AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ

ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ ಸೇವೆ ಆರಂಭದಿಂದಾಗಿ ಈ ಸಾಧನೆ ಸಾಧ್ಯವಾಗಿದ್ದು, ಡಿಜಿಟಲ್​​ ವಂಚಕರಿಗೆ ಕರ್ನಾಟಕ ಪೊಲೀಸರು ಸಿಂಹಸ್ವಪ್ನವಾಗಿ ಮಾರ್ಪಟ್ಟಿದ್ದಾರೆ.

ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ
ಸೈಬರ್​​ ಕ್ರೈಂ​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Dec 05, 2025 | 4:58 PM

Share

ಬೆಂಗಳೂರು, ಡಿಸೆಂಬರ್​​ 05: ದೇಶದಲ್ಲಿ ಸೈಬರ್​​ ಕ್ರೈಂ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಬಹುತೇಕ ವಿದ್ಯಾವಂತರೇ ಇಂತಹ ಕೇಸ್​​ಗಳಲ್ಲಿ ಸಂತ್ರಸ್ತರಾಗುತ್ತಿದ್ದು, ಡಿಜಿಟಲ್​​ ಅರೆಸ್ಟ್​​ ಮತ್ತು ಟ್ರೇಡಿಂಗ್​​ ಹೆಸರಿನಲ್ಲಿ ವಂಚನೆಗೆ ಒಳಗಾಗುತ್ತಿದ್ದಾರೆ. ಈ ನಡುವೆ ಕರ್ನಾಟಕದಲ್ಲಿ ಡಿಜಿಟಲ್​ ವಂಚನೆ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಪರಮೇಶ್ವರ್​​ ಅವರೇ ಅಂಕಿ-ಅಂಶ ಬಿಚ್ಚಿಟ್ಟಿದ್ದು, 2025ರಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ ಉಲ್ಲೇಖಿಸಿದ್ದಾರೆ.

ಹೆಚ್ಚುತ್ತಿರುವ ಸೈಬರ್​​ ಅಪರಾಧಗಳ ತಡೆಗೆ ದೇಶದಲ್ಲಿಯೇ ಮೊಟ್ಟ ಮೊದಲಬಾರಿಗೆ ಸೈಬರ್ ಕ್ರೈಮ್​ ವಿಭಾಗಕ್ಕೆ ಕರ್ನಾಟಕದಲ್ಲಿ ಡಿಜಿಪಿ ನೇಮಕ ಮಾಡಲಾಗಿದೆ. ಸೆನ್​​ ಠಾಣೆಗಳನ್ನು ಮಾಡಿದ ಬಳಿಕ ಆನ್​ಲೈನ್​​ ವಂಚನೆಗಳ ಬಗ್ಗೆ ದಾಖಲಾಗುತ್ತಿರುವ ಕೇಸ್​​ಗಳೂ ಹೆಚ್ಚಾಗಿವೆ. ಅಮೆರಿಕದಲ್ಲಿ ಇದ್ದವರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರ ಅಕೌಂಟ್​ನಿಂದ ಹಣ ತೆಗೆಯುತ್ತಿದ್ದಂಹ ಡಿಜಿಟಲ್​​ ವಂಚಕರನ್ನೂ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಇದೆಲ್ಲದರ ಪರಿಣಾಮವಾಗಿ ಪ್ರಸ್ತುತ ವರ್ಷ ರಾಜ್ಯದಲ್ಲಿ ಸೈಬರ್​ ಕ್ರೈಮ್​ ಪ್ರಕರಣಗಳು 13,000ಕ್ಕೆ ಇಳಿದಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಫೋನ್‌ನಲ್ಲಿ 1930 ಸಂಖ್ಯೆಯನ್ನು ಸೇವ್ ಮಾಡಿದ್ದೀರ? ಇದರಿಂದ ಏನು ಪ್ರಯೋಜನ?

ಯಾವ್ಯಾವ ವರ್ಷ ಎಷ್ಟು ಪ್ರಕರಣ?

ವರ್ಷ ಪ್ರಕರಣ
2022 12,550
2023 21,903
2024 21,995
2025 13,000

ಕಳೆದ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ ಸುಮಾರು 9 ಸಾವಿರದಷ್ಟು ಸೈಬರ್​​ ಅಪರಾಧ ಪ್ರಕರಣಗಳು ಇಳಿಕೆಯಾಗಿವೆ. ಆನ್​​ಲೈನ್​​ ವಂಚನೆಗೆ ಒಳಗಾದ ಸಂತ್ರಸ್ತರು 1930 ಸಂಖ್ಯೆಗೆ ಸೈಬರ್ ಕ್ರೈಮ್ ದೂರುಗಳನ್ನು ನೀಡಬಹುದು. 66 ಸಿಬ್ಬಂದಿ ಈ ಕರೆಗಳನ್ನು ಸ್ವೀಕರಿಸುವ ಕೆಲಸ ಮಾಡುತ್ತಿದ್ದು,ಸೈಬರ್​​ ಕ್ರೈಮ್​​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​​ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:17 pm, Fri, 5 December 25

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್