿ ತಿರಸ್ಕರಿಸಿದ್ದು ಸಂತಸವಾಗಿದೆ. ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದರು.

ತಮಿಳುನಾಡಿಗೆ ಮಾಮೂಲಿ ಎರಡು ಸಾವಿರ ಕ್ಯೂಸೆಕ್ ನೀರು ಹೋಗುತ್ತಿರುತ್ತದೆ. ಅದರ ಜೊತೆ ಇನ್ನೊಂದು ಅಥವಾ ಎರಡು ಸಾವಿರ ಕ್ಯೂಸೆಕ್ ಹರಿಸಬೇಕಾಗುತ್ತದೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಚೆನ್ನಾಗಿದೆ. ಹೀಗಾಗಿ ಸಮಸ್ಯೆಯಿಲ್ಲ ಎಂದರು.

ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಹಾನಿಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಶಾಸಕರು ಸೇರಿದಂತೆ ಯಾರೇ ಹಾನಿ ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ಬಂದ್ ವಿಚಾರವಾಗಿ ಮಾತನಾಡಿದ ಅವರು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋವು, ದುಗುಡ ವ್ಯಕ್ತಪಡಿಸಿದ್ದಾರೆ. ಇವತ್ತು ಎಲ್ಲವೂ ಶಾಂತಿಯುತವಾಗಿ ನಡೆದಿದೆ. ಇನ್ನು ಮುಂದೆ ಬಂದ್ ಅವಶ್ಯಕತೆ ಇಲ್ಲ. ಕೋರ್ಟ್ ಸಹ ಅನುಮತಿ ಕೊಡುವುದಿಲ್ಲ ಎಂದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಆದೇಶ, ಯಾರು ಏನಂದ್ರು?

ಖಂಡಿತ ಮೇಕೆದಾಟು ಇದಕ್ಕೆ ಪರಿಹಾರ. ರಾಜ್ಯದ ಜನತೆ ಹಾಗೂ ತಮಿಳುನಾಡು ಜನತೆಗೆ ಮನದಟ್ಟು ಮಾಡಿಕೊಡಬೇಕಿದೆ ಎಂದ ಹೇಳಿದ ಡಿಕೆ ಶಿವಕುಮಾರ್, ಎಷ್ಟಾದರೂ ಡ್ಯಾಮ್ ಕಟ್ಟಿಕೊಳ್ಳಲಿ, ನಿಮಗೆ 177 ಟಿಎಂಸಿ ನೀರು ಕೊಡಬೇಕು. ಕೊಡುತ್ತಾರೆ. ಯಾಕೆ ಅಡಚಣೆ ಮಾಡುತ್ತೀರಾ ಎಂದು ಮೊನ್ನೆ ಕೋರ್ಟ್ ತನ್ನ ಪ್ರೊಸಿಡಿಂಗ್ಸ್​ನಲ್ಲಿ ಹೇಳಿದ್ದಾಗಿ ತಿಳಿಸಿದರು.

ಮೇಕೆದಾಟನ್ನು ಕನಕಪುರದವರು ಉಪಯೋಗಿಸಿಕೊಳ್ಳುತ್ತಾರೆ ಎಂದು ಯಾರೋ ಹೇಳುತ್ತಿದ್ದರು. ಮೇಕೆದಾಟು ಇರೋದೆ ತಮಿಳುನಾಡು ಗಡಿಯಲ್ಲಿ. ಮೇಕೆದಾಟು ಮಾಡುವುದರಿಂದ ಕಬನಿ, ನೇತ್ರಾವತಿ, ಬೆಂಗಳೂರು ಕುಡಿಯುವ ನೀರಿಗೆ ಅನುಕೂಲ ಆಗಲಿದೆ. ಜೊತೆಗೆ ತಮಿಳುನಾಡುಗೂ ಅನುಕೂಲ ಆಗಲಿದ ಎಂದರು.

ರಾಜಕೀಯ ಟೀಕೆಗಳ ವಿಚಾರವಾಗಿ ಮಾತನಾಡಿದ ಡಿಸಿಎಂ, ನಾನು ಟೀಕೆ ಮಾಡಬೇಡಿ ಎಂದು ಹೇಳಲು ಆಗುತ್ತಾ? ವಿಪಕ್ಷಗಳ ಸರ್ವೈವ್ ಆಗಬೇಕಲ್ಲಾ, ಅದಕ್ಕೆ ಬೇಜಾರ್ ಮಾಡಿಕೊಳ್ಳುವುದಿಲ್ಲ. ವಿಪಕ್ಷಗಳ ಬಾಯಿ ಮುಚ್ಚಿಸಲು ನಾವು ತಯಾರಿಲ್ಲ. ಪ್ರಜಾಪ್ರಭುತ್ವದಲ್ಲಿ ಅವರಿಗೆ ಹಕ್ಕಿದೆ. ಅಧಿಕಾರ ಇರುವುದಕ್ಕೆ ಮಾತಾಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!