AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ

ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಗೆ ಸುಳಿಗಾಳಿ ಬೀಸಿರುವುದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ನೆರೆಯ ರಾಜ್ಯ ಕರ್ನಾಟಕದ ಮೇಲೂ ಬಿದ್ದಿದ್ದು, ಇಂದು ಹಲವೆಡೆ ಮಳೆಯಾಗಿದೆ. ನಾಳೆಯೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ
ಶ್ರೀಲಂಕಾದಿಂದ ತಮಿಳುನಾಡಿಗೆ ಸುಳಿಗಾಳಿ; ಕರ್ನಾಟಕದ ಹಲವೆಡೆ ನಾಳೆ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೂರು ದಿನ ಮಳೆ
Follow us
TV9 Web
| Updated By: Rakesh Nayak Manchi

Updated on: Jan 08, 2024 | 7:01 PM

ಬೆಂಗಳೂರು, ಜ.8: ಶ್ರೀಲಂಕಾದಿಂದ ತಮಿಳುನಾಡಿನ ಉತ್ತರ ಕರಾವಳಿಗೆ ಸುಳಿಗಾಳಿ ಬೀಸಿರುವುದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನೆರೆಯ ರಾಜ್ಯ ಕರ್ನಾಟಕದ (Karnataka Rain) ಮೇಲೂ ಇದರ ಪರಿಣಾಮ ಬೀರಿದೆ. ಇಂದು ರಾಜ್ಯಾದ ಕೆಲವೆಡೆ ಮಳೆಯಾಗಿದ್ದು, ನಾಳೆ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ (Bengaluru Rain) ಮಳೆಯಾಗಲಿದೆ.

ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ಮಂಡ್ಯ ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯಾಗಿದ್ದು, ನಾಳೆಯೂ ಇದು ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ವಾತಾವರಣ ಇದ್ದು, ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ಈ ಬಾರೀ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ದಾಖಲಾಗಿದ್ದು, 6.3 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ. ಕಳೆದ ಬಾರಿ 6 ಮಿ.ಮೀ ಮಳೆಯಯಾಗಿತ್ತು. ಅರೆಬಿಕ್ ಸಮುದ್ರದಲ್ಲಿ ಸುಳಿಗಾಳಿ ಬೀಸಿದ ಪರಿಣಾಮ ಇಂದು ಮತ್ತೆ ನಾಳೆ ಹಗುರ ಮಳೆಯಾಗಲಿದೆ. ಈ ತಿಂಗಳು ವಾಡಿಕೆಗಿಂತ ಶೇಕಡ 70ರಷ್ಟು ಹೆಚ್ಚು ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ಹೇಳಿದ್ದಾರೆ.

ನೆಲಮಂಗಲದಲ್ಲಿ ಮೋಡ ಮುಚ್ಚಿದ ವಾತವರಣ

ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮೋಡ ಕವಿದ ವಾತವರಣವಿದೆ. ಶೀತಗಾಳಿ ಜೋತೆ ಆಗಾಗ ತುಂತುರು ಮಳೆಯಾಗುತ್ತಿದ್ದು, 6 ಗಂಟೆಗೆ ಆನ್ ಅಗುತ್ತಿದ್ದ ಹೆದ್ದಾರಿ ಲೈಟ್ 4 ಗಂಟೆಯಿಂದಲೇ ಆನ್ ಆಗಿವೆ. ಮೋಡ ಕವಿದ ಹಿನ್ನೆಲೆ ಲೈಟ್ ಆನ್ ಮಾಡಿಕೊಂಡು ವಾಹನಗಳು ಸಂಚರಿಸುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತವಾಗುವ ಸಾಧ್ಯತೆ ಹಿನ್ನೆಲೆ ನೆಲಮಂಗಲ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ.

ವರದಿ: ಶಾಂತಮೂರ್ತಿ ಮತ್ತು ಬಿ ಮೂರ್ತಿ, ಟಿವಿ9 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ