AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲೂ ಸದ್ದು ಮಾಡಿದ ಸೈಬರ್ ಕ್ರೈಂ: ಗೃಹ ಸಚಿವ ಪರಮೇಶ್ವರ್ ಕೊಟ್ರು ಆಘಾತಕಾರಿ ಮಾಹಿತಿ

ಸೈಬರ್ ಕ್ರೈಂ ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಎಷ್ಟು ಹೆಚ್ಚಾಗುತ್ತಿದೆ ಎಂಬುದು ವಿಧಾನಸಭೆ ಅಧಿವೇಶನದಲ್ಲೂ ಮಂಗಳವಾರ ಚರ್ಚೆಗೆ ಗ್ರಾಸವಾಯಿತು. ಈ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಂಕಿಅಂಶಗಳನ್ನು ನೀಡಿ, ಸೈಬರ್ ಅಪರಾಧಗಳ ತಡೆಗೆ ಮತ್ತು ಅಪರಾಧಿಗಳನ್ನು ಮಟ್ಟಹಾಕಲು ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡಿದರು.

ವಿಧಾನಸಭೆಯಲ್ಲೂ ಸದ್ದು ಮಾಡಿದ ಸೈಬರ್ ಕ್ರೈಂ: ಗೃಹ ಸಚಿವ ಪರಮೇಶ್ವರ್ ಕೊಟ್ರು ಆಘಾತಕಾರಿ ಮಾಹಿತಿ
ಸಾಂದರ್ಭಿಕ ಚಿತ್ರ
ಕಿರಣ್​ ಹನಿಯಡ್ಕ
| Edited By: |

Updated on:Dec 10, 2025 | 7:31 AM

Share

ಬೆಳಗಾವಿ, ಡಿಸೆಂಬರ್ 10: ಪ್ರತಿದಿನ ಸಹಸ್ರಾರು ಜನ ಸೈಬರ್ ವಂಚನೆಗೆ (Cyber Fraud) ತುತ್ತಾಗುತ್ತಿದ್ದು, ಮಂಗಳವಾರ ಇದೇ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಶಾಸಕ ಸಿಮೆಂಟ್ ಮಂಜು ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ದೇಶ-ವಿದೇಶಗಳಲ್ಲಿ ಇಂದು ಆನ್‌ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಕಳ್ಳತನ, ಸುಲಿಗೆ, ದರೋಡೆ, ಡಕಾಯಿತಿ ಪ್ರಕರಣಗಳಿಗಿಂತ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.

ಕರ್ನಾಟಕದಲ್ಲಿ 2023 ರ ನವೆಂಬರ್ 15 ರಿಂದ ಈವರೆಗೆ 57,733 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 5,474 ಕೋಟಿ ರೂ. ವಂಚನೆ ಎಸಗಲಾಗಿದೆ. ಈ ಪೈಕಿ, 10,717 ಪ್ರಕರಣಗಳನ್ನು ಪತ್ತೆ ಹಚ್ಚಿ 627 ಕೋಟಿ ರೂ. ವಸೂಲು ಮಾಡಲಾಗಿದೆ ಎಂದು ತಿಳಿಸಿದರು.

ಆನ್​ಲೈನ್ ಗೇಮಿಂಗ್ ನಿಷೇಧದ ಬಗ್ಗೆ ಸಚಿವರು ಹೇಳಿದ್ದೇನು?

ಆನ್‌ಲೈನ್‌ ಗೇಮ್ಸ್ ನಿರ್ಬಂಧಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಾಂತ್ರಿಕ ಅಂಶಗಳನ್ನು ಸೇರ್ಪಡೆ ಮಾಡಲಾಗಿತ್ತು. ಇದರ ವಿರುದ್ಧ ಇಂಡಿಯನ್ ಗೇಮಿಂಗ್ ಫೆಡರೇಷನ್ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದು, ಸರ್ಕಾರದ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಇದೇ 19ಕ್ಕೆ ವಿಚಾರಣೆಗೆ ಬರಲಿದೆ ಎಂದು ಪರಮೇಶ್ವರ್ ತಿಳಿಸಿದರು.

ಸೈಬ‌ರ್ ಅಪರಾಧ ಸಂಭವಿಸಿದಾಗ ತುರ್ತಾಗಿ ತಡೆಯಲು, ಗೃಹ ಇಲಾಖೆಯಿಂದಲೇ ಸಹಾಯವಾಣಿ ಆರಂಭಿಸಬೇಕು ಎಂಬ ಸಿಮೆಂಟ್ ಮಂಜು ಒತ್ತಾಯಕ್ಕೆ ಉತ್ತರಿಸಿದ ಪರಮೇಶ್ವರ್, ಈಗಾಗಲೇ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಪ್ರತ್ಯೇಕವಾಗಿ ಡಿಜಿಪಿ ಶ್ರೇಣಿ ಅಧಿಕಾರಿಯ ನೇತೃತ್ವದಲ್ಲಿ ವಿಭಾಗವನ್ನೇ ರಚಿಸಿರುವುದು ದೇಶದಲ್ಲೇ ಪ್ರಥಮವೆನಿಸಿದೆ. ರಾಜ್ಯದಲ್ಲಿ 43 ಸೈಬರ್ ಅಪರಾಧ ತನಿಖಾ ಠಾಣೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೇ ಅಸಮಾಧಾನ, ಶಾಸಕಾಂಗ ಸಭೆಯ ಇನ್​​ಸೈಡ್​​ ಮಾಹಿತಿ ಇಲ್ಲಿದೆ

ಅದೇನೆ ಇರಲಿ, ಇವತ್ತು ಮೊಬೈಲ್ ಇಲ್ಲದೆ ಏನೂ ಇಲ್ಲ. ವ್ಯಾಪಾರ, ವಹಿವಾಟು ಸೇರಿ ಬಹುತೇಕ ಹಣಕಾಸು ವ್ಯವಹಾರಗಳನ್ನು ಆನ್‌ಲೈನ್‌ನಲ್ಲೇ ನಡೆಸಲಾಗುತ್ತದೆ. ಹೀಗಿರುವಾಗ ಸೈಬರ್‌ ಕ್ರೈಂ ಕೂಡ ಪೆಡಂಭೂತದಂತೆ ಕಾಡುತ್ತಿದೆ. ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಸರ್ಕಾರ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Wed, 10 December 25

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ