AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಮನವಿ ತಿರಸ್ಕರಿಸಿದ CWRC: ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದ ಡಿಕೆ ಶಿವಕುಮಾರ್

ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯೂಆರ್​ಸಿ ಆದೇಶ ಹೊರಸಿದ್ದು, ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡಿನ ಮನವಿಯನ್ನು ಸಮಿತಿ ತಿರಸ್ಕರಿಸಿದ್ದು ಸಂತಸವಾಗಿದೆ ಎಂದಿದ್ದಾರೆ.

ತಮಿಳುನಾಡು ಮನವಿ ತಿರಸ್ಕರಿಸಿದ CWRC: ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್Image Credit source: PTI
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Sep 26, 2023 | 7:11 PM

ಬೆಂಗಳೂರು, ಸೆ.26: ತಮಿಳುನಾಡಿಗೆ ಮತ್ತೆ 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ಕಾವೇರಿ ನೀರು (Cauvery Water) ಹರಿಸುವಂತೆ ಸಿಡಬ್ಲ್ಯೂಆರ್​ಸಿ (CWRC) ಆದೇಶ ಹೊರಸಿದ್ದು, ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡಿನ ಮನವಿಯನ್ನು ಸಮಿತಿ ತಿರಸ್ಕರಿಸಿದ್ದು ಸಂತಸವಾಗಿದೆ. ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದರು.

ತಮಿಳುನಾಡಿಗೆ ಮಾಮೂಲಿ ಎರಡು ಸಾವಿರ ಕ್ಯೂಸೆಕ್ ನೀರು ಹೋಗುತ್ತಿರುತ್ತದೆ. ಅದರ ಜೊತೆ ಇನ್ನೊಂದು ಅಥವಾ ಎರಡು ಸಾವಿರ ಕ್ಯೂಸೆಕ್ ಹರಿಸಬೇಕಾಗುತ್ತದೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಚೆನ್ನಾಗಿದೆ. ಹೀಗಾಗಿ ಸಮಸ್ಯೆಯಿಲ್ಲ ಎಂದರು.

ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಹಾನಿಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಶಾಸಕರು ಸೇರಿದಂತೆ ಯಾರೇ ಹಾನಿ ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ಬಂದ್ ವಿಚಾರವಾಗಿ ಮಾತನಾಡಿದ ಅವರು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋವು, ದುಗುಡ ವ್ಯಕ್ತಪಡಿಸಿದ್ದಾರೆ. ಇವತ್ತು ಎಲ್ಲವೂ ಶಾಂತಿಯುತವಾಗಿ ನಡೆದಿದೆ. ಇನ್ನು ಮುಂದೆ ಬಂದ್ ಅವಶ್ಯಕತೆ ಇಲ್ಲ. ಕೋರ್ಟ್ ಸಹ ಅನುಮತಿ ಕೊಡುವುದಿಲ್ಲ ಎಂದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಆದೇಶ, ಯಾರು ಏನಂದ್ರು?

ಖಂಡಿತ ಮೇಕೆದಾಟು ಇದಕ್ಕೆ ಪರಿಹಾರ. ರಾಜ್ಯದ ಜನತೆ ಹಾಗೂ ತಮಿಳುನಾಡು ಜನತೆಗೆ ಮನದಟ್ಟು ಮಾಡಿಕೊಡಬೇಕಿದೆ ಎಂದ ಹೇಳಿದ ಡಿಕೆ ಶಿವಕುಮಾರ್, ಎಷ್ಟಾದರೂ ಡ್ಯಾಮ್ ಕಟ್ಟಿಕೊಳ್ಳಲಿ, ನಿಮಗೆ 177 ಟಿಎಂಸಿ ನೀರು ಕೊಡಬೇಕು. ಕೊಡುತ್ತಾರೆ. ಯಾಕೆ ಅಡಚಣೆ ಮಾಡುತ್ತೀರಾ ಎಂದು ಮೊನ್ನೆ ಕೋರ್ಟ್ ತನ್ನ ಪ್ರೊಸಿಡಿಂಗ್ಸ್​ನಲ್ಲಿ ಹೇಳಿದ್ದಾಗಿ ತಿಳಿಸಿದರು.

ಮೇಕೆದಾಟನ್ನು ಕನಕಪುರದವರು ಉಪಯೋಗಿಸಿಕೊಳ್ಳುತ್ತಾರೆ ಎಂದು ಯಾರೋ ಹೇಳುತ್ತಿದ್ದರು. ಮೇಕೆದಾಟು ಇರೋದೆ ತಮಿಳುನಾಡು ಗಡಿಯಲ್ಲಿ. ಮೇಕೆದಾಟು ಮಾಡುವುದರಿಂದ ಕಬನಿ, ನೇತ್ರಾವತಿ, ಬೆಂಗಳೂರು ಕುಡಿಯುವ ನೀರಿಗೆ ಅನುಕೂಲ ಆಗಲಿದೆ. ಜೊತೆಗೆ ತಮಿಳುನಾಡುಗೂ ಅನುಕೂಲ ಆಗಲಿದ ಎಂದರು.

ರಾಜಕೀಯ ಟೀಕೆಗಳ ವಿಚಾರವಾಗಿ ಮಾತನಾಡಿದ ಡಿಸಿಎಂ, ನಾನು ಟೀಕೆ ಮಾಡಬೇಡಿ ಎಂದು ಹೇಳಲು ಆಗುತ್ತಾ? ವಿಪಕ್ಷಗಳ ಸರ್ವೈವ್ ಆಗಬೇಕಲ್ಲಾ, ಅದಕ್ಕೆ ಬೇಜಾರ್ ಮಾಡಿಕೊಳ್ಳುವುದಿಲ್ಲ. ವಿಪಕ್ಷಗಳ ಬಾಯಿ ಮುಚ್ಚಿಸಲು ನಾವು ತಯಾರಿಲ್ಲ. ಪ್ರಜಾಪ್ರಭುತ್ವದಲ್ಲಿ ಅವರಿಗೆ ಹಕ್ಕಿದೆ. ಅಧಿಕಾರ ಇರುವುದಕ್ಕೆ ಮಾತಾಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ